ಎಂ. ಕೃಷ್ಣಾರೆಡ್ಡಿ ಉಪಸಭಾಧ್ಯಕ್ಷ
Team Udayavani, Jul 7, 2018, 6:00 AM IST
ಬೆಂಗಳೂರು: ವಿಧಾನಸಭೆ ಉಪ ಸಭಾಧ್ಯಕ್ಷರಾಗಿ ಚಿಂತಾಮಣಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಕೃಷ್ಣಾರೆಡ್ಡಿ ಅವರನ್ನು ಶುಕ್ರವಾರ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇದರೊಂದಿಗೆ ವಿಧಾನಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳೆರಡೂ ಅವಿಭಜಿತ ಕೋಲಾರ ಜಿಲ್ಲೆಗೆ ಸಿಕ್ಕಿದಂತಾಗಿದೆ. ಸಭಾಧ್ಯಕ್ಷ ರಮೇಶ್ ಕುಮಾರ್ ಅವರು ಕೋಲಾರ ಜಿಲ್ಲೆ ಶ್ರೀನಿವಾಸಪುರ ಕ್ಷೇತ್ರದವರಾದರೆ, ಕೃಷ್ಣಾರೆಡ್ಡಿ, ಪಕ್ಕದ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯವರು. ಉಪಸಭಾಧ್ಯಕ್ಷರ ಹುದ್ದೆಗೆ ಶುಕ್ರವಾರ ಚುನಾವಣೆ ನಡೆಯಿತು.
ಸ್ಪೀಕರ್ ರಮೇಶ್ಕುಮಾರ್ ಚುನಾವಣಾ ಪ್ರಸ್ತಾಪ ಮಂಡಿಸಿದಾಗ ಜೆಡಿಎಸ್ನ ಕೆ.ಎಂ. ಶಿವಲಿಂಗೇಗೌಡ ಅವರು ಉಪ ಸಭಾಧ್ಯಕ್ಷ ಸ್ಥಾನಕ್ಕೆ ಎಂ.ಕೃಷ್ಣಾರೆಡ್ಡಿ ಹೆಸರು ಸೂಚಿಸಿದರೆ, ಕೆ.ಗೋಪಾಲಯ್ಯ ಅನುಮೋದಿಸಿದರು.