ಗುತ್ತಿಗೆ ವಂಚಿತ ಸಂಸ್ಥೆಯಿಂದಲೇ 108 ಚಾಲನೆ!


Team Udayavani, Jun 28, 2018, 6:00 AM IST

108-amb.jpg

ಬೆಂಗಳೂರು: ಸಾರ್ವಜನಿಕರ ತುರ್ತು ಚಿಕಿತ್ಸೆಗಾಗಿ ಆರಂಭಿಸಿದ “108 ಆರೋಗ್ಯ ಕವಚ’ ಉಚಿತ ಆ್ಯಂಬುಲೆನ್ಸ್‌ ಸೇವೆಯನ್ನು ಸಮರ್ಪಕವಾಗಿ ನಿರ್ವಹಿಸದ ಹಿನ್ನೆಲೆಯಲ್ಲಿ ಗುತ್ತಿಗೆ ವಂಚಿತ ಸಂಸ್ಥೆಯೇ ಕಳೆದ 11
ತಿಂಗಳಿನಿಂದ ಸೇವೆ ಮುಂದುವರಿಸಿದೆ!

ಗುತ್ತಿಗೆ ಪೂರ್ಣಗೊಳ್ಳಲು 1 ವರ್ಷ ಇರುವಂತೆಯೇ ಸಿಕಂದರಾಬಾದ್‌ನ ಎಮರ್ಜೆ ನ್ಸಿ ಮ್ಯಾನೇಜ್‌ಮೆಂಟ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ (ಇಎಂಆರ್‌ಐ) ಜತೆಗಿನ ಒಪ್ಪಂದ ರದ್ದುಗೊಳಿಸಲಾಗಿತ್ತು. ಆದರೆ ಅಧಿಕಾರಿಗಳು ಸೂಕ್ತ ನಿಯಮಾವಳಿ ರೂಪಿಸಿ ಹೊಸ ಟೆಂಡರ್‌ ಪ್ರಕ್ರಿಯೆ ನಡೆಸದ ಕಾರಣ ಹಳೆಯ ಸಂಸ್ಥೆಯ ಸೇವೆಯೇ ಮುಂದುವರಿದಿದೆ.

ತರ್ತುಚಿಕಿತ್ಸೆಗಾಗಿ ಅನುಕೂಲವಾಗುವಂತೆ ಸರ್ಕಾರ “108 ಆರೋಗ್ಯ ಕವಚ’ ಯೋಜನೆಯಡಿ ಉಚಿತ ಆ್ಯಂಬುಲೆನ್ಸ್‌ ಸೇವೆ ಆರಂಭಿಸಿತ್ತು. ಇಎಂಆರ್‌ಐ ಸಂಸ್ಥೆಯೊಂದಿಗೆ ರಾಜ್ಯ ಸರ್ಕಾರ 2008ರ ಆ. 14ರಂದು ಒಡಂಬಡಿಕೆ ಮಾಡಿಕೊಂಡು 10 ವರ್ಷ ನಿರ್ವಹಣೆಯನ್ನು ಸಂಸ್ಥೆಗೆ ವಹಿಸಿತ್ತು.

ಅಕ್ರಮ- ಲೋಪ ಆರೋಪ: ಆರಂಭಿಕ ಕೆಲ ವರ್ಷಗಳ ನಂತರ ಸಂಸ್ಥೆಯ ಕಾರ್ಯ ನಿರ್ವಹಣೆ ಬಗ್ಗೆ ಆರೋಪಗಳು ಕೇಳಿಬರಲಾರಂಭಿಸಿದವು. ಮುಖ್ಯವಾಗಿ ನಿಯಮ ಪ್ರಕಾರ ಆ್ಯಂಬುಲೆನ್ಸ್‌ಗಳ ನಿರ್ವಹಣೆ ಮಾಡದಿರುವುದು, ಸಿಬ್ಬಂದಿ ಮೇಲೆ ಒತ್ತಡ ಹೇರುವುದು, ಆ್ಯಂಬುಲೆನ್ಸ್‌ ಸಂಚರಿಸದಿದ್ದರೂ ಹೆಚ್ಚುವರಿ ಕಿ.ಮೀ. ಅಂತರ ಕ್ರಮಿಸಿರುವುದಾಗಿ ನಕಲಿ ದಾಖಲೆ ಸೃಷ್ಟಿ, ರೋಗಿಗಳಿಗೆ ಸ್ಪಂದಿಸದಿರುವುದು ಇತರೆ ಆರೋಪ ಕೇಳಿಬಂದವು.

ಹೀಗಾಗಿ ನೋಟಿಸ್‌ ನೀಡಲಾಗಿತ್ತು ಇದರ ಬಳಿಕವೂ ನಿರ್ದೇಶನ ಪಾಲನೆಯಾಗಿರಲಿಲ್ಲ. 2017ರ ಅ. 13ರಿಂದ
ಅನ್ವಯವಾಗುವಂತೆ ಇಎಂಆರ್‌ಐನ ಗುತ್ತಿಗೆ ರದ್ದುಪಡಿಸಲಾಯಿತು.

ಟೆಂಡರ್‌ ಪ್ರಕ್ರಿಯೆ ವಿಳಂಬ: ಮೂರು ತಿಂಗಳಲ್ಲಿ ಟೆಂಡರ್‌ ಪ್ರಕ್ರಿಯೆ ಕೈಗೊಂಡು ಅರ್ಹ ಸಂಸ್ಥೆಗೆ ಗುತ್ತಿಗೆ ನೀಡಬೇಕಿತ್ತು. ಆದರೆ ಈ ಪ್ರಕ್ರಿಯೆ ನಡೆಯಲಿಲ್ಲ. ಜತೆಗೆ ಚುನಾವಣೆ ನೀತಿ ಸಂಹಿತೆಯಿಂದಾಗಿಯೂ ವಿಳಂಬ ವಾಯಿತು. ಗುತ್ತಿಗೆ ರದ್ದಾಗಿದ್ದರೂ ಇಎಂ ಆರ್‌ಐ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಿರಲಿಲ್ಲ. ಆದರೆ ಆ ಸಂಸ್ಥೆ ಹೊಸ ಟೆಂಡರ್‌ನಲ್ಲಿ ಪಾಲ್ಗೊಳ್ಳದಂತೆ ಇಲಾಖೆ ಷರತ್ತು ವಿಧಿಸಿತ್ತು. ಇದನ್ನು ಇಎಂಆರ್‌ಐ ನ್ಯಾಯಾಲಯದಲ್ಲಿ ಪ್ರಶ್ನಿಸಿ ಟೆಂಡರ್‌ನಲ್ಲಿ
ಪಾಲ್ಗೊಳ್ಳಲು ಅವಕಾಶ ಪಡೆದುಕೊಂಡಿತ್ತು.

ನಿಯಮಗಳನ್ನು ವೈಜ್ಞಾನಿಕವಾಗಿ ರೂಪಿಸದ ಕಾರಣ ಟೆಂಡರ್‌ ಪ್ರಕ್ರಿಯೆ ಮುಂದೂಡಿಕೆಯಾಗುತ್ತಿದೆ ಎಂದು ಇಲಾಖೆ ಹಿರಿಯ ಅಧಿಕಾರಿಯೊಬ್ಬರು ದೂರಿದ್ದಾರೆ. 2 ತಿಂಗಳಿನಿಂದೀಚೆಗೆ ಸಂಸ್ಥೆಯ ಸೇವೆ ಮೇಲೆ ಇಲಾಖೆ ಒಂದಿಷ್ಟು ನಿಗಾ ಇರಿಸಿದೆ. ಬೆಂಗಳೂರು ಸೇರಿದಂತೆ ಜಿಲ್ಲಾ ಮಟ್ಟ ದಲ್ಲಿ ಸೇವೆಯ ಗುಣಮಟ್ಟ, ಕಾರ್ಯ ನಿರ್ವಹಣೆಯನ್ನು ಪರಿಶೀಲಿಸಬೇಕು. ದಿಢೀರ್‌ ತಪಾಸಣೆ ಕೈಗೊಳ್ಳಬೇಕು. ತಕ್ಷಣ ವರದಿ ಮಾಡಬೇಕು ಎಂದು ಆಯುಕ್ತರು ಸೂಚಿಸಿದ್ದಾರೆ.

ಆ್ಯಂಬುಲೆನ್ಸ್‌ಗಳ ಕಾರ್ಯ ನಿರ್ವಹಣೆ ಬಗ್ಗೆ ನಿರಂತರ ಮೇಲ್ವಿಚಾರಣೆಗೆ ಸೂಚಿಸಲಾಗಿದೆ. ಲೋಪ ಕಂಡುಬಂದರೆ ಹಣ ಕಡಿತ ಮಾಡಿಕೊಂಡು ಬಾಕಿ ಮೊತ್ತವನ್ನಷ್ಟೇ ಪಾವತಿಸಲಾಗುತ್ತಿದೆ. ಶೀಘ್ರವೇ ಟೆಂಡರ್‌ ಪ್ರಕ್ರಿಯೆ ನಡೆಯಲಿದೆ.
–  ಎಂ.ವಿ. ಸಾವಿತ್ರಿ, ಆರೋಗ್ಯ ಮತ್ತು
ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.