ಭಗವಾನ್‌ಗೂ ಟಾರ್ಗೆಟ್‌; ವಿಚಾರಣೆ ವೇಳೆ ಬಾಯ್ಬಿಟ್ಟ ವಾಗ್ಮೋರೆ


Team Udayavani, Jun 14, 2018, 6:00 AM IST

parshuram-waghmare.jpg

ಬೆಂಗಳೂರು: ಗೌರಿ ಲಂಕೇಶ್‌ ಮಾತ್ರವಲ್ಲ, ಗಿರೀಶ್‌ ಕಾರ್ನಾಡ್‌, ಕೆ.ಎಸ್‌.ಭಗವಾನ್‌ ಸೇರಿದಂತೆ ಹಂತಕರ ಲಿಸ್ಟ್‌ನಲ್ಲಿ ಇನ್ನೂ ಹಲವಾರು ವಿಚಾರವಾದಿ ಹಾಗೂ ಚಿಂತಕರಿದ್ದರೇ? 

ಬಂಧಿತ ಗೌರಿ ಹತ್ಯೆ ಆರೋಪಿ ಪರಶುರಾಮ್‌ ವಾಗ್ಮೋರೆ ವಿಚಾರಣೆ ಸಂದರ್ಭದಲ್ಲಿ ನಮ್ಮ ಹಿಟ್‌ ಲಿಸ್ಟ್‌ನಲ್ಲಿ ಇನ್ನಷ್ಟು ವಿಚಾರವಾದಿಗಳಿದ್ದರು . ಗೌರಿ ಹತ್ಯೆಗೂ ಮೊದಲೇ ಸಾಹಿತಿ ಗಿರೀಶ್‌ ಕಾರ್ನಾಡ್‌ ಕೊಲೆಗೆ ಸಂಚು ರೂಪಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಗಿರೀಶ್‌ ಕಾರ್ನಾಡ್‌ ಟಾರ್ಗೆಟ್‌ ಕೈಬಿಡಲಾಯಿತು ಎಂದು ಹೇಳಿರುವುದಾಗಿ ತಿಳಿದು ಬಂದಿದೆ.

ಗಿರೀಶ್‌ ಕಾರ್ನಾಡ್‌ ಬಳಿಕ ಸಿ.ಎಸ್‌. ದ್ವಾರಕಾನಾಥ್‌, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ ಮತ್ತು ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ವಿಚಾರವಾದಿ ಕೆ.ಎಸ್‌.ಭಗವಾನ್‌ ಅವರನ್ನು ಹತ್ಯೆ ಮಾಡುವ ಯೋಜನೆ ರೂಪಿಸಿದ್ದರು ಎಂದು ವಿಚಾರಣೆಯಲ್ಲಿ ಬಯಲಾಗಿದೆ.

ಡಾ.ಎಂ.ಎಂ.ಕಲಬುರಗಿ ಆ ನಂತರ ಗೌರಿ ಲಂಕೇಶ್‌  ಹತ್ಯೆ ಪ್ರಕರಣಗಳು ನಡೆದಾಗ ರಾಜ್ಯದಲ್ಲಿ ಮತ್ತಷ್ಟು ವಿಚಾರವಾದಿಗಳ ಹತ್ಯೆಗೂ ಸಂಚು ರೂಪಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಪೊಲೀಸರು ಸಹ ಬಂಧಿತ ಆರೋಪಿಗಳ ವಿಚಾರಣೆ ಸಂದರ್ಭದಲ್ಲಿ  ಆ ಕುರಿತ ಮಾಹಿತಿ ಸಂಗ್ರಹಿಸಿದ್ದರು. ಇದೀಗ ಪರಶುರಾಮ್‌ ವಾಗ್ಮೋರೆ ಬಂಧನದ ನಂತರ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲಾಗುತ್ತಿವೆ. 

ವಿಧಾನಸಭೆ ಚುನಾವಣೆಗೂ ಮೊದಲೇ ಭಗವಾನ್‌ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಇದನ್ನು ಪರಶುರಾಮ್‌ ಕೂಡ ತಪ್ಪೊಪ್ಪಿಗೆ ಹೇಳಿಕೆಯಲ್ಲಿಯೂ ನೀಡಿದ್ದು, ಹೊಟ್ಟೆ ಮಂಜ ಬಂಧನವಾಗದಿದ್ದರೆ ಅದು ಕೂಡ ನಡೆದು ಹೋಗುತ್ತಿತ್ತು ಎಂದು ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.  ಒಟ್ಟಾರೆ, ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಶಂಕಿತ ರೂವಾರಿ ಪರಶುರಾಮ್‌ ವಾಗೊ¾àರೆ  ಬಂಧನದ ನಂತರ ಹೊರಬರುತ್ತಿರುವ ಮಾಹಿತಿಗಳು ರಾಜ್ಯದ ಪ್ರಗತಿಪರ ಹೋರಾಟಗಾರು, ಸಾಹಿತಿ, ಚಿಂತಕರ ವಲಯದಲ್ಲಿ ಆತಂಕ ಮೂಡಿಸಿದೆ.

ಈ ಮಧ್ಯೆ, ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಪರಶುರಾಮ್‌ ವಾಗ್ಮೋರೆ ಒಬ್ಬ ಧರ್ಮ ರಕ್ಷಕ ಎಂದು ವಿಜಯಪುರ ಶ್ರೀರಾಮಸೇನೆ ಸಂಚಾಲಕ ನೀಲಕಂಠ ಕಂದಗಲ್‌ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ವಾಗ್ಮೋರೆ ಭಾವಚಿತ್ರವನ್ನು ಹಾಕಿಕೊಂಡು ಶ್ರೀರಾಮ ಸೇನೆಯ ಸಂಚಾಲಕ ಪ್ರಕಟಿಸಿದ್ದು, ಮಾತೃ ಭೂಮಿಯ ರಕ್ಷಣೆಗಾಗಿ ಮುಡುಪಾಗಿದೆ ನನ್ನ ಪ್ರಾಣ. ಧರ್ಮಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಅದರಲ್ಲಿ ಬರೆಯಲಾಗಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.