ಗುತ್ತಿಗೆ ವಂಚಿತ ಸಂಸ್ಥೆಯಿಂದಲೇ 108 ಚಾಲನೆ!


Team Udayavani, Jun 28, 2018, 6:00 AM IST

108-amb.jpg

ಬೆಂಗಳೂರು: ಸಾರ್ವಜನಿಕರ ತುರ್ತು ಚಿಕಿತ್ಸೆಗಾಗಿ ಆರಂಭಿಸಿದ “108 ಆರೋಗ್ಯ ಕವಚ’ ಉಚಿತ ಆ್ಯಂಬುಲೆನ್ಸ್‌ ಸೇವೆಯನ್ನು ಸಮರ್ಪಕವಾಗಿ ನಿರ್ವಹಿಸದ ಹಿನ್ನೆಲೆಯಲ್ಲಿ ಗುತ್ತಿಗೆ ವಂಚಿತ ಸಂಸ್ಥೆಯೇ ಕಳೆದ 11
ತಿಂಗಳಿನಿಂದ ಸೇವೆ ಮುಂದುವರಿಸಿದೆ!

ಗುತ್ತಿಗೆ ಪೂರ್ಣಗೊಳ್ಳಲು 1 ವರ್ಷ ಇರುವಂತೆಯೇ ಸಿಕಂದರಾಬಾದ್‌ನ ಎಮರ್ಜೆ ನ್ಸಿ ಮ್ಯಾನೇಜ್‌ಮೆಂಟ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ (ಇಎಂಆರ್‌ಐ) ಜತೆಗಿನ ಒಪ್ಪಂದ ರದ್ದುಗೊಳಿಸಲಾಗಿತ್ತು. ಆದರೆ ಅಧಿಕಾರಿಗಳು ಸೂಕ್ತ ನಿಯಮಾವಳಿ ರೂಪಿಸಿ ಹೊಸ ಟೆಂಡರ್‌ ಪ್ರಕ್ರಿಯೆ ನಡೆಸದ ಕಾರಣ ಹಳೆಯ ಸಂಸ್ಥೆಯ ಸೇವೆಯೇ ಮುಂದುವರಿದಿದೆ.

ತರ್ತುಚಿಕಿತ್ಸೆಗಾಗಿ ಅನುಕೂಲವಾಗುವಂತೆ ಸರ್ಕಾರ “108 ಆರೋಗ್ಯ ಕವಚ’ ಯೋಜನೆಯಡಿ ಉಚಿತ ಆ್ಯಂಬುಲೆನ್ಸ್‌ ಸೇವೆ ಆರಂಭಿಸಿತ್ತು. ಇಎಂಆರ್‌ಐ ಸಂಸ್ಥೆಯೊಂದಿಗೆ ರಾಜ್ಯ ಸರ್ಕಾರ 2008ರ ಆ. 14ರಂದು ಒಡಂಬಡಿಕೆ ಮಾಡಿಕೊಂಡು 10 ವರ್ಷ ನಿರ್ವಹಣೆಯನ್ನು ಸಂಸ್ಥೆಗೆ ವಹಿಸಿತ್ತು.

ಅಕ್ರಮ- ಲೋಪ ಆರೋಪ: ಆರಂಭಿಕ ಕೆಲ ವರ್ಷಗಳ ನಂತರ ಸಂಸ್ಥೆಯ ಕಾರ್ಯ ನಿರ್ವಹಣೆ ಬಗ್ಗೆ ಆರೋಪಗಳು ಕೇಳಿಬರಲಾರಂಭಿಸಿದವು. ಮುಖ್ಯವಾಗಿ ನಿಯಮ ಪ್ರಕಾರ ಆ್ಯಂಬುಲೆನ್ಸ್‌ಗಳ ನಿರ್ವಹಣೆ ಮಾಡದಿರುವುದು, ಸಿಬ್ಬಂದಿ ಮೇಲೆ ಒತ್ತಡ ಹೇರುವುದು, ಆ್ಯಂಬುಲೆನ್ಸ್‌ ಸಂಚರಿಸದಿದ್ದರೂ ಹೆಚ್ಚುವರಿ ಕಿ.ಮೀ. ಅಂತರ ಕ್ರಮಿಸಿರುವುದಾಗಿ ನಕಲಿ ದಾಖಲೆ ಸೃಷ್ಟಿ, ರೋಗಿಗಳಿಗೆ ಸ್ಪಂದಿಸದಿರುವುದು ಇತರೆ ಆರೋಪ ಕೇಳಿಬಂದವು.

ಹೀಗಾಗಿ ನೋಟಿಸ್‌ ನೀಡಲಾಗಿತ್ತು ಇದರ ಬಳಿಕವೂ ನಿರ್ದೇಶನ ಪಾಲನೆಯಾಗಿರಲಿಲ್ಲ. 2017ರ ಅ. 13ರಿಂದ
ಅನ್ವಯವಾಗುವಂತೆ ಇಎಂಆರ್‌ಐನ ಗುತ್ತಿಗೆ ರದ್ದುಪಡಿಸಲಾಯಿತು.

ಟೆಂಡರ್‌ ಪ್ರಕ್ರಿಯೆ ವಿಳಂಬ: ಮೂರು ತಿಂಗಳಲ್ಲಿ ಟೆಂಡರ್‌ ಪ್ರಕ್ರಿಯೆ ಕೈಗೊಂಡು ಅರ್ಹ ಸಂಸ್ಥೆಗೆ ಗುತ್ತಿಗೆ ನೀಡಬೇಕಿತ್ತು. ಆದರೆ ಈ ಪ್ರಕ್ರಿಯೆ ನಡೆಯಲಿಲ್ಲ. ಜತೆಗೆ ಚುನಾವಣೆ ನೀತಿ ಸಂಹಿತೆಯಿಂದಾಗಿಯೂ ವಿಳಂಬ ವಾಯಿತು. ಗುತ್ತಿಗೆ ರದ್ದಾಗಿದ್ದರೂ ಇಎಂ ಆರ್‌ಐ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಿರಲಿಲ್ಲ. ಆದರೆ ಆ ಸಂಸ್ಥೆ ಹೊಸ ಟೆಂಡರ್‌ನಲ್ಲಿ ಪಾಲ್ಗೊಳ್ಳದಂತೆ ಇಲಾಖೆ ಷರತ್ತು ವಿಧಿಸಿತ್ತು. ಇದನ್ನು ಇಎಂಆರ್‌ಐ ನ್ಯಾಯಾಲಯದಲ್ಲಿ ಪ್ರಶ್ನಿಸಿ ಟೆಂಡರ್‌ನಲ್ಲಿ
ಪಾಲ್ಗೊಳ್ಳಲು ಅವಕಾಶ ಪಡೆದುಕೊಂಡಿತ್ತು.

ನಿಯಮಗಳನ್ನು ವೈಜ್ಞಾನಿಕವಾಗಿ ರೂಪಿಸದ ಕಾರಣ ಟೆಂಡರ್‌ ಪ್ರಕ್ರಿಯೆ ಮುಂದೂಡಿಕೆಯಾಗುತ್ತಿದೆ ಎಂದು ಇಲಾಖೆ ಹಿರಿಯ ಅಧಿಕಾರಿಯೊಬ್ಬರು ದೂರಿದ್ದಾರೆ. 2 ತಿಂಗಳಿನಿಂದೀಚೆಗೆ ಸಂಸ್ಥೆಯ ಸೇವೆ ಮೇಲೆ ಇಲಾಖೆ ಒಂದಿಷ್ಟು ನಿಗಾ ಇರಿಸಿದೆ. ಬೆಂಗಳೂರು ಸೇರಿದಂತೆ ಜಿಲ್ಲಾ ಮಟ್ಟ ದಲ್ಲಿ ಸೇವೆಯ ಗುಣಮಟ್ಟ, ಕಾರ್ಯ ನಿರ್ವಹಣೆಯನ್ನು ಪರಿಶೀಲಿಸಬೇಕು. ದಿಢೀರ್‌ ತಪಾಸಣೆ ಕೈಗೊಳ್ಳಬೇಕು. ತಕ್ಷಣ ವರದಿ ಮಾಡಬೇಕು ಎಂದು ಆಯುಕ್ತರು ಸೂಚಿಸಿದ್ದಾರೆ.

ಆ್ಯಂಬುಲೆನ್ಸ್‌ಗಳ ಕಾರ್ಯ ನಿರ್ವಹಣೆ ಬಗ್ಗೆ ನಿರಂತರ ಮೇಲ್ವಿಚಾರಣೆಗೆ ಸೂಚಿಸಲಾಗಿದೆ. ಲೋಪ ಕಂಡುಬಂದರೆ ಹಣ ಕಡಿತ ಮಾಡಿಕೊಂಡು ಬಾಕಿ ಮೊತ್ತವನ್ನಷ್ಟೇ ಪಾವತಿಸಲಾಗುತ್ತಿದೆ. ಶೀಘ್ರವೇ ಟೆಂಡರ್‌ ಪ್ರಕ್ರಿಯೆ ನಡೆಯಲಿದೆ.
–  ಎಂ.ವಿ. ಸಾವಿತ್ರಿ, ಆರೋಗ್ಯ ಮತ್ತು
ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.