ಮೈತ್ರಿ ಸರ್ಕಾರಕ್ಕೆ 5 ವರ್ಷ ಧಕ್ಕೆ ಇಲ್ಲ: ಡಾ.ಪರಮೇಶ್ವರ್
Team Udayavani, Jun 28, 2018, 6:50 AM IST
ಕೊಪ್ಪಳ: “ಮೈತ್ರಿ ಸರ್ಕಾರದ ಬಗ್ಗೆ ಸುಮ್ಮನೆ ಕೆಲವು ಗೊಂದಲಗಳು ಉಂಟಾಗುತ್ತಿವೆ. ನಾನು ಅಧಿಕೃತವಾಗಿ ಹೇಳುತ್ತಿದ್ದೇನೆ.
ಒಪ್ಪಂದದ ಪ್ರಕಾರ ನಾವು ಐದು ವರ್ಷಗಳ ಕಾಲ ಉತ್ತಮ ಆಡಳಿತ ನಡೆಸುತ್ತೇವೆ’ ಎಂದು ಡಿಸಿಎಂ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಪುನರುಚ್ಚರಿಸಿದ್ದಾರೆ.
ಕೊಪ್ಪಳ ತಾಲೂಕಿನ ಮುನಿರಾಬಾದ್ನಲ್ಲಿ ಮಾತನಾಡಿ, ನಾವು 5 ವರ್ಷ ಆಡಳಿತ ನಡೆಸುತ್ತೇವೆ ಎಂದು ಜೆಡಿಎಸ್ನೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದೇವೆ. ಯಾರು ಏನೇ ಹೇಳಿದರೂ ಅದು ಅಪ್ರಸ್ತುತ. ಮಾಜಿ ಸಿಎಂ
ಸಿದ್ದರಾಮಯ್ಯ ಏನು ಹೇಳಿದ್ದಾರೋ ನನಗೆ ಗೊತ್ತಿಲ್ಲ. ಅವರು ಖಾಸಗಿಯಾಗಿ ಹೇಳಿಕೆ ನೀಡಿರಬಹುದು. ಅವರನ್ನು ನಾನು ಭೇಟಿಯಾಗಿ ಬಂದಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರು ಭೇಟಿಯಾಗಿ ಮಾತನಾಡಿರ ಬಹುದು. ಅವರು ನಮ್ಮ ಪಕ್ಷದ ಹಿರಿಯರು.
ಮೈತ್ರಿ ಸರ್ಕಾರದಲ್ಲಿ ಸಣ್ಣ ಪುಟ್ಟ ಸಮಸ್ಯೆ ಇರುತ್ತವೆ. ಅವೆಲ್ಲವುಗಳನ್ನು ನಾವು ಸಮಾಲೋಚಿಸಿ,ಚರ್ಚೆ ನಡೆಸಿ ಮುನ್ನಡೆಯುತ್ತೇವೆ ಎಂದರು.
ಸಿದ್ದರಾಮಯ್ಯ ಅವರು ಹಳೇ ಬಜೆಟನ್ನೇ ಮುಂದುವರಿಸಿ ಎಂದು ಹೇಳಿರಬಹುದು. ಅದರಲ್ಲಿ ತಪ್ಪೇನಿದೆ? ಈ ಹಿಂದಿನ
ಸರ್ಕಾರದ ಯೋಜನೆಗಳನ್ನು ಪ್ರಸ್ತಾಪಿಸಿದ್ದಾರೆ. ಮೈತ್ರಿ ಸರ್ಕಾರಕ್ಕೆ ನಾವು ಬೆಂಬಲ ಕೊಟ್ಟಿದ್ದೇವೆ. ಹಾಗಾಗಿ, ಹೇಳಿ ದ್ದಾರೆ. ಇನ್ನು ದೇವೇಗೌಡರು ಹೊಸ ಬಜೆಟ್ ಮಂಡನೆ ಸೂಕ್ತ ಎಂದಿರುವುದರಲ್ಲಿಯೂ ತಪ್ಪಿಲ್ಲ. ಎಲ್ಲವನ್ನೂ ಸಮನ್ವಯವಾಗಿ ಚರ್ಚೆ ನಡೆಸಿಯೇ ನಿರ್ಧಾರ ಕೈಗೊಳ್ಳು ತ್ತೇವೆ ಎಂದರು.
ಜು.5ಕ್ಕೆ ಬಜೆಟ್ ಇರುವ ಬಗ್ಗೆ ಶಾಸಕರಿಗೆ ಮಾಹಿತಿ ತಿಳಿದಿಲ್ಲದಿರುವುದು ನನಗೆ ಗೊತ್ತಿಲ್ಲ.ಬಜೆಟ್ ದಿನ ಡಿಕೆಶಿ ಅವರು ಗೈರಾಗುವ ವಿಚಾರವೂ ನನಗೆ ಗೊತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ