ಕೆಪಿಸಿಸಿ ಅಧ್ಯಕ್ಷ ಸ್ಥಾನ ಈಗ ಬೇಡ: ಸತೀಶ ಜಾರಕಿಹೊಳಿ
Team Udayavani, Jun 24, 2018, 6:05 AM IST
ಬೆಳಗಾವಿ: ತಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಲಂಕರಿಸುವ ಅವಕಾಶ ಇತ್ತು. ಆದರೆ ಈಗ ಬೇಡ. ಮುಂದೆ ನೋಡೋಣ ಎಂದು ಹೇಳಿದ್ದೇನೆ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರಾಗಿ ಯಾರೇ ನೇಮಕವಾದರೂ ಅವರಿಗೆ ನಾನು ಸಂಪೂರ್ಣ ಬೆಂಬಲ ನೀಡುತ್ತೇನೆ. ಪಕ್ಷ ಸಂಘಟನೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಹುದ್ದೆಯಿಂದಲೇ ಪಕ್ಷ ಸಂಘಟನೆ ಮಾಡಬೇಕೆನ್ನುವ ಅವಶ್ಯಕತೆ ಇಲ್ಲ. ರಾಜ್ಯದಲ್ಲಿ ತಮ್ಮನ್ನು ಸತೀಶ ಜಾರಕಿಹೊಳಿ ಎಂದು ಜನ ಗುರುತಿಸುತ್ತಿದ್ದಾರೆ. ಜನರ ನಂಬಿಕೆಯ ಮೇಲೆಯೇ ಪಕ್ಷ ಕಟ್ಟುತ್ತಿದ್ದೇನೆ ಎಂದು ಹೇಳಿದರು.
ಸಮ್ಮಿಶ್ರ ಸರಕಾರದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಅಭಿಪ್ರಾಯ ಎಲ್ಲರಲ್ಲಿದೆ. ಈ ಭಾಗದಲ್ಲಿ ಕಾಂಗ್ರೆಸ್ನ 40 ಜನ ಶಾಸಕರಿದ್ದರೂ ಕೇವಲ ನಾಲ್ವರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗಿದೆ. ಈಗ ಆಗಿರುವ ಅನ್ಯಾಯವನ್ನು ಪಕ್ಷದ ವರಿಷ್ಠರು ಕೂಡಲೇ ಸರಿಪಡಿಸಿ, ಮುಂಬೈ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕಕ್ಕೆ ಸಮಾನ ಅವಕಾಶ ನೀಡಬೇಕು. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದ್ದರೂ ಪ್ರತ್ಯೇಕ ರಾಜ್ಯ ಬೇಡಿಕೆಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ಮಲ್ಲಿಕಾರ್ಜುನ ಖರ್ಗೆ ರೀತಿ ಬೇರೆಯವರು ಬೆಳೆದರೆ ಉತ್ತರ ಕರ್ನಾಟಕಕ್ಕೆ ನ್ಯಾಯ ದೊರಕಿಸಿಕೊಡಬಹುದು ಎಂದರು.
ನಿಗಮ ಮಂಡಳಿ ನೇಮಕ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿ, ತಮ್ಮ ಬೆಂಬಲಿಗರ ಪಟ್ಟಿ ಸಿದ್ಧಪಡಿಸಿ ರಾಜ್ಯದ ಉಸ್ತುವಾರಿ ವೇಣುಗೋಪಾಲ ಅವರಿಗೆ ಕೊಡಲಾಗುವುದು. ಸಾಧ್ಯವಾದಷ್ಟು ಜನರಿಗೆ ಅವಕಾಶ ದೊರಕಿಸಿಕೊಡಲು ಪ್ರಯತ್ನಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ