300ಕ್ಕೂ ಅಧಿಕ ಪಿಯು ಕಾಲೇಜಿನಲ್ಲಿ ಪ್ರಾಂಶುಪಾಲರಿಲ್ಲ!
Team Udayavani, Jun 24, 2018, 6:55 AM IST
ಬೆಂಗಳೂರು :ರಾಜ್ಯದ ಬಹುತೇಕ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಸ್ಥಿತಿ “ನಾವಿಕನಿಲ್ಲದ ದೋಣಿ’ಯಂತಾಗಿದೆ.
ರಾಜ್ಯದ 1,204 ಸರ್ಕಾರಿ ಪಿಯು ಕಾಲೇಜುಗಳ ಪೈಕಿ 300ಕ್ಕೂ ಅಧಿಕ ಪಿಯು ಕಾಲೇಜಿನಲ್ಲಿ ಖಾಯಂ ಪ್ರಾಂಶುಪಾಲರಿಲ್ಲ.
ಹಂಗಾಮಿ ಪ್ರಾಂಶುಪಾಲರೇ ಕಾಲೇಜಿನ ಶಿಕ್ಷಣ ಹಾಗೂ ಆಡಳಿತಾತ್ಮಕ ವ್ಯವಸ್ಥೆ ನಿಭಾಯಿಸುವಂತಾಗಿದೆ. ಕಳೆದ ವರ್ಷ 400 ಸರ್ಕಾರಿ ಪಿಯು ಕಾಲೇಜುಗಳಲ್ಲಿ ಪ್ರಾಂಶುಪಾಲರು ಇರಲಿಲ್ಲ.
ಇತ್ತೀಚೆಗೆ ನಡೆದ ವರ್ಗಾವಣೆ ಕೌನ್ಸೆಲಿಂಗ್ನಲ್ಲಿ ಜೇಷ್ಠತೆಯ ಆಧಾರದಲ್ಲಿ ಸುಮಾರು 200 ಹಿರಿಯ ಉಪನ್ಯಾಸಕರಿಗೆ ಪ್ರಾಂಶುಪಾಲರಾಗಿ ಬಡ್ತಿ ನೀಡಲಾಗಿದೆ. ಈಗ ಸುಮಾರು 300ಕ್ಕೂ ಅಧಿಕ ಕಾಲೇಜಿನಲ್ಲಿ ಪ್ರಾಂಶುಪಾಲರ ಹುದ್ದೆ ಖಾಲಿಯಾಗಿದೆ.
ನೇರ ನೇಮಕಾತಿಗೆ ಪ್ರಸ್ತಾವನೆ
ಸರ್ಕಾರಿ ಪಿಯು ಕಾಲೇಜಿನಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗೆ ನೇರ ನೇಮಕಾತಿ ಮಾಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕಳೆದ ವರ್ಷ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ರಾಜ್ಯದಲ್ಲಿ 1969ರಿಂದ ಪಿಯು ಕಾಲೇಜು ಪ್ರಾಂಶುಪಾಲರ ಹುದ್ದೆಗೆ ನೇರ ನೇಮಕಾತಿ ನಡೆದಿಲ್ಲ. ಪ್ರಾಂಶುಪಾಲರ ನಿವೃತ್ತಿ ಸೇರಿ ವಿವಿಧ ಕಾರಣಗಳಿಂದ ತೇರವಾದ ಹುದ್ದೆಗೂ ನೇಮಕಾತಿ ಮಾಡಿಕೊಂಡಿಲ್ಲ. ಹೀಗಾಗಿ ವರ್ಷದಿಂದ ವರ್ಷಕ್ಕೆ ಪ್ರಾಂಶುಪಾಲರ ಖಾಲಿ ಹುದ್ದೆಗಳ ಸಂಖ್ಯೆ ಏರಿಕೆಯಾಗತ್ತಿದೆ. ಹೈದರಬಾದ್ ಕರ್ನಾಟಕ ಭಾಗದ 50ಕ್ಕೂ ಅಧಿಕ ಕಾಲೇಜಿನಲ್ಲಿ ಪ್ರಾಂಶುಪಾಲರ ಹುದ್ದೆ ಖಾಲಿ ಇದೆ.
ಪ್ರಾಂಶುಪಾಲರ ನೇರ ನೇಮಕಾತಿಗಾಗಿ ಪ್ರಸ್ತಾವನೆಯನ್ನು ಕೆಪಿಎಸ್ಸಿಗೆ ಸಲ್ಲಿಸಿದ್ದೇವೆ. ಆದರೆ, ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಪ್ರಾಂಶುಪಾಲರ ಹುದ್ದೆ ಖಾಲಿ ಇರುವ ಕಾಲೇಜುಗಳಲ್ಲಿ ಹಂಗಾಮಿ ಪ್ರಾಂಶುಪಾಲರ ನೇಮಕ ಮಾಡಿದ್ದೇವೆ. ಪ್ರವೇಶಾತಿ ಸೇರಿ ಆಡಳಿತಾತ್ಮಕ ಮತ್ತು ಶೈಕ್ಷಣಿಕ ಕಾರ್ಯ ಚಟುವಟಿಕೆಗಳು ಅವರ ಮೇಲುಸ್ತುವಾರಿಯಲ್ಲಿ ನಡೆಯುತ್ತಿದೆ.
– ಸಿ.ಶಿಖಾ, ನಿರ್ದೇಶಕಿ, ಪಿಯು ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ