ಸರ್ಕಾರಕ್ಕೆ ಡಿ”ಕೇಸ್‌’ ಕಂಟಕ


Team Udayavani, Jun 21, 2018, 6:00 AM IST

dkk.jpg

ಬೆಂಗಳೂರು: ಪ್ರಭಾವಿ ಸಚಿವ, ಕಾಂಗ್ರೆಸ್‌ ಮುಖಂಡ ಡಿ.ಕೆ.ಶಿವಕುಮಾರ್‌ ವಿರುದ್ಧ ಆದಾಯ ತೆರಿಗೆ ಇಲಾಖೆ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಸಲ್ಲಿಸಿರುವ ದೂರು ಹಾಗೂ ವಿಚಾರಣೆಗೆ ಖುದ್ದು ಹಾಜರಾಗುವಂತೆ ನ್ಯಾಯಾಲಯವೇ ಸಚಿವರಿಗೆ ನೋಟಿಸ್‌ ನೀಡಿರುವುದು ಸಮ್ಮಿಶ್ರ ಸರ್ಕಾರಕ್ಕೆ ಆರಂಭಿಕ ಆತಂಕ ತಂದೊಡ್ಡಿದಂತಿದೆ.

ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಬಲ ಅಸ್ತ್ರ ಪ್ರಯೋಗಿಸಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬಂದರೂ, ಈ ಬೆಳವಣಿಗೆ ಸಮ್ಮಿಶ್ರ ಸರ್ಕಾರಕ್ಕೆ ಎದುರಾಗಿರುವ ಮೊದಲ ಕಂಟಕ ಎಂದೇ ವಿಶ್ಲೇಷಿಸಲಾಗುತ್ತಿದೆ.

ಆದಾಯ ತೆರಿಗೆ ಇಲಾಖೆ ದಾಳಿ ಪ್ರಕರಣದಲ್ಲಿ ಸಮನ್ಸ್‌ ಜಾರಿಯಾಗುವುದು ಸಹಜ. ಜತೆಗೆ ಜಾಮೀನು ಕೂಡ ಪಡೆಯಲು ಅವಕಾಶವಿರುತ್ತದೆ. ಆದರೆ ಡಿ.ಕೆ.ಶಿವಕುಮಾರ್‌ ವಿರುದ್ಧದ ಐಟಿ ದಾಳಿ ಪ್ರಕರಣದಲ್ಲಿ ಕೇಳಿಬರುತ್ತಿರುವ ಮಾತುಗಳೇ ಬೇರೆ. ವಿಚಾರಣೆ ವೇಳೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಐಟಿ ಅಧಿಕಾರಿಗಳು ಆರ್ಥಿಕ ಅಪರಾಧಗಳ ನ್ಯಾಯಾಲಯದಲ್ಲಿ ಸಚಿವರ ವಿರುದ್ಧ ದೂರು ದಾಖಲಿಸಿದ್ದಾರೆ. ಹಾಗಾಗಿ ಪ್ರಕರಣ ಗಂಭೀರ ಹಂತಕ್ಕೆ ತಲುಪಿದರೆ ಮೈತ್ರಿ ಸರ್ಕಾರದ ನಡೆ ಏನಾಗಿರಬೇಕು ಎಂಬುದು ಸದ್ಯ ಕಾಂಗ್ರೆಸ್‌ ಮಾತ್ರವಲ್ಲದೆ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿರೂ ತಲೆನೋವಾಗಿ ಪರಿಣಮಿಸಿದೆ.

ಈ ಬೆಳವಣಿಗೆ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರನ್ನು ಪದ್ಮನಾಭ ನಗರದ ನಿವಾಸದಲ್ಲಿ ಬುಧವಾರ ಭೇಟಿಯಾಗಿ ವಿಸ್ತ್ರತ ಚರ್ಚೆ ನಡೆಸಿದರು. ಪ್ರಕರಣದ ಬೆಳವಣಿಗೆಗೆ ಸಂಬಂಧಿಸಿ ಸರ್ಕಾರದ ನಿಲುವೇನಿರಬೇಕು? ಸಮರ್ಥನೆ ನೀಡಬಹುದಾದ ಅಂಶಗಳು, ನಂತರದ ಬೆಳವಣಿಗೆಯನ್ನು ಹೇಗೆ ಎದುರಿಸಬೇಕು ಎಂಬುದು ಸೇರಿ ಇತರೆ ವಿಚಾರಗಳ ಬಗ್ಗೆ ಗಹನ ಚರ್ಚೆ ನಡೆಸಿದರು.

ಕಾಡುವ ಭೀತಿ: ತಮ್ಮ ಹಾಗೂ ಆಪ್ತರ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಸಚಿವ ಡಿ.ಕೆ.ಶಿವಕುಮಾರ್‌ ಹಾಗೂ ಅವರ ಸಹೋದರರಾದ ಸಂಸದ ಡಿ.ಕೆ.ಸುರೇಶ್‌ ಹಲವು ಬಾರಿ ಆರೋಪ ಮಾಡಿದ್ದಾರೆ. ಇಷ್ಟಾದರೂ ಡಿ.ಕೆ.ಶಿವಕುಮಾರ್‌ ಮೇಲೆ ಐಟಿ ಪ್ರಕರಣದ ತೂಗುಗತ್ತಿ ನೇತಾಡುತ್ತಿದೆ.

ಐಟಿ ದಾಳಿ ಜಾಮೀನು ಪಡೆಯಬಹುದಾದ ಪ್ರಕರಣವೆನಿಸಿದೆ. ಆದರೆ ವಿಚಾರಣೆ ವೇಳೆ ಸುಳ್ಳು ಮಾಹಿತಿ ನೀಡುವುದು ಸತ್ಯ ಮರೆಮಾಚುವ ಪ್ರಯತ್ನವೆನಿಸುವ ಕಾರಣ ಪ್ರಕರಣ ಗಂಭೀರ ಸ್ವರೂಪ ಪಡೆಯುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಅಲ್ಲದೇ ಸಮ್ಮಿಶ್ರ ಸರ್ಕಾರಕ್ಕೆ ಆರಂಭದಲ್ಲೇ ಮುಜುಗರಕ್ಕೀಡುಮಾಡುವ ಬೆಳವಣಿಗೆಯಾಗಿ ಪರಿಣಮಿಸಿದರೂ ಅಚ್ಚರಿಯಲ್ಲ.

ಸಮ್ಮಿಶ್ರ ಸರ್ಕಾರ ರಚನೆ ಸಂದರ್ಭದಲ್ಲೇ ಡಿ.ಕೆ.ಶಿವಕುಮಾರ್‌ ವಿರುದ್ಧದ ಐಟಿ ಪ್ರಕರಣ ಚರ್ಚೆಗೆ ಎಡೆಮಾಡಿಕೊಟ್ಟಿತ್ತು. ಅಲ್ಲದೇ ಇದು ಗಂಭೀರ ಸ್ವರೂಪ ಪಡೆಯುವ ಶಂಕೆ ಜತೆಗೆ ಮೈತ್ರಿ ಸರ್ಕಾರದ ಮೇಲೆ ಬೀರುವ ಪರಿಣಾಮದ ಬಗ್ಗೆಯೂ ಚರ್ಚೆ ನಡೆದಿತ್ತು. ಪ್ರಕರಣದ ಬೆಳವಣಿಗೆಯು ಸರ್ಕಾರಕ್ಕೆ ಕಂಟಕವಾಗಿ ಪರಿಣಮಿಸುವ ಆತಂಕ ಕೂಡ ಮೈತ್ರಿ ಸರ್ಕಾರ ರಚನೆ ಸಂದರ್ಭದಲ್ಲಿ ವ್ಯಕ್ತವಾಗಿತ್ತು. ಆ ಕಾರಣಕ್ಕೆ ಸಂಪುಟದಲ್ಲಿ ಡಿ.ಕೆ.ಶಿವಕುಮಾರ್‌ ಅವರಿಗೆ ಅವಕಾಶ ತಪ್ಪುವ ಮಾತುಗಳು ಕೇಳಿಬಂದಿತ್ತು. ಅಂತಿಮವಾಗಿ ಸಚಿವ ಸ್ಥಾನ ಪಡೆದು ಎರಡು ಪ್ರಭಾವಿ ಖಾತೆಗಳನ್ನು ಪಡೆಯುವಲ್ಲಿ ಶಿವಕುಮಾರ್‌ ಯಶಸ್ವಿಯಾಗಿದ್ದರು.

ಪ್ರಭಾವಿ ಸಚಿವ ಡಿ.ಕೆ.ಶಿವಕುಮಾರ್‌ ವಿರುದ್ಧ ಐಟಿ ದೂರು ಸಲ್ಲಿಸಿರುವುದು ಮತ್ತು ನಂತರದ ಬೆಳವಣಿಗೆ ಜತೆಗೆ ಮುಂದೆ ಪ್ರಕರಣ ಪಡೆಯಬಹುದಾದ ತಿರುವುಗಳು ಹಾಗೂ ಕೇಂದ್ರ ಸರ್ಕಾರ ಹಂತ ಹಂತವಾಗಿ ಪ್ರಯೋಗಿಸುವ ಅಸ್ತ್ರಗಳೇನು ಎಂಬ ಭೀತಿ ಕಾಂಗ್ರೆಸ್‌ ಪಕ್ಷದ ನಿದ್ದೆಗೆಡಿಸಿದೆ. ಅಲ್ಲದೆ, ಇನ್ನಷ್ಟು ಕಾಂಗ್ರೆಸ್‌ ನಾಯಕರ ಮೇಲೆ ಐಟಿ ದಾಳಿ ನಡೆಯುವ ಸಾಧ್ಯತೆ ಬಗೆಗಿನ ಮಾತುಗಳು ಪಕ್ಷವನ್ನು ಮತ್ತಷ್ಟು ಆತಂಕಕ್ಕೆ ತಳ್ಳಿದೆ.

ಇದು ಉದ್ದೇಶಪೂರ್ವಕ ಕಿರುಕುಳ
ತಮ್ಮ ವಿರುದ್ಧ ಆದಾಯ ತೆರಿಗೆ ಇಲಾಖೆ ನಡೆಸುತ್ತಿರುವ ಕಾರ್ಯಾಚರಣೆ ಕುರಿತಂತೆ ಪ್ರತಿಕ್ರಿಯಿಸಿರುವ ಸಚಿವ ಡಿ.ಕೆ.ಶಿವಕುಮಾರ್‌, ಉದ್ದೇಶಪೂರ್ವಕವಾಗಿ ನನಗೆ ಕಿರುಕುಳ ನೀಡಲಾಗುತ್ತಿದೆ. ಇದನ್ನು ಎದುರಿಸುವ ಧೈರ್ಯ ನನಗಿದೆ. ನ್ಯಾಯಾಲಯದಲ್ಲಿ ಇರುವುದರಿಂದ ನಾನು ಏನನ್ನೂ ಹೇಳುವುದಿಲ್ಲ. ಇಲ್ಲದಿದ್ದರೆ ನಾನೇನು ಎಂಬುದನ್ನು ತೋರಿಸುತ್ತಿವೆ. ಐಟಿ ಕೇಸ್‌ನಲ್ಲಿ ನನ್ನನ್ನು ದುರುದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಆರ್ಥಿಕ ಅಪರಾಧಗಳ ನ್ಯಾಯಾಲಯದಿಂದ ಸಮನ್ಸ್‌ ಜಾರಿಯಾಗಿಲ್ಲ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಬಂದಿದೆ. ನನಗೆ ಮಾತ್ರವಲ್ಲ, ನನ್ನ ತಾಯಿ ಹಾಗೂ ಕುಟುಂಬ ಸದಸ್ಯರಿಗೂ ನೋಟಿಸ್‌ ಬಂದಿದೆ. ನ್ಯಾಯಾಲಯದ ಆದೇಶವನ್ನು ಗೌರವಿಸಿ ವಿಚಾರಣೆಗೆ ಹಾಜರಾಗುತ್ತೇವೆ ಎಂದು ಹೇಳಿದರು.

ನಮಗೆ ಸಂಬಂಧಿಸಿದ ಡೈರಿ ಸಿಕ್ಕಿದೆ. ಅದರಲ್ಲಿ ಹಲವು ವಿಷಯಗಳನ್ನು ಬರೆಯಲಾಗಿದೆ ಎಂದೆಲ್ಲಾ ಮಾಧ್ಯಮಗಳಲ್ಲಿ ಉಲ್ಲೇಖೀಸಲಾಗುತ್ತಿದೆ. ನಾವೂ ಸಾಕಷ್ಟು ಡೈರಿಗಳನ್ನು ನೋಡಿದ್ದೇವೆ. ನಾವು ಯಾವುದೇ ತಪ್ಪು ಮಾಡದಿದ್ದರೂ ನನ್ನನ್ನೇ ಏಕೆ ಗುರಿ ಮಾಡುತ್ತಿದ್ದಾರೆ ಎಂಬುದೂ ಗೊತ್ತಿದೆ. ಅದಕ್ಕೆ ಈಗ ಪ್ರತಿಕ್ರಿಯಿಸುವುದಿಲ್ಲ. ಸಮಯ ಬಂದಾಗ ಮಾತನಾಡುತ್ತೇನೆ ಎಂದರು.

ಆದಾಯ ತೆರಿಗೆ, ಡೈರಿ ಪತ್ತೆ ಎಂದೆಲ್ಲಾ ನನ್ನನ್ನೇ ಏಕೆ ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ ಶಿವಕುಮಾರ್‌, ಏಕೆ ಬೇರೆಯವರ ಮನೆಯಲ್ಲಿ ಡೈರಿ, ಕಳ್ಳ ಲೆಕ್ಕ ಇಟ್ಟಿದ್ದು ಗೊತ್ತಿಲ್ಲವೇ? ಅಂತವರ ಮೇಲೆ ಏಕೆ ದಾಳಿ ಮಾಡುತ್ತಿಲ್ಲ? ಈ ದೇಶದಲ್ಲಿ ಕಾನೂನು ಎಂಬುದಿದ್ದು, ಕಾನೂನು ಹೋರಾಟದ ಮೂಲಕವೇ ಎಲ್ಲದಕ್ಕೂ ಉತ್ತರ ನೀಡಲಾಗುವುದು ಎಂದರು.

ಬಿಜೆಪಿಯವರು ತಮ್ಮ ರಾಜೀನಾಮೆ ಕೇಳಿದ ಬಗ್ಗೆ ತೀಕ್ಷಣವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯ ಸ್ನೇಹಿತರು ನನ್ನ ರಾಜೀನಾಮೆ ಕೇಳುತ್ತಿದ್ದಾರಾ? ನಾವೂ ಕೂಡ ಅವರ ಪ್ರಕರಣಗಳ ದೊಡ್ಡ ಹೊರೆಯನ್ನೇ ಬಿಚ್ಚಿಡಬೇಕಾಗುತ್ತದೆ. ಕಾಲ ಕೂಡಿ ಬಂದಾಗ ಅದನ್ನೂ ಮಾಡುತ್ತೇನೆ ಎಂದು ಸವಾಲು ಹಾಕಿದರು.

ಕೇಂದ್ರ ಸರ್ಕಾರದ ಸಂಸ್ಥೆಗಳು ದ್ವೇಷ ಅಥವಾ ಒತ್ತಡಕ್ಕೆ ಮಣಿಯದೆ ಕಾನೂನು ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಸಚಿವ ಡಿ.ಕೆ.ಶಿವಕುಮಾರ್‌ ಅವರು ಕಾನೂನುಬದ್ಧವಾಗಿದ್ದರೆ ನಾವೆಲ್ಲರೂ ಅವರ ಬೆಂಬಲಕ್ಕೆ ನಿಲ್ಲುತ್ತೇವೆ.
– ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.