ಭಗವಾನ್‌ಗೂ ಟಾರ್ಗೆಟ್‌; ವಿಚಾರಣೆ ವೇಳೆ ಬಾಯ್ಬಿಟ್ಟ ವಾಗ್ಮೋರೆ


Team Udayavani, Jun 14, 2018, 6:00 AM IST

parshuram-waghmare.jpg

ಬೆಂಗಳೂರು: ಗೌರಿ ಲಂಕೇಶ್‌ ಮಾತ್ರವಲ್ಲ, ಗಿರೀಶ್‌ ಕಾರ್ನಾಡ್‌, ಕೆ.ಎಸ್‌.ಭಗವಾನ್‌ ಸೇರಿದಂತೆ ಹಂತಕರ ಲಿಸ್ಟ್‌ನಲ್ಲಿ ಇನ್ನೂ ಹಲವಾರು ವಿಚಾರವಾದಿ ಹಾಗೂ ಚಿಂತಕರಿದ್ದರೇ? 

ಬಂಧಿತ ಗೌರಿ ಹತ್ಯೆ ಆರೋಪಿ ಪರಶುರಾಮ್‌ ವಾಗ್ಮೋರೆ ವಿಚಾರಣೆ ಸಂದರ್ಭದಲ್ಲಿ ನಮ್ಮ ಹಿಟ್‌ ಲಿಸ್ಟ್‌ನಲ್ಲಿ ಇನ್ನಷ್ಟು ವಿಚಾರವಾದಿಗಳಿದ್ದರು . ಗೌರಿ ಹತ್ಯೆಗೂ ಮೊದಲೇ ಸಾಹಿತಿ ಗಿರೀಶ್‌ ಕಾರ್ನಾಡ್‌ ಕೊಲೆಗೆ ಸಂಚು ರೂಪಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಗಿರೀಶ್‌ ಕಾರ್ನಾಡ್‌ ಟಾರ್ಗೆಟ್‌ ಕೈಬಿಡಲಾಯಿತು ಎಂದು ಹೇಳಿರುವುದಾಗಿ ತಿಳಿದು ಬಂದಿದೆ.

ಗಿರೀಶ್‌ ಕಾರ್ನಾಡ್‌ ಬಳಿಕ ಸಿ.ಎಸ್‌. ದ್ವಾರಕಾನಾಥ್‌, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ ಮತ್ತು ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ವಿಚಾರವಾದಿ ಕೆ.ಎಸ್‌.ಭಗವಾನ್‌ ಅವರನ್ನು ಹತ್ಯೆ ಮಾಡುವ ಯೋಜನೆ ರೂಪಿಸಿದ್ದರು ಎಂದು ವಿಚಾರಣೆಯಲ್ಲಿ ಬಯಲಾಗಿದೆ.

ಡಾ.ಎಂ.ಎಂ.ಕಲಬುರಗಿ ಆ ನಂತರ ಗೌರಿ ಲಂಕೇಶ್‌  ಹತ್ಯೆ ಪ್ರಕರಣಗಳು ನಡೆದಾಗ ರಾಜ್ಯದಲ್ಲಿ ಮತ್ತಷ್ಟು ವಿಚಾರವಾದಿಗಳ ಹತ್ಯೆಗೂ ಸಂಚು ರೂಪಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಪೊಲೀಸರು ಸಹ ಬಂಧಿತ ಆರೋಪಿಗಳ ವಿಚಾರಣೆ ಸಂದರ್ಭದಲ್ಲಿ  ಆ ಕುರಿತ ಮಾಹಿತಿ ಸಂಗ್ರಹಿಸಿದ್ದರು. ಇದೀಗ ಪರಶುರಾಮ್‌ ವಾಗ್ಮೋರೆ ಬಂಧನದ ನಂತರ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲಾಗುತ್ತಿವೆ. 

ವಿಧಾನಸಭೆ ಚುನಾವಣೆಗೂ ಮೊದಲೇ ಭಗವಾನ್‌ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಇದನ್ನು ಪರಶುರಾಮ್‌ ಕೂಡ ತಪ್ಪೊಪ್ಪಿಗೆ ಹೇಳಿಕೆಯಲ್ಲಿಯೂ ನೀಡಿದ್ದು, ಹೊಟ್ಟೆ ಮಂಜ ಬಂಧನವಾಗದಿದ್ದರೆ ಅದು ಕೂಡ ನಡೆದು ಹೋಗುತ್ತಿತ್ತು ಎಂದು ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.  ಒಟ್ಟಾರೆ, ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಶಂಕಿತ ರೂವಾರಿ ಪರಶುರಾಮ್‌ ವಾಗೊ¾àರೆ  ಬಂಧನದ ನಂತರ ಹೊರಬರುತ್ತಿರುವ ಮಾಹಿತಿಗಳು ರಾಜ್ಯದ ಪ್ರಗತಿಪರ ಹೋರಾಟಗಾರು, ಸಾಹಿತಿ, ಚಿಂತಕರ ವಲಯದಲ್ಲಿ ಆತಂಕ ಮೂಡಿಸಿದೆ.

ಈ ಮಧ್ಯೆ, ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಪರಶುರಾಮ್‌ ವಾಗ್ಮೋರೆ ಒಬ್ಬ ಧರ್ಮ ರಕ್ಷಕ ಎಂದು ವಿಜಯಪುರ ಶ್ರೀರಾಮಸೇನೆ ಸಂಚಾಲಕ ನೀಲಕಂಠ ಕಂದಗಲ್‌ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ವಾಗ್ಮೋರೆ ಭಾವಚಿತ್ರವನ್ನು ಹಾಕಿಕೊಂಡು ಶ್ರೀರಾಮ ಸೇನೆಯ ಸಂಚಾಲಕ ಪ್ರಕಟಿಸಿದ್ದು, ಮಾತೃ ಭೂಮಿಯ ರಕ್ಷಣೆಗಾಗಿ ಮುಡುಪಾಗಿದೆ ನನ್ನ ಪ್ರಾಣ. ಧರ್ಮಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಅದರಲ್ಲಿ ಬರೆಯಲಾಗಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. 

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.