ಮದುವೆ ಮನೆಗೆ ಎಸ್ಐಟಿ ಕಾವಲು
Team Udayavani, Jul 8, 2018, 7:05 AM IST
ಬೆಳಗಾವಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಬೀಡು ಬಿಟ್ಟಿರುವ ಎಸ್ಐಟಿ ತಂಡ, ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಶನಿವಾರ ಮದುವೆ ಕಾರ್ಯಕ್ರಮವೊಂದಕ್ಕೆ ಶಂಕಿತ ಆರೋಪಿ ಬರುವ ನಿರೀಕ್ಷೆಯಲ್ಲಿ ಆತನಿಗಾಗಿ ಕಾದು, ಬರಿಗೈಯಲ್ಲಿ ಮರಳಿದೆ.
ಕಳೆದ 20 ದಿನಗಳಿಂದ ಬೆಳಗಾವಿಯಲ್ಲಿಯೇ ಎಸ್ಐಟಿ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಗೌರಿ ಲಂಕೇಶ್ ಹತ್ಯೆಯ ಪ್ರಮುಖ ಆರೋಪಿ ಪರುಶರಾಮ ವಾಗ್ಮೋರೆ ತನಿಖೆ ವೇಳೆ ಬಾಯಿ ಬಿಟ್ಟಿರುವ ಮಾಹಿತಿ ಆಧರಿಸಿ ಬಸ್ತವಾಡ ಗ್ರಾಮದಲ್ಲಿ ಯುವಕರಿಬ್ಬರ ವಿಚಾರಣೆಗೆ ಬಂದಿಳಿದಿದ್ದರು. ಶುಕ್ರವಾರ ತಡರಾತ್ರಿ ಬಸ್ತವಾಡಕ್ಕೆ ತೆರಳಿ ಮಾಹಿತಿ ಕಲೆ ಹಾಕಿದ್ದರು. ಗ್ರಾಮದಲ್ಲಿ ಶನಿವಾರ ವಿವಾಹ ಕಾರ್ಯಕ್ರಮವಿತ್ತು. ಅದರಲ್ಲಿ ಶಂಕಿತ ಆರೋಪಿ ಪಾಲ್ಗೊಳ್ಳಬಹುದು ಎಂದು ಶಂಕಿಸಿ ಎಸ್ಐಟಿ ತಂಡದವರು ಗ್ರಾಮದಲ್ಲಿ ಬೆಳಗ್ಗೆಯಿಂದಲೇ ಬೀಡು ಬಿಟ್ಟು ನಿಗಾ ಇರಿಸಿದ್ದರು. ಮಾರುವೇಷದಲ್ಲಿ ಬಂದಿದ್ದ ತಂಡದವರು ಮಧ್ಯಾಹ್ನ ಮದುವೆ ಮುಗಿಯುವವರೆಗೂ ಕಾಯುತ್ತ ಕುಳಿತಿದ್ದರು. ಕೊನೆ ಕ್ಷಣದವರೆಗೂ ಆತ ಬರಲಿಲ್ಲ ಎಂಬುದನ್ನು ಖಾತ್ರಿ ಪಡಿಸಿಕೊಂಡು ಬೆಳಗಾವಿಗೆ ಮರಳಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್