ಬಜೆಟ್ ವಿಶ್ಲೇಷಣೆ: ಮಾರುಕಟ್ಟೆ ವ್ಯವಸ್ಥೆ ಕೂಡ ಕೃಷಿಗೆ ಅತ್ಯಗತ್ಯ
Team Udayavani, Jul 6, 2018, 7:00 AM IST
ಕೃಷಿ ಮತ್ತು ತೋಟಗಾರಿಕೆ ಅಭಿವೃದ್ಧಿಗೆ ಸರ್ಕಾರ ಇಸ್ರೇಲ್ ಮಂತ್ರ ಪಠಿಸಿದೆ.ಘೋಷಿಸಿದ ಕಾರ್ಯಕ್ರಮಗಳು ವ್ಯವಸ್ಥಿತವಾಗಿ ಅನುಷ್ಠಾನಗೊಂಡರೆ, ರಾಜ್ಯದ ರೈತರ ಭಾಗ್ಯದ ಬಾಗಿಲು ತೆರೆಯಲಿದೆ. ಆದರೆ, ಇದು ಸಮರ್ಪಕವಾಗಿ ಅನುಷ್ಠಾನ ಆಗುತ್ತದೆಯೇ ಎಂಬುದು ಪ್ರಶ್ನೆ. ಯಾಕೆಂದರೆ, ಈ ಹಿಂದಿನ ಅನುಷ್ಠಾನ ಮತ್ತು ಅದರ
ಫಲಿತಾಂಶಗಳು ಇಂತಹದ್ದೊಂದು ಅನುಮಾನವನ್ನು ಹುಟ್ಟು ಹಾಕುತ್ತವೆ.
ಅದೇನೇ ಇರಲಿ, ಪ್ರಸ್ತುತ ರಾಜ್ಯದ ರೈತರ ತಲಾ ವಾರ್ಷಿಕ ಆದಾಯ ಸರಾಸರಿ 50 ಸಾವಿರ ರೂ. ಇದೆ. ಒಂದು ವೇಳೆ ಇಸ್ರೇಲ್ ಮಾದರಿ ವ್ಯವಸ್ಥಿತವಾಗಿ ಜಾರಿಗೆ ಬಂದರೆ, ಈ ಆದಾಯ ಪ್ರಮಾಣ ಮೂರುಪಟ್ಟು ಹೆಚ್ಚಳ ಆಗುವುದರಲ್ಲಿ ಅನುಮಾನ ಇಲ್ಲ.ಬೇರೆ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕದ ಕೃಷಿ ಉತ್ಪನ್ನ ಮೌಲ್ಯದಲ್ಲಿ ತೋಟಗಾರಿಕೆ ಪಾಲು ಶೇ.50ಕ್ಕಿಂತ ಹೆಚ್ಚಿದೆ. ಇಸ್ರೇಲ್ ಮಾದರಿಯ ನೀರಾವರಿ ಪದಟಛಿತಿಯಿಂದ ಖುಷ್ಕಿ ಜಮೀನಿನಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ವಿಪುಲ ಅವಕಾಶಗಳಿವೆ. ಇದಕ್ಕೆ ತಕ್ಕಂತೆ ಮಾರುಕಟ್ಟೆ ವ್ಯವಸ್ಥೆಯೂ ಆಗಬೇಕು.
ಕಾರ್ಯಕ್ರಮಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲೇ ಸಮನ್ವಯ ಸಮಿತಿ ರಚನೆ ಮತ್ತೂಂದು ಉತ್ತಮ ಹೆಜ್ಜೆಯಾಗಿದೆ. ಕೃಷಿ ಮತ್ತು ತೋಟಗಾರಿಕೆ ಬೆಳವಣಿಗೆಗೆ ವಾಸ್ತವ ನೆಲೆಯಲ್ಲಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಇದಾಗಿದೆ. ಅದರಲ್ಲೂ ಬರ, ನೆರೆ, ಬೆಲೆ ಕುಸಿತ…ಹೀಗೆ ಒಂದಿಲ್ಲೊಂದು ರೀತಿಯಲ್ಲಿ ರೈತರು ಇಂದು ಸಂಕಷ್ಟದಲ್ಲಿದ್ದಾರೆ.ಈ ಹಿನ್ನೆಲೆಯಲ್ಲಿ ಸಾಲದಿಂದಾದರೂ ಅವರನ್ನು ತುಸು ಮುಕ್ತ ಮಾಡುವ ಸರ್ಕಾರದ ಕ್ರಮ ಸ್ವಾಗತಾರ್ಹ.
– ಡಾ.ಎಂ.ಜಿ. ಚಂದ್ರಕಾಂತ್
ನಿರ್ದೇಶಕರು, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ
ಸಂಸ್ಥೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು