“ಡಿಕೇ’ಸ್‌ ವರ್ಗಾವಣೆ ಕೇಳಿದ ಇಡಿ


Team Udayavani, Jun 22, 2018, 6:00 AM IST

dk-shivakumar-ddd.jpg

ಬೆಂಗಳೂರು: ಜಲ ಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್‌ ವಿರುದ್ಧ ಹವಾಲ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದಡಿ ದಾಖಲಿಸಿರುವ ಪ್ರಕರಣವನ್ನು ತಮಗೆ ವಹಿಸಬೇಕೆಂದು ಜಾರಿ ನಿರ್ದೇಶನಾಲಯ (ಇಡಿ) ಕೋರಿರುವುದು ಕುತೂಹಲ ಮೂಡಿಸಿದೆ.

ಆದರೆ ಇಡಿ ಮನವಿಯನ್ನು ಒಪ್ಪದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತನಿಖಾ ಹಂತದಲ್ಲಿರುವ ಕಾರಣ ಪ್ರಕರಣ ವರ್ಗಾವಣೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇನ್ನೊಂದೆಡೆ ಪ್ರಕರಣ ಸಂಬಂಧ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಲಯವು ಸಚಿವ ಡಿ.ಕೆ.ಶಿವಕುಮಾರ್‌ ಸೇರಿದಂತೆ ಇತರೆ ಆರೋಪಿಗಳು ಆ.2ರಂದು ಖುದ್ದು ಹಾಜರಿಗೆ ಸಮನ್ಸ್‌ ಜಾರಿ ಮಾಡಿದೆ. ಇಷ್ಟೆಲ್ಲಾ ಬೆಳವಣಿಗೆಯಾಗಿರುವ ಹಂತದಲ್ಲಿ ಪ್ರಕರಣವನ್ನು ಇಡಿ ಸೇರಿದಂತೆ ಯಾವುದೇ ತನಿಖಾ ಸಂಸ್ಥೆಗೆ ವಹಿಸಲು ಸಾಧ್ಯವಿಲ್ಲ ಎಂದು ಐಟಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜತೆಗೆ ಬೇನಾಮಿ ಆಸ್ತಿ ಕುರಿತು ಐಟಿ ಇಲಾಖೆಯೇ ತನಿಖೆ ನಡೆಸಲು ಸಮರ್ಥವಾಗಿರುವಾಗ ಬೇರೆ ಸಂಸ್ಥೆಗೆ ವಹಿಸಲು ಸಾಧ್ಯವಿಲ್ಲ ಎಂದು ಇಡಿ ಅಧಿಕಾರಿಗಳಿಗೆ ಐಟಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಹೇಳಿವೆ.

ಸ್ವಯಂ ಪ್ರೇರಿತ ದೂರು ಸಾಧ್ಯವಿಲ್ಲ
ಆಂತರಿಕ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಸಾಕ್ಷ್ಯಗಳನ್ನು ಸಂಗ್ರಹಿಸಿದರೂ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲು ಜಾರಿ ನಿರ್ದೇಶನಾಲಯಕ್ಕೆ ಅವಕಾಶವಿಲ್ಲ. ನಿಯಮದ ಪ್ರಕಾರ ಬೇರೊಂದು ತನಿಖಾ ಸಂಸ್ಥೆ ಅಥವಾ ಖಚಿತ ಮೂಲಗಳಿಂದ ಬಂದ ದೂರುಗಳನ್ನಾಧರಿಸಿಯೇ ತನಿಖೆ ನಡೆಸಬೇಕು.

ಅಲ್ಲದೆ ಲೇವಾದೇವಿ ವ್ಯವಹಾರ ನಿಯಂತ್ರಣ ಕಾಯ್ದೆ (ಪಿಎಂಎಲ್‌ಎ) ಮತ್ತು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್ಇಎಂಎ) ಉಲ್ಲಂಘನೆ ಆರೋಪದಡಿ ದಾಖಲಾದ ಪ್ರಕರಣಗಳನ್ನಷ್ಟೇ ಇಡಿ ತನಿಖೆ ನಡೆಸಲು ಅವಕಾಶವಿದೆ. ಈ ಪ್ರಕರಣದಲ್ಲಿ ಹವಾಲ ವ್ಯವಹಾರವು ಪಿಎಂಎಲ್‌ಎ ಕಾಯ್ದೆ ಉಲ್ಲಂಘನೆ ವ್ಯಾಪ್ತಿಗೆ ಬರುವುದರಿಂದ ಇಡಿ ತನಿಖೆ ಆಸಕ್ತಿ ತೋರಿದೆ ಎಂದು ಮೂಲಗಳು ಖಚಿತ ಪಡಿಸಿವೆ.

2017ರಲ್ಲಿ ನಡೆದ ದಾಳಿ ವೇಳೆ ಪತ್ತೆಯಾದ ದಾಖಲೆ ಆಧರಿಸಿ ಈ ಹಿಂದೆ ಐಟಿ ಅಧಿಕಾರಿಗಳು ಶಿವಕುಮಾರ್‌, ಅವರ ವ್ಯವಹಾರದ ಪಾಲುದಾರರು ಹಾಗೂ ಆಪ್ತರ ವಿಚಾರಣೆ ನಡೆಸಿತ್ತು. ಎಲ್ಲ ಆರೋಪಿಗಳ ವಿಚಾರಣೆ ವೇಳೆ ನೀಡಿರುವ ಹೇಳಿಕೆಗೂ, ಅವರ ಮನೆ ಮತ್ತು ಕಚೇರಿಗಳಲ್ಲಿ ಪತ್ತೆಯಾದ ದಾಖಲೆಗಳಿಗೂ ತಾಳೆಯಾಗುತ್ತಿಲ್ಲ. ಈ ಮೂಲಕ ಸುಳ್ಳು ಮಾಹಿತಿ ನೀಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಐಟಿ ಅಧಿಕಾರಿಗಳು ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ರಹಸ್ಯ ತನಿಖೆ ಆರಂಭ
ಈ ನಡುವೆ ಹವಾಲ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆಂತರಿಕ ತನಿಖೆ ಆರಂಭಿಸಿದ್ದಾರೆ. ಯಾರ ಖಾತೆಯಿಂದ ಯಾರ ಖಾತೆಗೆ ಹಣ ವರ್ಗಾವಣೆಯಾಗಿದೆ? ಯಾವ ರೀತಿ ಹವಾಲ ವ್ಯವಹಾರ ನಡೆದಿದೆ. ಎಷ್ಟು ಕೋಟಿ ಮೊತ್ತದ ಹಣ ವರ್ಗಾವಣೆಯಾಗಿದೆ? ಎಂಬ ಬಗ್ಗೆ ಈಗಾಗಲೇ ತನಿಖೆ ಆರಂಭಿಸಿದೆ. ಜತೆಗೆ ಇದಕ್ಕೆ ಪೂರಕ ದಾಖಲೆಗಳು ಹಾಗೂ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಾಗಿರುವ ದೂರಿನ ಪ್ರತಿ ಮತ್ತು ಆರೋಪಿಗಳ ಹೇಳಿಕೆಗಳ ಪ್ರತಿಯನ್ನು ಪಡೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.