ಯಾರ ಹಂಗಿನಲ್ಲೂ ಇಲ್ಲ; ಸಿಎಂ ಎಚ್ ಡಿಕೆ v/s ಸಿದ್ದರಾಮಯ್ಯ ಶೀತಲ ಸಮರ!
Team Udayavani, Jun 25, 2018, 12:16 PM IST
ಬೆಂಗಳೂರು: ನಾನು ಯಾರ ಹಂಗಿನಲ್ಲೂ ಇಲ್ಲ, ಯಾರ ಅಧಿಕಾರದ ಭಿಕ್ಷೆಯಲ್ಲೂ ಇಲ್ಲ. ಸಾಲಮನ್ನಾ ಮಾಡೋದರಿಂದ ನನಗೇನೂ ಕಮಿಷನ್ ಸಿಗಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ನಡೆದ ಸಹಕಾರಿ ಬ್ಯಾಂಕ್ ಅಧ್ಯಕ್ಷರ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಒಂದೊಂದು ಸರ್ಕಾರ ಬಂದಾಗ ಒಂದೊಂದು ನೀತಿ ತರುತ್ತಾರೆ. ಲೋಕಸಭೆ ಚುನಾವಣೆ ನಂತರ ಈ ಸರ್ಕಾರ ಇರೋತ್ತೋ ಇಲ್ಲವೋ ಎಂಬುದಾಗಿ ದೂರುತ್ತಿದ್ದಾರೆ. ಇಂತಹ ಮಾತುಗಳು ಖಂಡಿತಾ ಬೇಡ ಎಂದು ಹೇಳಿದರು.
ನಾನು ಸ್ಮೂತ್ ಗೋಯಿಂಗ್ ಇದ್ದೇನೆ ಎಂದು ಅಧಿಕಾರಿಗಳಿಗೆ ಗೊತ್ತು. ನಾನೇನು ಬೇರೆಯವರ ರೀತಿ ದುರಹಂಕಾರ ಅಥವಾ ಗಡಸು ಧ್ವನಿಯಲ್ಲಿ ಮಾತಾಡಲ್ಲ ಎಂದು ಚಾಟಿ ಬೀಸಿದ್ದಾರೆ.
ರೈತರ ಆತ್ಮಹತ್ಯೆಗೂ, ಸಾಲಮನ್ನಾಕ್ಕೂ ಸಂಬಂಧವಿಲ್ಲ ಎಂಬ ವರದಿಯನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಆದರೆ ಸಾಲಮನ್ನಾದಿಂದ ರೈತರಿಗೆ ಅನುಕೂಲವಾಗಬೇಕು ಎಂಬುದು ನನ್ನ ಕಾಳಜಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ