ಖುಷಿಯಿಂದ ಮೈತ್ರಿ ಸರ್ಕಾರ ರಚಿಸಿಲ್ಲ
Team Udayavani, Jun 18, 2018, 6:00 AM IST
ಬೀದರ: “”ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸುವ ಉದ್ದೇಶದಿಂದ ಮೈತ್ರಿ ಸರ್ಕಾರ ರಚಿಸಲಾಗಿದೆಯೇ ಹೊರತು ಖುಷಿಯಿಂದ ಸರ್ಕಾರ ರಚಿಸಿಲ್ಲ” ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ನಗರದ ಗಣೇಶ ಮೈದಾನದಲ್ಲಿ ಭಾನುವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ನೂತನ ಸಚಿವ ರಾಜಶೇಖರ ಪಾಟೀಲ ಹಾಗೂ ವಿಧಾನ ಪರಿಷತ್ ಸದಸ್ಯ ಡಾ| ಚಂದ್ರಶೇಖರ ಪಾಟೀಲ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾಗುವ ಸ್ಥಿತಿ ಯಾಕೆ ಬಂತು? ರಾಜ್ಯದಲ್ಲಿ ಕಾಂಗ್ರೆಸ್ಗೆ ಬಹುಮತ ಯಾಕೆ ಬರಲಿಲ್ಲ? ರಾಜ್ಯದ ಜನರು ಯಾಕೆ ಈ ಶಿಕ್ಷೆ ನೀಡಿದ್ದಾರೆ ಎಂಬುದು ಇಂದಿಗೂ ನನಗೆ ಕಾಡುತ್ತಿದೆ ಎಂದರು.
ಕಾಂಗ್ರೆಸ್ ಪಕ್ಷ ನನಗೆ 11ಚುನಾವಣೆಗಳಲ್ಲಿ ಟಿಕೆಟ್ ನೀಡಿದ್ದು, ಎಲ್ಲ ಚುನಾವಣೆಗಳಲ್ಲೂ ಗೆಲುವು ಸಾಧಿ ಸಿದ್ದೇನೆ ಎಂದ ಅವರು, ಇನ್ನೊಂದು ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪ ರ್ಧಿಸುವುದಾಗಿ ಘೋಷಿಸಿದರು.
ನಾನೂ ಸಚಿವನಾದರೆ ಆಶ್ಚರ್ಯವಿಲ್ಲ
ಮೈತ್ರಿ ಸರ್ಕಾರದಲ್ಲಿ ನಾನೂ ಕೂಡ ಸಚಿವನಾಗಿ ಆಯ್ಕೆಯಾದರೆ ಆಶ್ಚರ್ಯ ಪಡಬೇಕಿಲ್ಲ ಎಂದು ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್ ಹೇಳಿದರು. ನಗರದ ಗಣೇಶ ಮೈದಾನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈ ಹಿಂದೆ ಈಶ್ವರ ಖಂಡ್ರೆ ಸಚಿವರಾಗಿದ್ದರು. ಇದೀಗ ರಾಜಶೇಖರ ಪಾಟೀಲ ಸಚಿವರಾಗಿದ್ದಾರೆ. ಮುಂದೆ ರಹೀಮ್ ಖಾನ್ ಆಗಬಹುದು. ಇದೇ ಮೈತ್ರಿ ಸರ್ಕಾರದಲ್ಲಿ ಮುಂದೆ ನಾನೂ ಸಚಿವನಾಗಬಹುದು. ಎರಡೂ¾ರು ಬಾರಿ ಗೆದ್ದವರೇ ಸಚಿವರಾಗಬೇಕು ಎಂಬ ನಿಯಮವೇನಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ