ಸದ್ಯ 30 ನಿಗಮ; ಸಿದ್ದರಾಮಯ್ಯ ಜತೆ ಪರಮೇಶ್ವರ್ ಚರ್ಚೆ
Team Udayavani, Jun 25, 2018, 5:00 AM IST
ಬೆಂಗಳೂರು: ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಗೆ ಮುನ್ನ ಸಚಿವಾಕಾಂಕ್ಷಿಗಳನ್ನು ಸಮಾಧಾನಪಡಿಸುವ ಕಾರ್ಯಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಂದಾಗಿದ್ದು, ಮೂವತ್ತು ನಿಗಮ-ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಭರ್ತಿಗೆ ತೀರ್ಮಾನಿಸಿದೆ.
ಮೊದಲ ಹಾಗೂ ಎರಡನೇ ಬಾರಿಗೆ ಶಾಸಕರಾಗಿ ಸಚಿವ ಸ್ಥಾನ ಕೇಳುತ್ತಿರುವ ಎರಡೂ ಪಕ್ಷದ 30 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ಸಹಿತ ನಿಗಮ -ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆ ನೀಡಲು ನಿರ್ಧರಿಸಿದೆ.
ನಿಗಮ-ಮಂಡಳಿಗಳಿಗೆ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ದಿಢೀರ್ ಮಂಗಳೂರಿಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚಿಸಿದ್ದಾರೆ.
ಭಾನುವಾರ ಮಧ್ಯಾಹ್ನ ಧರ್ಮಸ್ಥಳದ ಉಜಿರೆಯ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಿ ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಪರಮೇಶ್ವರ್, ನಿಗಮ-ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ಪಟ್ಟಿಗೆ ಒಪ್ಪಿಗೆ ಪಡೆಯುವ ಸಂಬಂಧ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಬಜೆಟ್ ಅಧಿವೇಶನ ಜುಲೈ 2 ರಿಂದ ಆರಂಭವಾಗುತ್ತಿದ್ದು, ಅಷ್ಟರಲ್ಲಿ ಎರಡನೇ ಹಂತದ ಸಂಪುಟ ವಿಸ್ತರಣೆ ಹಾಗೂ ಸಚಿವಗಿರಿ ವಂಚಿತ ಶಾಸಕರಿಗೆ ಪರ್ಯಾಯ ಅಧಿಕಾರ ನೀಡಿ ಅಸಮಾಧಾನ ನಿವಾರಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ನಿರ್ಧರಿಸಿದೆ.
ಕಾಂಗ್ರೆಸ್ನಿಂದ 20 ಹಾಗೂ ಜೆಡಿಎಸ್ನಿಂದ 10 ಶಾಸಕರಿಗೆ ನಿಗಮ-ಮಂಡಳಿಗಳಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ಹೇಳಲಾಗಿದೆ. ಹೀಗಾಗಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ದೇವೇವೇಗೌಡರ ಜತೆ ಚರ್ಚಿಸಿ ಜೆಡಿಎಸ್ನಿಂದ ಮೊದಲ ಹಂತದಲ್ಲಿ ನಿಗಮ-ಮಂಡಳಿಗಳಿಗೆ ನೇಮಕ ಮಾಡುವ ಪಟ್ಟಿ ಸಿದ್ಧಪಡಿಸಿ ಕಾಂಗ್ರೆಸ್ ನಾಯಕರಿಗೆ ನೀಡಿದ್ದಾರೆ.
ಕಾಂಗ್ರೆಸ್ ನಾಯಕರು ತಮ್ಮ ಪಕ್ಷದವರ ಪಟ್ಟಿ ಸಿದ್ಧಗೊಳಿಸಿದ ನಂತರ ಹೈಕಮಾಂಡ್ ಒಪ್ಪಿಗೆ ಪಡೆದು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.
ಸಿದ್ದರಾಮಯ್ಯ ಅವರು ಪರಮೇಶ್ವರ್ ಜತೆ ಚರ್ಚೆ ಸಂದರ್ಭದಲ್ಲಿ ಸಚಿವಗಿರಿ ಸಿಗದ ಜಿಲ್ಲೆ ಹಾಗೂ ಸಮುದಾಯಗಳಿಗೆ ಅವಕಾಶ ಕಲ್ಪಿಸಲು ಒಲವು ತೋರಿದ್ದಾರೆ ಎಂದು ಹೇಳಲಾಗಿದೆ.ನಿಗಮ-ಮಂಡಳಿಗಳಿಗೆ ನೇಮಕ ಪ್ರಕ್ರಿಯೆ ನಂತರ ಎರಡನೇ ಹಂತದ ಸಂಪುಟ ವಿಸ್ತರಣೆಯೂ ಆಗಲಿದೆ.
ಸಿದ್ದರಾಮಯ್ಯಗೆ ಸಂಪುಟ ದರ್ಜೆ
ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರದಿಂದಲೇ ಅಧಿಕೃತವಾಗಿ ಸಮನ್ವಯ ಸಮಿತಿ ಅಧ್ಯಕ್ಷರನ್ನು ಘೋಷಿಸಿ ಸಂಪುಟ ದರ್ಜೆ ಸ್ಥಾನಮಾನ ಕಲ್ಪಿಸಲಾಗುವುದು. ಸೋಮವಾರ ಈ ಕುರಿತು ಆದೇಶ ಹೊರಬೀಳಲಿದೆ ಎಂದು ಹೇಳಲಾಗಿದೆ. ಈಗಾಗಲೇ ಸಿದ್ದರಾಮಯ್ಯ ಅವರಿಗೆ ವಿಧಾನಸೌಧ ಮೊದಲ ಮಹಡಿಯಲ್ಲಿ ಕೊಠಡಿ ಸಹ ಮಂಜೂರು ಮಾಡಲಾಗಿದೆ.
ಸಿದ್ದರಾಮಯ್ಯಅವರು ಬಯಸಿದರೆ ಕಾವೇರಿ ನಿವಾಸದಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸಿಕೊಡಲಾಗುವುದು. ಇಲ್ಲದಿದ್ದರೆ ಬೇರೊಂದು ಸರ್ಕಾರಿ ನಿವಾಸ ಹಂಚಿಕೆ ಮಾಡಲಾಗುವುದು ಎಂದು ತಿಳಿದು ಬಂದಿದೆ. ಆದರೆ, ಕಾವೇರಿ ನಿವಾಸಕ್ಕಾಗಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
MUST WATCH
ಹೊಸ ಸೇರ್ಪಡೆ
SS Rajamouli: ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್ನಲ್ಲಿ ಸುಳಿವು ಕೊಟ್ಟ ರಾಜಮೌಳಿ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!