ಜೈಲಿನ ಅಕ್ರಮ ಬಯಲಿಗೆಳೆಯಲು ಎಸಿಬಿಗೆ ದೂರು
Team Udayavani, Jul 22, 2017, 5:55 AM IST
ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಭಾರೀ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ವಕೀಲ ಎಸ್. ನಟರಾಜ್ ಶರ್ಮಾ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಶುಕ್ರವಾರ ದೂರು ನೀಡಿದ್ದಾರೆ. ತಮಿಳುನಾಡಿನ ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ನಟರಾಜನ್ಗೆ ಐಷಾರಾಮಿ ಕೊಠಡಿ ಹಾಗೂ ಇತರ ಸೌಲಭ್ಯ ಕಲ್ಪಿಸಲು ಕಾರಾಗೃಹ ಇಲಾಖೆಯ ಮಹಾನಿರ್ದೇಶಕರಾಗಿದ್ದ ಎಚ್.ಎನ್. ಸತ್ಯನಾರಾಯಣ ರಾವ್ ಸಹಿತ ಕೆಲವು ಅಧಿಕಾರಿಗಳು 2 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ಡಿಐಜಿ ರೂಪಾ ಮೌದ್ಗಿಲ್ ಆರೋಪಿಸಿದ್ದು, ವರದಿಯನ್ನು ಸ್ವತಃ ಸತ್ಯನಾರಾಯಣ ರಾವ್ ಅವರಿಗೆ ನೀಡಿದ್ದಾರೆ. ಹೀಗಾಗಿ ಯಾರು ಯಾರಿಗೆ 2 ಕೋಟಿ ರೂ. ಲಂಚ ನೀಡಿದ್ದಾರೆ ಎಂಬುದು ತಿಳಿಯಬೇಕಿದೆ. ಇದರೊಂದಿಗೆ ಛಾಪಾ ಕಾಗದ ಹಗರಣದ ರೂವಾರಿ ಕರೀಂಲಾಲ್ ತೆಲಗಿಗೂ ಐಷಾರಾಮಿ ಸೌಲಭ್ಯ ಕೊಡಲಾಗಿದ್ದು, ಇಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪಗಳನ್ನೂ ರೂಪಾ ಮಾಡಿದ್ದಾರೆ.
ವಿಪರ್ಯಾಸವೆಂದರೆ ಹಿರಿಯ ಅಧಿಕಾರಿಗಳಿಗೆ ವರದಿ ತಲುಪುವ ಮೊದಲೇ ಮಾಧ್ಯಮಗಳಿಗೆ ವರದಿ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ರೂಪಾ ಅವರನ್ನೂ ವಿಚಾರಣೆಗೊಳಪಡಿಸಬೇಕು. ಅಲ್ಲದೇ ರೂಪಾ ಅವರಿಂದ ಸೂಕ್ತ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ. ತೆಲಗಿಗೆ ನೀಡಿರುವ ಸೌಲಭ್ಯ ಬಗ್ಗೆ ಆತನ ಕೊಠಡಿಯಲ್ಲಿ ಅಳವಡಿಸಿರುವ ಸಿಸಿಟಿವಿ ಕೆಮೆರಾಗಳ ಮೂಲಕ ಡಿಜಿಪಿ ಸತ್ಯನಾರಾಯಣ ರಾವ್ ವೀಕ್ಷಿಸಿದರೂ ಯಾವ ಕಾರಣಕ್ಕೆ ಕ್ರಮ ಕೈಗೊಂಡಿಲ್ಲ ಎಂಬ ಬಗ್ಗೆ ತನಿಖೆ ನಡೆಸಬೇಕಿದೆ. ರೂಪಾ ಎಸಿಬಿಗೆ ದೂರು ನೀಡಿದರೂ ಅಧಿಕಾರಿಗಳು ದೂರು ಸ್ವೀಕರಿಸಿಲ್ಲ. ಈ ಬಗ್ಗೆ ಸಾಕಷ್ಟು ಅನುಮಾನಗಳಿವೆ ಎಂದು ತಮ್ಮ ದೂರಿನಲ್ಲಿ ಶರ್ಮಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ