ಸಾಮೂಹಿಕ ವರ್ಗ ಡಿಕೆಶಿ ಅಸಮಾಧಾನ
Team Udayavani, Jun 15, 2018, 6:45 AM IST
ಬೆಂಗಳೂರು: ಜಲ ಸಂಪನ್ಮೂಲ ಇಲಾಖೆಯ ಎಂಜಿನಿಯರ್ಗಳನ್ನು ತಮ್ಮ ಗಮನಕ್ಕೆ ತರದೆ ವರ್ಗಾವಣೆ
ಮಾಡಿರುವ ಬಗ್ಗೆ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ
ದೂರವಾಣಿ ಕರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸಮ್ಮಿಶ್ರ ಸರ್ಕಾರದಲ್ಲಿ ತಾವೇ ಏಕಪಕ್ಷೀಯ ನಿರ್ಧಾರ
ತೆಗೆದುಕೊಂಡಿದ್ದು ಸರಿಯಲ್ಲ ಎಂದು ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ. ಈ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿಯೂ ಚರ್ಚೆಯಾಗಿದೆ ಎಂದು ತಿಳಿದು ಬಂದಿದ್ದು, ವ್ಯತ್ಯಾಸಗಳನ್ನು ಸರಿಪಡಿಸುವುದಾಗಿ ಸಿಎಂ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಆದರೆ,ಈ ಬೆಳವಣಿಗೆಯನ್ನು ಅಲ್ಲಗಳೆದಿರುವ ಡಿಸಿಎಂ ಡಾ.ಜಿ.ಪರಮೇಶ್ವರ್, ಎಂಜಿನಿಯರ್ಗಳ ಸಾಮೂಹಿಕ ವರ್ಗಾವಣೆ ಬಗ್ಗೆ ಹಿಂದಿನ ಸರ್ಕಾರದ ಅವಧಿ ಯಲ್ಲಿಯೇ ನಿರ್ಧರಿಸಲಾಗಿತ್ತು. ಈಗ ಅದಕ್ಕೆ ಒಪ್ಪಿಗೆ ನೀಡಲಾಗಿದೆ.ಅದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…