ಬಜೆಟ್ ವಿಶ್ಲೇಷಣೆ: ಮಾರುಕಟ್ಟೆ ವ್ಯವಸ್ಥೆ ಕೂಡ ಕೃಷಿಗೆ ಅತ್ಯಗತ್ಯ
Team Udayavani, Jul 6, 2018, 7:00 AM IST
ಕೃಷಿ ಮತ್ತು ತೋಟಗಾರಿಕೆ ಅಭಿವೃದ್ಧಿಗೆ ಸರ್ಕಾರ ಇಸ್ರೇಲ್ ಮಂತ್ರ ಪಠಿಸಿದೆ.ಘೋಷಿಸಿದ ಕಾರ್ಯಕ್ರಮಗಳು ವ್ಯವಸ್ಥಿತವಾಗಿ ಅನುಷ್ಠಾನಗೊಂಡರೆ, ರಾಜ್ಯದ ರೈತರ ಭಾಗ್ಯದ ಬಾಗಿಲು ತೆರೆಯಲಿದೆ. ಆದರೆ, ಇದು ಸಮರ್ಪಕವಾಗಿ ಅನುಷ್ಠಾನ ಆಗುತ್ತದೆಯೇ ಎಂಬುದು ಪ್ರಶ್ನೆ. ಯಾಕೆಂದರೆ, ಈ ಹಿಂದಿನ ಅನುಷ್ಠಾನ ಮತ್ತು ಅದರ
ಫಲಿತಾಂಶಗಳು ಇಂತಹದ್ದೊಂದು ಅನುಮಾನವನ್ನು ಹುಟ್ಟು ಹಾಕುತ್ತವೆ.
ಅದೇನೇ ಇರಲಿ, ಪ್ರಸ್ತುತ ರಾಜ್ಯದ ರೈತರ ತಲಾ ವಾರ್ಷಿಕ ಆದಾಯ ಸರಾಸರಿ 50 ಸಾವಿರ ರೂ. ಇದೆ. ಒಂದು ವೇಳೆ ಇಸ್ರೇಲ್ ಮಾದರಿ ವ್ಯವಸ್ಥಿತವಾಗಿ ಜಾರಿಗೆ ಬಂದರೆ, ಈ ಆದಾಯ ಪ್ರಮಾಣ ಮೂರುಪಟ್ಟು ಹೆಚ್ಚಳ ಆಗುವುದರಲ್ಲಿ ಅನುಮಾನ ಇಲ್ಲ.ಬೇರೆ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕದ ಕೃಷಿ ಉತ್ಪನ್ನ ಮೌಲ್ಯದಲ್ಲಿ ತೋಟಗಾರಿಕೆ ಪಾಲು ಶೇ.50ಕ್ಕಿಂತ ಹೆಚ್ಚಿದೆ. ಇಸ್ರೇಲ್ ಮಾದರಿಯ ನೀರಾವರಿ ಪದಟಛಿತಿಯಿಂದ ಖುಷ್ಕಿ ಜಮೀನಿನಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ವಿಪುಲ ಅವಕಾಶಗಳಿವೆ. ಇದಕ್ಕೆ ತಕ್ಕಂತೆ ಮಾರುಕಟ್ಟೆ ವ್ಯವಸ್ಥೆಯೂ ಆಗಬೇಕು.
ಕಾರ್ಯಕ್ರಮಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲೇ ಸಮನ್ವಯ ಸಮಿತಿ ರಚನೆ ಮತ್ತೂಂದು ಉತ್ತಮ ಹೆಜ್ಜೆಯಾಗಿದೆ. ಕೃಷಿ ಮತ್ತು ತೋಟಗಾರಿಕೆ ಬೆಳವಣಿಗೆಗೆ ವಾಸ್ತವ ನೆಲೆಯಲ್ಲಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಇದಾಗಿದೆ. ಅದರಲ್ಲೂ ಬರ, ನೆರೆ, ಬೆಲೆ ಕುಸಿತ…ಹೀಗೆ ಒಂದಿಲ್ಲೊಂದು ರೀತಿಯಲ್ಲಿ ರೈತರು ಇಂದು ಸಂಕಷ್ಟದಲ್ಲಿದ್ದಾರೆ.ಈ ಹಿನ್ನೆಲೆಯಲ್ಲಿ ಸಾಲದಿಂದಾದರೂ ಅವರನ್ನು ತುಸು ಮುಕ್ತ ಮಾಡುವ ಸರ್ಕಾರದ ಕ್ರಮ ಸ್ವಾಗತಾರ್ಹ.
– ಡಾ.ಎಂ.ಜಿ. ಚಂದ್ರಕಾಂತ್
ನಿರ್ದೇಶಕರು, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ
ಸಂಸ್ಥೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ