ಶ್ರೀನಿವಾಸ ಪೂಜಾರಿ ಪರಿಷತ್ ಪ್ರತಿಪಕ್ಷ ನಾಯಕ
Team Udayavani, Jun 30, 2018, 6:05 AM IST
ಬೆಂಗಳೂರು: ರಾಜ್ಯ ವಿಧಾನಪರಿಷತ್ನಲ್ಲಿ ಪ್ರತಿಪಕ್ಷ ನಾಯಕರಾಗಿ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆವರನ್ನು ನೇಮಿಸಲು ಬಿಜೆಪಿ ಕೋರ್ ಕಮಿಟಿ ತೀರ್ಮಾನಿಸಿದೆ.
ಶುಕ್ರವಾರ ನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ, ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಪ್ರತಿಪಕ್ಷ ನಾಯಕರಾಗಿ ಆಯ್ಕೆ ಮಾಡಲು ನಿರ್ಧರಿಸಲಾಯಿತು.
ಪ್ರತಿಪಕ್ಷದ ಸಚೇತಕರಾಗಿ ಬೆಳಗಾವಿಯ ಮಹಂತೇಶ ಕವಟಗಿ ಮಠ ಅವರನ್ನು ನೇಮಿಸಲು ಸಹ ಕೋರ್ ಕಮಿಟಿ ತೀರ್ಮಾನಿಸಿತು.
ಸದ್ಯದಲ್ಲೇ ಬರಬಹುದಾದ ಮೂರು ಕ್ಷೇತ್ರಗಳ ಲೋಕಸಭೆ ಉಪ ಚುನಾವಣೆಗೆ, ಮುಂದಿನ ಲೋಕಸಭೆ ಚುನಾವಣೆಗೆ ಸಿದ್ಧತೆ, ರಾಜ್ಯ ಸರ್ಕಾರ ದ ವೈಫಲ್ಯಗಳ ವಿರುದಟಛಿ ಜನಜಾಗೃತಿ, ವಿಧಾನಮಂಡಲ ಅಧಿವೇಶನದಲ್ಲಿ ಸಮ್ಮಿಶ್ರ ಸರ್ಕಾರದ ವಿರುದಟಛಿ ಎರಡೂ ಸದನಗಳಲ್ಲಿ ಸಂಘಟಿತವಾಗಿ ಕಾರ್ಯನಿ ರ್ವಹಿಸಲು ಕಾರ್ಯತಂತ್ರಗಳ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಹೇಳಲಾಗಿದೆ.
ಮೇಲ್ಮನೆಗೆ ಮೂರನೇ ಬಾರಿ ಆಯ್ಕೆ
ಕೋಟಾ ಶ್ರೀನಿವಾಸ ಪೂಜಾರಿ ಅವರು ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ಗೆ ಮೂರನೇ ಬಾರಿ ಆಯ್ಕೆಯಾಗಿದ್ದು, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮುಜರಾಯಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಪರಿಷತ್ನಲ್ಲಿ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಅರುಣ್ ಶಹಾಪುರ ಅವರು ಆಕಾಂಕ್ಷಿಯಾಗಿದ್ದರಾದರೂ ಕೋರ್ ಕಮಿಟಿ ಸಭೆಯಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಅವಕಾಶ ಕೊಡಲು ತೀರ್ಮಾನಿಸಲಾಯಿತು. ಸಂಸದೆ ಶೋಭಾ ಕರಂದ್ಲಾಜೆ ಆವರನ್ನು ವಿಧಾನಪರಿಷತ್ಗೆ ಆಯ್ಕೆ ಮಾಡಿ ಪ್ರತಿಪಕ್ಷ ನಾಯಕಿ ಮಾಡುವ ಮಾತುಗಳು ಕೇಳಿ ಬಂದಿದ್ದವಾದರೂ ಶೋಭಾ ಕರಂದ್ಲಾಜೆ ಅವರು ಆ ಬಗ್ಗೆ ಆಸಕ್ತಿ ತೋರಲಿಲ್ಲ ಎಂದು ಹೇಳಲಾಗಿದೆ.
ಬಿಜೆಪಿ ನಾಯಕರು ಯಾರೂ ಸಮ್ಮಿಶ್ರ ಸರ್ಕಾರ ಬಿಜೆಪಿಯ ನಿಲುವು ಕುರಿತು ಬಹಿರಂಗವಾಗಿ ಹೇಳಿಕೆ ಕೊಡಬಾರದು.
ಗೊಂದಲ ಮೂಡಿಸುವಂತ ಹೇಳಿಕೆಗಳಿಗೆ ಕಡಿವಾಣ ಹಾಕಿಕೊಳ್ಳಿ.ನಾವು ಪ್ರತಿ ಹೆಜ್ಜೆಯನ್ನೂ ಸೂಕ್ಷ್ಮವಾಗಿ ಇಡಬೇಕಾಗಿದೆ. ಮಾಧ್ಯಮಗಳ ಮುಂದೆ ಹೇಳಿಕೆ ಕೊಡುವಾಗ ಆದಷ್ಟೂ ಜಾಗರೂಕತೆ ವಹಿಸಿ.
– ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ