ಬೆಂಬಲ ಬೆಲೆಯಡಿ ಮಾವು ಖರೀದಿ
Team Udayavani, Jul 10, 2018, 10:07 AM IST
ಬೆಂಗಳೂರು: ಮಾವು ಬೆಲೆ ಕುಸಿತ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಬೆಂಬಲ ಬೆಲೆಯಡಿ ಖರೀದಿಗೆ ಸರಕಾರ ಮುಂದಾಗಿದ್ದು ಪ್ರತಿ ಕೆ.ಜಿ.ಗೆ 2.50 ರೂ.ನಂತೆ ಟನ್ಗೆ 2,500 ರೂ. ದರದಲ್ಲಿ ಖರೀದಿಸುವುದಾಗಿ ಘೋಷಿಸಿದೆ.ರೈತರು ಎಪಿಎಂಸಿ ಮೂಲಕವೇ ಖರೀದಿಸಲು ಹಾಗೂ ಹಣ ನೇರವಾಗಿ ರೈತರ ಖಾತೆಗೆ ಜಮೆ ಮಾಡಲು ತೀರ್ಮಾನಿಸಲಾಗಿದೆ.
ಸೋಮವಾರ ಸದನ ಆರಂಭವಾಗುತ್ತಿದ್ದಂತೆ ಕೃಷಿ ಸಚಿವ ಎನ್.ಎಚ್. ಶಿವಶಂಕರ ರೆಡ್ಡಿ ಕೋಲಾರ ಮತ್ತು ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಭಾಗದಲ್ಲಿ ಮಾವು ಬೆಳೆ ಕುಸಿತ ಬಗ್ಗೆ ಪ್ರಸ್ತಾವಿಸಿದರು.
ಇದಕ್ಕೆ ದನಿಗೂಡಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಇಡೀ ರಾಜ್ಯದಲ್ಲಿ ಮಾವು ಬೆಳೆ ಕುಸಿತದ ವರದಿ ಇದೆ. ಹೀಗಾಗಿ, ಅಧಿಕಾರಿಗಳ ಜತೆ ಚರ್ಚಿಸಿ ಇದೇ ಮೊದಲ ಬಾರಿಗೆ ಬೆಂಬಲ ಬೆಲೆಯಡಿ ಖರೀದಿಗೆ ತೀರ್ಮಾನಿಸಿದ್ದೇವೆ. ಇದರಿಂದ 15ರಿಂದ 18 ಕೋಟಿ ರೂ. ಹೊರೆಯಾಗುತ್ತದೆ. ಆದರೆ, ರೈತರನ್ನು ಉಳಿಸಲು ನಮ್ಮ ಸರಕಾರ ಬದ್ಧತೆ ಪ್ರದರ್ಶಿಸಿದೆ ಎಂದು ಹೇಳಿದರು. ಸ್ಪೀಕರ್ ರಮೇಶ್ ಕುಮಾರ್ ಮಧ್ಯಪ್ರವೇಶಿಸಿ, ಬೆಂಬಲ ಬೆಲೆಯಡಿ ಖರೀದಿ ತೀರ್ಮಾನಕ್ಕೆ ಮುಖ್ಯಮಂತ್ರಿಯವರಿಗೆ ಅಭಿನಂದನೆ ಸಲ್ಲಿಸಿ, ಸರಕಾರದ ತೀರ್ಮಾನವನ್ನು ರೈತರಿಗೆ ತಿಳಿಸಿ ಎಂದು ಕೃಷಿ ಸಚಿವರಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ