ಜೀವಂತ ದಹನವಾದ 6ರ ಬಾಲಕಿ
Team Udayavani, Jun 16, 2018, 6:00 AM IST
ಚಿಕ್ಕನಾಯಕನಹಳ್ಳಿ: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಬಳಿಯ ಯೋಗಮಾಧವ ನಗರದಲ್ಲಿ ಗುರುವಾರ ಮಧ್ಯರಾತ್ರಿ ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ಬಿದ್ದು 6 ವರ್ಷದ ಬಾಲಕಿ ಸಜೀವ ದಹನವಾಗಿದ್ದಾಳೆ.
ಅನಿತಾ (6) ಮೃತ ಬಾಲಕಿ. ಇಲ್ಲಿ ಏಳೆಂಟು ಹಕ್ಕಿ ಪಿಕ್ಕಿ ಕುಟುಂಬಗಳಿದ್ದವು . ಗುರುವಾರ ರಾತ್ರಿ ಹತ್ತು ಗಂಟೆಯ ಸಮಯದಲ್ಲಿ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿತು. ತತ್ಕ್ಷಣ ಗುಡಿಸಲಿನಲ್ಲಿದ್ದವರು ಹೊರ ಬಂದು ಬೆಂಕಿ ನಂದಿಸಲು ಮುಂದಾದರು. ಮತ್ತೆ ಕೆಲವರು ಸಾಮಗ್ರಿಗಳ ರಕ್ಷಣೆಗೆ ಮುಂದಾದರು. ಈ ನಡುವೆ ಗುಡಿಸಲಲ್ಲಿ ಮಲಗಿದ್ದ ಅನಿತಾ, ಅಗ್ನಿಜ್ವಾಲೆಗೆ ಸಿಲುಕಿ ಸುಟ್ಟು ಕರಕಲಾದಳು. ಬಾಲಕಿಯನ್ನು ರಕ್ಷಿಸಲು ಮುಂದಾದ ಬಾಲಕಿಯ ತಂದೆ ಲಕ್ಷ್ಮಣಯ್ಯ, ತಾಯಿ ಬೇಬಿಗೆ ಸುಟ್ಟ ಗಾಯಗಳಾಗಿವೆ. ಅಗ್ನಿಶಾಮಕ ದಳ ಬರುವಷ್ಟರಲ್ಲಿ ಎರಡು ಗುಡಿಸಲುಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಉಳಿದ ಆರು ಗುಡಿಸಲುಗಳಿಗೆ ತಗುಲಿದ್ದ ಬೆಂಕಿಯನ್ನು ನಂದಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?