ಇಲಾಖೆಗಳಿಗೆ ಮೀಸಲಿಟ್ಟ ಕೋಟ್ಯಂತರ ರೂ.ಬಳಕೆಯಾಗಿಲ್ಲ
Team Udayavani, Jul 8, 2018, 7:00 AM IST
ಬೆಂಗಳೂರು: ಬಜೆಟ್ನಲ್ಲಿ ಸಾಲ ಮನ್ನಾ ಮತ್ತಿತರ ಬಾಬ್ತುಗಳಿಗೆ ಹಣ ಹೊಂದಿಸಲು ಪರದಾಡುತ್ತಿರುವ ಸರ್ಕಾರ, ಹಿಂದಿನ ಆರ್ಥಿಕ ವರ್ಷದಲ್ಲಿ ಇಲಾಖೆಗಳಿಗೆ ಬಿಡುಗಡೆ ಮಾಡಿರುವ ಹಣವನ್ನು ಸರಿಯಾಗಿ ಬಳಕೆ ಮಾಡದೇ ಇರುವುದು ಬೆಳಕಿಗೆ ಬಂದಿದೆ.
2016-17ನೇ ಸಾಲಿನಲ್ಲಿ ಬಜೆಟ್ನಲ್ಲಿ ವಿವಿಧ ಇಲಾಖೆಗಳಿಗೆ ಮೀಸಲಿಟ್ಟಿದ್ದ 13,007 ಕೋಟಿ ರೂ.ಬಳಕೆಯಾಗದೆ ವಾಪಸ್ ಮಾಡಿರುವುದು ಸಿಎಜಿ ವರದಿಯಿಂದ ಬಹಿರಂಗಗೊಂಡಿದೆ.
2016-17ನೇ ಸಾಲಿನಲ್ಲಿ ರಾಜ್ಯದ ಬಜೆಟ್ 1,86,052 ಕೋಟಿ ರೂ. ಪೈಕಿ 1,73,045 ಕೋಟಿ ರೂ.ಬಳಕೆಯಾಗಿದ್ದು, ಉಳಿದ 13,007 ಕೋಟಿ ಅಂದರೆ, ಒಟ್ಟು ಬಜೆಟ್ನ ಶೇ.7ರಷ್ಟು ಹಣ ಬಳಕೆಯಾಗದೆ ಉಳಿದುಕೊಂಡಿದೆ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ಬಿಡುಗಡೆ ಮಾಡಿದ ಅನುದಾನದಲ್ಲಿ 1381 ಕೋಟಿ ರೂ.ಬಳಕೆಯಾಗದಿರುವುದು. ಅಲ್ಪಸಂಖ್ಯಾತ ನಿರ್ದೇಶನಾಲಯಕ್ಕೆ ಬಿಡುಗಡೆ ಮಾಡಿದ್ದ ಅಲ್ಪ ಸಂಖ್ಯಾತರ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿ 260 ಕೋಟಿ ರೂ.ಗಳನ್ನು ವೈಯಕ್ತಿಕ ಠೇವಣಿಯಲ್ಲಿ ಇಟ್ಟಿರುವುದು ನಷ್ಟಕ್ಕೆ ಕಾರಣವಾಗಿದೆ ಎಂದು ಸಿಎಜಿ ವರದಿಯಲ್ಲಿ ತಿಳಿಸಲಾಗಿದೆ.
ಅರಣ್ಯ ಮತ್ತು ಜೀವಿಶಾಸOಉ ಇಲಾಖೆಯಲ್ಲಿ 146 ಕೋಟಿ ರೂ. ಸಮಾಜ ಕಲ್ಯಾಣ ಇಲಾಖೆಯಲ್ಲಿ 411 ಕೋಟಿ ರೂ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 186 ಕೋಟಿ ರೂ.,ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ 170 ಕೋಟಿ ರೂ., ವಸತಿ ಇಲಾಖೆಯಲ್ಲಿ 259 ಕೋಟಿ ರೂ., ಶಿಕ್ಷಣ ಇಲಾಖೆಯಲ್ಲಿ 974 ಕೋಟಿ ರೂ. ಬಳಕೆಯಾಗದೆ ಉಳಿದಿದೆ ಎಂದು ಸಿಎಜಿ ವರದಿಯಲ್ಲಿ ಪತ್ತೆ ಹಚ್ಚಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’