ಗಂಗಾಧರ ಹತ್ಯೆ: ಪಿಎಸ್ಐ ಸೇರಿ 6 ಆರೋಪಿಗಳು ನ್ಯಾಯಾಂಗ ವಶಕ್ಕೆ
Team Udayavani, Jun 23, 2018, 6:55 AM IST
ವಿಜಯಪುರ: ಗಂಗಾಧರ ಚಡಚಣ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಿಂದ ತಮ್ಮ ವಶಕ್ಕೆ ಪಡೆದಿದ್ದ 6 ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಮರಳಿ ನ್ಯಾಯಾಂಗ ಬಂಧನಕ್ಕೆ ಅವರನ್ನು ಕಳಿಸಲಾಗಿದೆ.
ಜೂ.19ರಂದು ಗಂಗಾಧರ ಚಡಚಣ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಸಿಐಡಿ ತಂಡ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದಿತ್ತು.
ಇಂಡಿ ಜೆಎಂಎಫ್ಸಿ ನ್ಯಾಯಾಲಯವು ಪ್ರಕರಣ ಆರೋಪಿ ಚಡಚಣ ಎಸ್ಐ ಗೋಪಾಲ ಹಳ್ಳೂರ, ಪೇದೆಗಳಾದ
ಚಂದ್ರಶೇಖರ ಜಾಧವ, ಗೆದ್ದಪ್ಪ ನಾಯೊRàಡಿ, ಸಿದಾಟಛಿರೂಢ ರೂಗಿ, ಹತ್ಯೆ ಮಾಡಿದ ಆರೋಪಿಗಳಾದ ಹನುಮಂತ ಪೂಜಾರಿ ಹಾಗೂ ಸಿದ್ದಗೊಂಡ ತಿಕ್ಕುಂಡಿ ಅವರನ್ನು ಸಿಐಡಿ ವಶಕ್ಕೆ ನೀಡಿತ್ತು. ಪ್ರಕರಣ ತನಿಖೆ ನಡೆಸುತ್ತಿರುವ ಸಿಐಡಿ ತಂಡಕ್ಕೆ ಹೆಚ್ಚಿನ ವಿಚಾರಣೆಗೆ ಜೂ.23ರವರೆಗೆ ವಶಕ್ಕೆ ನೀಡಿತ್ತು. ಆದರೆ, ತಮ್ಮ ವಶದಲ್ಲಿ
ಇರಿಸಿಕೊಳ್ಳಲು ಇನ್ನೂ ಒಂದು ದಿನ ಬಾಕಿ ಇರುವಂತೆಯೇ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಅವರನ್ನು
ಹಾಜರುಪಡಿಸಿದರು.
25 ಜೀವಂತ ಗುಂಡು ಪತ್ತೆ: ಗಂಗಾಧರ ಹತ್ಯೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಪ್ರಮುಖ ಆರೋಪಿ
ಮಹಾದೇವ ಭೈರಗೊಂಡನ ಮನೆಯಲ್ಲಿ 25 ಜೀವಂತ ಗುಂಡುಗಳು ಪತ್ತೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ