ನನ್ನನ್ನು ಯಾರೂ ಸೈಡ್ಲೈನ್ ಮಾಡಿಲ್ಲ
Team Udayavani, Jul 3, 2018, 7:25 AM IST
ಬಾಗಲಕೋಟೆ: ವಿಜಯಪುರ ಜಿಲ್ಲೆಯ ಭೀಮಾ ತೀರದ ಶೂಟೌಟ್ ಪ್ರಕರಣದಲ್ಲಿ ಯಾವುದೇ ರಾಜಕೀಯ ಒತ್ತಡ
ಇರಲಿಲ್ಲ. ಈ ವಿಷಯದಲ್ಲಿ ಪೊಲೀಸ್ ಇಲಾಖೆಯಲ್ಲಿ ಯಾರೂ ಸೈಡ್ಲೈನ್ ಮಾಡಿಲ್ಲ ಎಂದು ಉತ್ತರ ವಲಯದ ಐಜಿಪಿ ಅಲೋಕ ಕುಮಾರ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾಧರ ಚಡಚಣ ಕೊಲೆ ಪ್ರಕರಣ, ಧರ್ಮರಾಜ್ ಚಡಚಣ ಶೂಟೌಟ್ ಪ್ರಕರಣ ಪತ್ತೆ ಮಾಡಲು ಇಲಾಖೆ ಸಮರ್ಪಕ ತನಿಖೆ ನಡೆಸಿತ್ತು.
ನಾವು ನಡೆಸಿದ ತನಿಖೆಯ ದಾಖಲೆಗಳನ್ನೇ ಸಿಐಡಿಗೆ ಸಲ್ಲಿಸಿದ್ದೇವೆ. ಸಿಐಡಿ ಅಧಿಕಾರಿಗಳು ಮುಂದಿನ ತನಿಖೆ
ನಡೆಸಿದ್ದಾರೆ. ಈಗ ಆರು ತಿಂಗಳಿಂದ ಇಂತಹ ಪ್ರಕರಣಗಳು ಪದೇಪದೆ ನಡೆದಿಲ್ಲ. ಹಿಂದೆ ಆಗಿರಬಹುದು. ಭೀಮಾ
ತೀರದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಿದ್ದೇವೆ. ವಿಜಯಪುರ ಜಿಲ್ಲೆಯಾದ್ಯಂತ ಪಿಸ್ತೂಲ್
ಬಳಕೆದಾರರ ಮರು ಪರಿಶೀಲನೆ ನಡೆಸುತ್ತಿದ್ದೇವೆ. ಅವಶ್ಯಕತೆ ಇದ್ದವರಿಗೆ ಮಾತ್ರ ಪಿಸ್ತೂಲ್ ಇಟ್ಟುಕೊಳ್ಳಲು
ಅವಕಾಶ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ