ಬಜೆಟ್ ಪೂರ್ವ ಸಿದ್ಧತಾ ಸಭೆ ನಡೆಸಿದ ಕುಮಾರ ಸ್ವಾಮಿ, ಪರಮೇಶ್ವರ್
Team Udayavani, Jun 23, 2018, 7:30 PM IST
ಬೆಂಗಳೂರು : ರಾಜ್ಯದಲ್ಲಿನ ಹೊಸ ಸಮ್ಮಿಶ್ರ ಸರಕಾರಕ್ಕೆ ಹೊಸ ಬಜೆಟ್ ಅಗತ್ಯ ಎಂದಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಮಾತಿಗೆ ಬೆಲೆ ಕೊಟ್ಟು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ ಬೆನ್ನಿಗೆ ಬಜೆಟ್ ಕುರಿತಾದ ಚಿಂತನ -ಮಂಥನ ತೀವ್ರಗೊಂಡಿದ್ದು ಇಂದು ಸಿಎಂ ಕುಮಾರ ಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಬಜೆಟ್ ಪೂರ್ವ ಸಿದ್ದತಾ ಸಭೆಯನ್ನು ನಡೆಸಿದರು.
ವಿಶೇಷವೆಂದರೆ ಈ ಪೂರ್ವ ಸಿದ್ಧತಾ ಸಭೆಯನ್ನು ಉಭಯ ನಾಯಕರು ಪ್ರತ್ಯೇಕವಾಗಿ ನಡೆಸಿರುವುದು. ಕುಮಾರಸ್ವಾಮಿ ಅವರು ತಮ್ಮ ಪೂರ್ವ ಸಿದ್ದತಾ ಸಭೆಯನ್ನು ಶಕ್ತಿ ಭವನದಲ್ಲಿ ನಡೆಸಿದರೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ವಿಧಾನಸೌಧದಲ್ಲಿ ಸಭೆ ನಡೆಸಿದರು.
ಸಮ್ಮಿಶ್ರ ಸರಕಾರ ಹೊಸ ಬಜೆಟ್ನಲ್ಲಿ ಯಾವೆಲ್ಲ ಹೊಸ – ಹಳೇ ಯೋಜನೆಗಳು ಇರಬೇಕು, ಅದರ ಸ್ವರೂಪ ಹೇಗಿರಬೇಕು ಎಂಬಿತ್ಯಾದಿ ವಿಷಯಗಳು ಸಭೆಯಲ್ಲಿ ಚರ್ಚಿತವಾದವು.
ಸಿಎಂ ಕುಮಾರಸ್ವಾಮಿ ಅವರು ಮಹಿಳೆ ಮತ್ತು ಮಕ್ಕಳ ಕಲ್ಯಾಣ, ಕನ್ನಡ ಸಂಸ್ಕೃತಿ ಇಲಾಖೆ, ಪರಿಸರ, ಇಂಧನ, ಜವಳಿ ಇಲಾಖೆಗಳಿಗೆ ಸಂಬಂಧಿಸಿದಂತೆ ಇಲಾಖಾವಾರು ಸಭೆ ನಡೆಸಿದರೆಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Bhuvanam gaganam Teaser: ಭುವನಂ ಗಗನಂ ಟೀಸರ್ ಬಂತು
Bharjari Gandu: ಟ್ರೇಲರ್ನಲ್ಲಿ ಭರ್ಜರಿ ಗಂಡು
Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್ನಲ್ಲಿ ಶೂಟಿಂಗ್!
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್