ಗೌರಿ ಹತ್ಯೆ ತನಿಖೆ ಮುಗಿಯಲಿ,ಬಳಿಕ ಸತ್ಯ ಗೊತ್ತಾಗುತ್ತೆ:ಪ್ರಕಾಶ್ ರೈ
Team Udayavani, Jun 18, 2018, 1:56 PM IST
ಚಿಕ್ಕಬಳ್ಳಾಪುರ: ಗೌರಿ ಹತ್ಯೆ ತನಿಖೆ ಕೊನೆ ಹಂತಕ್ಕೆ ಬಂದಿದ್ದು, ಅಂತಿಮವಾಗಿ ತನಿಖೆ ಮುಗಿದ ಬಳಿಕ ಸತ್ಯಾಂಶ ಹೊರ ಬರಲಿದೆ.ಯಾರು ಕೊಲೆ ಮಾಡಿದ್ದಾರೆ ಎಂದು ತಿಳಿಯಲಿದೆ ಅಲ್ಲಿಯವರೆಗೆ ನಾನು ಯಾರ ಮೇಲೂ ಆರೋಪ ಮಾಡುವುದಿಲ್ಲ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ.
ಸೋಮವಾರ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ಸಂಜಯ್ಯಗಾರಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ಹೇಳಿಕೆ ನೀಡಿದ್ದಾರೆ.
ಇಷ್ಟು ದಿನಗಳ ಕಾಲ ಗೌರಿ ಹಂತಕರನ್ನು ಹಿಡಿದಿಲ್ಲ ಅಂತ ಹೇಳುತ್ತಾ ಇದ್ರಿ , ಈಗ ಎಸ್ಐಟಿ ಆರೋಪಿಗಳನ್ನು ಹಿಡಿಯುತ್ತಿದೆ. ಯಾರೂ ಯಾರ ಮೇಲೆ ಆರೋಪ ಹೊರಿಸುವುದು ಬೇಡ . ಮುಂದೆ ಸಮಾಜದಲ್ಲಿ ಇನ್ನೊಂದು ಗೌರಿಯ ಹತ್ಯೆ ಆಗದಂತೆ ನೋಡಿಕೊಳ್ಳೋಣ ಎಂದರು.
ಸರ್ಕಾರಿ ಶಾಲೆ ದತ್ತು ತೆಗೆದುಕೊಳ್ಳಲು ನಾನು ಯಾರು? ನಾನು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುತ್ತೇನೆ ಎನ್ನುವುದು ಮೂರ್ಖತನದ ಮಾತು. ಯಾರಪ್ಪನ ಆಸ್ತಿ ಯಾರು ದತ್ತು ತೆಗೆದುಕೊಳ್ಳುವುದು? ನಾನು ಅಳಿಲು ಸೇವೆಯಷ್ಟೇ ಮಾಡುತ್ತಿದ್ದು, ಸರ್ಕಾರಿ ಶಾಲೆಗಳ ಶಿಕ್ಷಕರು ಮತ್ತು ಸಂಘ ಸಂಸ್ಥೆಗಳ ಬೆನ್ನು ತಟ್ಟುತ್ತಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ