ಸಚಿವರು, ಅಧಿಕಾರಿಗಳ ಗೈರು: ಸಭಾಪತಿ ಎಚ್ಚರಿಕೆ
Team Udayavani, Jul 10, 2018, 6:50 AM IST
ವಿಧಾನ ಪರಿಷತ್: ಸದನದಲ್ಲಿ ಕಡ್ಡಾಯವಾಗಿ ಹಾಜರಿರ ಬೇಕಿರುವ ಸಚಿವರು ಮತ್ತು ಅಧಿಕಾರಿಗಳು ಗೈರು ಹಾಜರಾದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರು ಮತ್ತು ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ನೋಡಿಕೊಳ್ಳಿ ಎಂದು ಸಭಾನಾಯಕಿ ಡಾ.ಜಯಮಾಲಾ ಅವರಿಗೆ ತಾಕೀತು ಮಾಡಿದ್ದಾರೆ.
ಸದನಕ್ಕೆ ಬಾರದೆ ಅಧಿಕಾರಿಗಳು ತಪ್ಪಿಸಿಕೊಂಡರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ. ಶೀಘ್ರವೇ ಮುಖ್ಯ ಕಾರ್ಯದರ್ಶಿಗಳ ಸಭೆ ಕರೆದು ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಸೋಮವಾರ ವಿಧಾನ ಪರಿಷತ್ನಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಜಿ.ಟಿ.ದೇವೇಗೌಡ, ಪ್ರಿಯಾಂಕ್ ಖರ್ಗೆ, ಸಾ.ರಾ.ಮಹೇಶ್, ಪುಟ್ಟರಂಗ ಶೆಟ್ಟಿ ಹಾಗೂ ಶಿವಶಂಕರ ರೆಡ್ಡಿ ಕಡ್ಡಾಯವಾಗಿ ಹಾಜರಿರಬೇಕಿತ್ತು.ಆದರೆ, ಪುಟ್ಟರಂಗ ಶೆಟ್ಟಿ ಮತ್ತು ಶಿವಶಂಕರ ರೆಡ್ಡಿ ಮಾತ್ರ ಹಾಜರಿದ್ದರು. ಅದೇ ರೀತಿ ಅಧಿಕಾರಿಗಳಾದ ಅಜಯ್ ಸೇs…, ನಾರಾಯಣಸ್ವಾಮಿ, ಎಸ್.ಸಿ.ಶ್ರೀನಿವಾಸ್, ಎ.ಬಸವರಾಜ್ ಕಡ್ಡಾಯವಾಗಿ ಹಾಜರಿರಬೇಕಿತ್ತು. ಆ ಸಂದರ್ಭದಲ್ಲಿ ಕೆಲವರು ಹಾಜರಿಲ್ಲದಿದ್ದನ್ನು ಗಮನಿಸಿದ
ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಸ್ಪೀಕರ್ ಸೂಚನೆ ನೀಡಿದ ತಕ್ಷಣ ಅಧಿಕಾರಿಗಳು ಸದನಕ್ಕೆ ಹಾಜರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ