ಹೈ-ಕ ಡ್ಯಾಂಗಳು ಖಾಲಿ ಖಾಲಿ;  ತಳಕಚ್ಚಿದ ಭೀಮಾ ಏತ ಜಲಾಶಯ


Team Udayavani, Jun 22, 2018, 6:00 AM IST

ban22061801medn-revised.jpg

ಕಲಬುರಗಿ: ರಾಜ್ಯದ ಹಲವೆಡೆ ಧಾರಾಕಾರ ಮಳೆ ಸುರಿದು ಆ ಭಾಗದ ಜಲಾಶಯಗಳು ಭರ್ತಿಯಾಗುತ್ತಿದ್ದರೆ, ಬಿಸಿಲ ನಾಡು ಹೈದ್ರಾಬಾದ್‌ ಕರ್ನಾಟಕ ಭಾಗದ ಜಲಾಶಯಗಳು ಮಾತ್ರ ದಿನೇ ದಿನೆ ಬತ್ತುತ್ತಿವೆ. ಕಲಬುರಗಿ ಜಿಲ್ಲೆಯ ಜೀವನಾಡಿ ಭೀಮಾ ಏತ ಜಲಾಶಯ ನೀರಿಲ್ಲದೆ ಬರಡು ಭೂಮಿಯಂತಾಗಿದೆ.

ಮುಂಗಾರು ಆರಂಭವಾಗಿ ಎರಡು ವಾರಗಳೇ ಕಳೆದರೂ ಭೂಮಿ ಹಸಿಯಾಗುವಷ್ಟು ಮಳೆ ಬಾರದೇ ಇರುವುದು ಹಾಗೂ ಕಳೆದೊಂದು ವಾರದಿಂದ ಬಿರುಗಾಳಿ, ಬಿಸಿಲಿನ ಪ್ರಮಾಣದಲ್ಲಿ ಏರಿಕೆ ಉಂಟಾಗಿದ್ದರಿಂದ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಾ ಸಾಗಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ಯಾವುದೇ ಜಲಾಶಯಗಳಲ್ಲಿ ನೀರು ಏರಿಲ್ಲ. ಮುಂಗಾರು ಆರಂಭಕ್ಕೂ ಮುಂಚೆ ಸ್ವಲ್ಪ ಮಳೆ ಬಂದಿದ್ದು ಬಿಟ್ಟರೆ ಮತ್ತೆ ಮಳೆರಾಯನ ಕೃಪೆಯೇ ಇಲ್ಲ. 3-4 ದಿನಗಳ ವಾತಾವರಣ ನೋಡಿದರೆ ಮತ್ತೆ ಬರಗಾಲವೇ ಎನ್ನುವ ಆತಂಕ ರೈತರಲ್ಲಿ ಮೂಡಲಾರಂಭಿಸಿದೆ.

ಎಷ್ಟೆಷ್ಟಿದೆ ನೀರು?
ಕಳೆದ ವರ್ಷ ಈ ವೇಳೆಗೆ ಉತ್ತಮವಾಗಿ ಮಳೆಯಾಗಿದ್ದು, ಜಲಾಶಯಗಳಲ್ಲಿ ಅರ್ಧಕ್ಕಿಂತ ಹೆಚ್ಚಿನ ನೀರು ಸಂಗ್ರಹವಾಗಿತ್ತು. 3.16 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯವಿರುವ ಭೀಮಾ ಏತ ಜಲಾಶಯದಲ್ಲಿ ಈಗ ಕೇವಲ 0.669 ಟಿಎಂಸಿ ಅಡಿ ಮಾತ್ರ ನೀರು ಸಂಗ್ರಹ ಹೊಂದಿದೆ. ಒಳಹರಿವು ಏನೂ ಇಲ್ಲ. ಕಳೆದ ವರ್ಷ ಇದೇ ಸಮಯಕ್ಕೆ 1.042 ಟಿಎಂಸಿ ಅಡಿ ನೀರಿತ್ತು.

ಬೆಣ್ಣೆ ತೋರಾದಲ್ಲಿ 5.29 ಟಿಎಂಸಿ ಅಡಿ ನೀರಿನ ಸಂಗ್ರಹದ ಪೈಕಿ ಈಗ 3.22 ಟಿಎಂಸಿ ಅಡಿ ನೀರಿದೆ. ಕಳೆದ ವರ್ಷ ಇದೇ ಜೂ.20ಕ್ಕೆ 4.20 ಟಿಎಂಸಿ ಅಡಿ ನೀರಿತ್ತು. ಅಮರ್ಜಾದಲ್ಲಿ 1.55 ಟಿಎಂಸಿ ಅಡಿ ನೀರಿನ ಪೈಕಿ 0.850 ಟಿಎಂಸಿ ಅಡಿ ನೀರಿದೆ. ಬೀದರ್‌ನ ಕಾರಂಜಾ ಜಲಾಶಯದಲ್ಲಿ 7.691 ಟಿಎಂಸಿ ಪೈಕಿ 3.677 ಟಿಎಂಸಿ ಅಡಿ ನೀರಿದೆ. ಚಂದ್ರಂಪಳ್ಳಿ, ಸೌದಾಗಾರ, ಹತ್ತಿಕುಣಿ ಜಲಾಶಯಗಳು ಡೆಡ್‌ ಸ್ಟೋರೇಜ್‌ಗೆ ತಲುಪಿವೆ.

ಬಿತ್ತನೆ ಕೈ ಬಿಟ್ಟ ರೈತರು
ರಾಜ್ಯಾದ್ಯಂತ ಭಾರೀ ಮಳೆ ಸುರಿದಾಗ ಕಲಬುರಗಿ ಭಾಗದಲ್ಲಿ ಸ್ವಲ್ಪ ಮಳೆ ಸುರಿದಿತ್ತು. ಭೂಮಿ ಹಸಿಯಾಗದಿದ್ದರೂ ಮಳೆ ಸುರಿಯುತ್ತದೆ ಎನ್ನುವ ಆಶಾಭಾವನೆಯಿಂದ ರೈತ ಬಿತ್ತನೆ ಕಾರ್ಯ ಆರಂಭಿಸಿದ್ದ. ಆದರೆ ಭೂಮಿ ಹಸಿ ಮಾಯವಾಗಿ ಬರೀ ಗಾಳಿ ಹಾಗೂ ಬಿಸಿಲಿನ ಪ್ರಮಾಣ ಹೆಚ್ಚಳವಾಗುವುದರ ಜತೆಗೆ ಮಳೆ ಮಾಯವಾಗಿದ್ದರಿಂದ ರೈತರು ಈಗ ಬಿತ್ತನೆ ಕಾರ್ಯ ನಿಲ್ಲಿಸಿದ್ದಾರೆ. ಭೂಮಿಗೆ ಹಾಕಿದ ಬೀಜ ಮೊಳಕೆಯೊಡೆದು ಮೇಲೆ ಬರುತ್ತಿಲ್ಲ.

ಮರಳುಗಾರಿಕೆಯಿಂದ ಬತ್ತುತ್ತಿವೆ ಜಲಾಶಯ!
ಕಲಬುರಗಿ ಭಾಗದ ಜಲಾಶಯಗಳಲ್ಲಿ ಭೀಮಾ ನದಿಯೇ ಹೆಚ್ಚಿನ ಪ್ರಮಾಣದಲ್ಲಿ ಬತ್ತಲು ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಕಾರಣ. ಅಕ್ರಮ ಮರಳುಗಾರಿಕೆ ತಡೆದಲ್ಲಿ ಮಾತ್ರ ಭೀಕರ ಪರಿಸ್ಥಿತಿ ಎದುರಾಗುವುದನ್ನು ಸ್ವಲ್ಪ ಪ್ರಮಾಣದಲ್ಲಾದರೂ ತಪ್ಪಿಸಬಹುದು. ಭೀಮಾ ನದಿಯಲ್ಲಿ ನೀರು ಬತ್ತುತ್ತಿರುವುದರಿಂದ ಕಲಬುರಗಿ ಮಹಾನಗರ ನೀರು ಪೂರೈಕೆಯ ಸರಡಗಿ ಬ್ಯಾರೇಜ್‌ನಲ್ಲಿ ನೀರು ಕಡಿಮೆಯಾಗಿದೆ. ಹೀಗಾಗಿ ನಗರಕ್ಕೆ ನಾಲ್ಕು ದಿನಕ್ಕೊಮ್ಮೆ ನೀರು ಪೂರೈಕೆಯಾಗುತ್ತಿದೆ.

– ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.