ಜಡಿ ಮಳೆ, ಭೂಕುಸಿತ : ಬೆಂಗಳೂರು-ಮಂಗಳೂರು ರೈಲು ಸಂಚಾರ ರದ್ದು
Team Udayavani, Jun 14, 2018, 7:18 PM IST
ಮಂಗಳೂರು : ನಿರಂತರವಾಗಿ ಸುರಿಯುತ್ತಿರುವ ಜಡಿ ಮಳೆಯಿಂದಾಗಿ ಸುಬ್ರಹ್ಮಣ್ಯ – ಸಿರಿಬಾಗಿಲು ನಡುವೆ ರೈಲು ಹಳಿಯಲ್ಲಿ ಗುಡ್ಡ ಕುಸಿದು ಅಪಾರ ಪ್ರಮಾಣದ ಮಣ್ಣು ರಾಶಿ ಬಿದ್ದಿರುವ ಕಾರಣ ಬೆಂಗಳೂರು – ಮಂಗಳೂರು ನಡುವಿನ ರೈಲು ಸಂಚಾರ ರದ್ದಾಗಿದೆ.
ರೈಲು ಹಳಿಯ ಮೇಲೆ ಗುಡ್ಡ ಕುಸಿತದಿಂದಾಗಿ ಭಾರೀ ಪ್ರಮಾಣದ ಮಣ್ಣು ಬಿದ್ದಿರುವುದರಿಂದ ರೈಲು ಸಂಚಾರ ಅಸಾಧ್ಯವಾಗಿದೆ.
ಇಂದು ಬೆಳಗ್ಗೆ 10.50ರ ಹೊತ್ತಿಗೆ ಮಂಗಳೂರಿನಿಂದ ಹೊರಟಿದ್ದ ಕಾರವಾರ – ಬೆಂಗಳೂರು ರೈಲು ಸುಬ್ರಹ್ಮಣ್ಯದ ವರೆಗೆ ಕ್ರಮಿಸಿ ಅನಂತರ ಮುಂದಿನ ಯಾನವನ್ನು ರದ್ದುಗೊಳಿಸಿತು.
ಇದೇ ರೀತಿ ಬೆಳಗ್ಗೆ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ರೈಲು ಸಕಲೇಶಪುರದ ವರೆಗೆ ಮಾತ್ರವೇ ಬಂದು ಅನಂತರದ ತನ್ನ ಯಾನವನ್ನು ರದ್ದುಗೊಳಿಸಿತು.
ರೈಲು ಹಳಿಯ ಮೇಲೆ ರಾಶಿ ಬಿದ್ದಿರುವ ಮಣ್ಣನ್ನು ತೆರವುಗೊಳಿಸಲು ಜೆಸಿಬಿ ಗಳು ಸಮರೋಪಾದಿಯಲ್ಲಿ ಕಾರ್ಯಾಚರಿಸುತ್ತಿವೆ.
ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬಂದಿದ್ದು ಅಡಚಣೆ ತೆರವಿನ ಉಸ್ತುವಾರಿ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್