ಬಿಜಿಎಸ್ನಲ್ಲಿ ಚಿಕಿತ್ಸೆ ಪಡೆದು ಮರಳಿದ ಸಿದ್ಧಗಂಗಾ ಶ್ರೀ
Team Udayavani, Jun 22, 2018, 6:00 AM IST
ಬೆಂಗಳೂರು: ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ನಗರದ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ರಾತ್ರಿ ಮಠಕ್ಕೆ ಹಿಂದಿರುಗಿದ್ದಾರೆ.
ಶ್ರೀಗಳ ಪಿತ್ತನಾಳದಲ್ಲಿ ಬ್ಲಾಕ್ ಆಗಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ರೀಗಳನ್ನು ಪರೀಕ್ಷಿಸಿದ ಆಸ್ಪತ್ರೆಯ ಗ್ಯಾಸ್ಟ್ರೋ ಎಂಟರಾಲಾಜಿಸ್ಟ್ ಡಾ.ರವೀಂದ್ರ ನೇತೃತ್ವದ ತಂಡವೂ ಎಂಡೋಸ್ಕೋಪಿ ಮಾಡಿ ಪಿತ್ತನಾಳದಲ್ಲಿನ ಬ್ಲಾಕ್ ಅನ್ನು ಸಂಪೂರ್ಣವಾಗಿ ತೆರವುಗೊಳಿಸಿದ್ದರು. ಚಿಕಿತ್ಸೆ ನಂತರದಲ್ಲಿ ಅವರನ್ನು ವಾರ್ಡ್ಗೆ ಸ್ಥಳಾಂತರಿಸಲಾಗಿತ್ತು. ಶ್ರೀಗಳು ಚೇತರಿಸಿಕೊಂಡಿದ್ದರಿಂದ ರಾತ್ರಿ ಆಸ್ಪತ್ರೆಯಿಂದ ಮಠಕ್ಕೆ ತೆರಳಿದರು.
ಈ ಕುರಿತು ಪ್ರತಿಕ್ರಿಯಿಸಿರುವ ಡಾ.ರವೀಂದ್ರ, ಸಾಮಾನ್ಯವಾಗಿ ಒಬ್ಬರಿಗೆ ಆರು ಸ್ಟಂಟ್ಗಳನ್ನು ಮಾತ್ರ ಅಳವಡಿಸಲು ಸಾಧ್ಯ. ಆದರೆ, ಶ್ರೀಗಳಿಗೆ ಈಗಾಗಲೇ ಎಂಟು ಸ್ಟಂಟ್ ಅಳವಡಿಸಲಾಗಿದೆ. ಜತೆಗೆ ಒಂದು ಸ್ಟಂಟ್ನ ಕಾರ್ಯನಿರ್ವಹಣಾ ಅವಧಿ ಆರು ತಿಂಗಳು. ಶ್ರೀಗಳಿಗೆ ಅಳವಡಿಸಿದ್ದ 8ನೇ ಸ್ಟಂಟ್ ಆರು ತಿಂಗಳಾಗಿದ್ದರಿಂದ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಹೇಳಿದ್ದಾರೆ.
ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ವೈದ್ಯರ ತಂಡವು ಶ್ರೀಗಳಿಗೆ ರಕ್ತ ಪರೀಕ್ಷೆ, ಎಕ್ಸ್ ರೇ, ಇಸಿಜಿ, ಅಲಾø ಸೌಂಡ್ ಸ್ಕ್ಯಾನ್ ಪರೀಕ್ಷೆ ನಡೆಸಿ, ಎಂಡೋಸ್ಕೋಪಿ ಚಿಕಿತ್ಸೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
MUST WATCH
ಹೊಸ ಸೇರ್ಪಡೆ
G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ
Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು
Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್ ಶೆಟ್ಟರ್
Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ
Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ