ಮೀಸಲಾತಿಯಲ್ಲಿ ವಿಶೇಷ ಚೇತನರಿಗೆ ತಾರತಮ್ಯ: ಪಿಐಎಲ್
Team Udayavani, Jun 16, 2018, 6:00 AM IST
ಬೆಂಗಳೂರು: ಕೆಪಿಎಸ್ಸಿ ನಡೆಸುತ್ತಿರುವ ಗ್ರೂಪ್ ಸಿ ಮತ್ತು ಡಿ ದರ್ಜೆ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಎಲ್ಲ ರೀತಿಯ ವಿಶೇಷ ಚೇತನರಿಗೆ ಸಂವಿಧಾನಬದ್ಧವಾಗಿ ದೊರಕಬೇಕಾಗಿರುವ ಪ್ರಮಾಣದಲ್ಲಿ ಮೀಸಲಾತಿ ಕಲ್ಪಿಸಿರುವ ಬಗ್ಗೆ ಮಾಹಿತಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಆಯೋಗ ನಡೆಸುತ್ತಿರುವ 1,543 ಗ್ರೂಪ್ ಸಿ ಹಾಗೂ ಡಿ ದರ್ಜೆ ಹುದ್ದೆಗಳಲ್ಲಿ ವಿಶೇಷ ಚೇತನರಿಗೆ ಮೀಸಲಿಟ್ಟಿರುವ 124 ಹುದ್ದೆಗಳಲ್ಲಿ ಎಲ್ಲ ರೀತಿಯ ವಿಶೇಷ ಚೇತನರಿಗೆ (ಕಿವುಡ, ಮೂಗ, ಇತ್ಯಾದಿ) ಸಮಾನ ಅವಕಾಶ ಕಲ್ಪಿಸಿಲ್ಲ. ಈ ಪೈಕಿ ದೃಷ್ಟಿ ಚೇತನರಿಗೆ 80 ಹುದ್ದೆ ಮೀಸಲಿಟ್ಟು ತಾರತಮ್ಯ ಮಾಡಲಾಗಿದೆ ಎಂದು ಆಕ್ಷೇಪಿಸಿ ಮೈಸೂರಿನ ಅಂಗವಿಕಲರ ಅಭ್ಯುದಯ ಸೇವಾ ಸಂಸ್ಥೆ’ ಅಧ್ಯಕ್ಷರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿ ವಿಚಾರಣೆಯನ್ನು ಶುಕ್ರವಾರ ನಡೆಸಿದ ಮುಖ್ಯನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾ| ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ಅರ್ಜಿದಾರರು ಆಕ್ಷೇಪಿಸಿರುವಂತೆ ಮೀಸಲು ಹುದ್ದೆಗಳನ್ನು ನೀಡಲಾಗಿದೆಯೇ ಇಲ್ಲವೇ ಎಂಬ ಬಗ್ಗೆ ಆಯೋಗದಂತೆ ಮಾಹಿತಿ ಪಡೆದು ಮುಂದಿನ ವಿಚಾರಣೆ ವೇಳೆ ತಿಳಿಸುವಂತೆ ಸರಕಾರದ ಪರ ವಕೀಲರಿಗೆ ನಿರ್ದೇಶಿಸಿ ಜೂನ್ 27ಕ್ಕೆ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ