ಮತ್ತೆ ಎಚ್‌ಡಿಕೆ-ಬಿಎಸ್‌ವೈ ವಾಕ್ಸಮರ


Team Udayavani, Jul 10, 2018, 10:16 AM IST

bsy-hdk.png

ಬೆಂಗಳೂರು: “ಪದವಿ ಆಸೆಗಾಗಿ ಕಾಂಗ್ರೆಸ್‌ನವರಿಗೆ ದ್ರೋಹ ಬಗೆದು ಧರ್ಮಸಿಂಗ್‌ ಬೆನ್ನಿಗೆ ಚೂರಿ ಹಾಕಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರಿ. ಧರ್ಮಸಿಂಗ್‌ ಸಾವಿಗೂ ನೀವೇ ಕಾರಣವಾದಿರಿ. ಅನಂತರ ನಮಗೂ ವಿಶ್ವಾಸದ್ರೋಹ ಮಾಡಿದಿರಿ. ನಂಬಿಕೆ ದ್ರೋಹ ಎಂಬುದು ನಿಮ್ಮ ರಕ್ತದಲ್ಲೇ ಕರಗತವಾಗಿದೆ’ ಎಂದು ಸಿಎಂ ಎಚ್‌.ಡಿ. ಕುಮಾರಸ್ವಾಮಿ ಕುರಿತು ವಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ಆಡಿದ ಈ ಮಾತುಗಳು ಸದನದಲ್ಲಿ ಸೋಮವಾರ ಕೋಲಾಹಲ ಸೃಷ್ಟಿಸಿತು.

“ಜೆಡಿಎಸ್‌-ಬಿಜೆಪಿ ಸಮ್ಮಿಶ್ರ ಸರಕಾರದ ಅನಂತರವೂ ಧರ್ಮಸಿಂಗ್‌ ಬದುಕಿದ್ದರು. ಸಂಸತ್‌ ಸದಸ್ಯರೂ ಆಗಿದ್ದರು. 11 ವರ್ಷಗಳ ಅನಂತರ ಅವರು ನಮ್ಮನ್ನು ಅಗಲಿದರು. ಧರ್ಮಸಿಂಗ್‌ ಅವರಿಗೆ ದ್ರೋಹ ಮಾಡಿದ್ದೇನೆ ಎನ್ನುವ ನೀವೂ ಅದರಲ್ಲಿ ಪಾಲುದಾರರಲ್ಲವೇ?’ಎಂದು ಕುಮಾರಸ್ವಾಮಿ ಸಹ ತಿರುಗೇಟು ನೀಡಿದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ಕುಮಾರಸ್ವಾಮಿ-ಯಡಿಯೂರಪ್ಪ ಪರಸ್ಪರ ವೈಯಕ್ತಿಕ ನಿಂದನೆಯಲ್ಲಿ ತೊಡಗಿ ಬಿಜೆಪಿ ಹಾಗೂ ಜೆಡಿಎಸ್‌-ಕಾಂಗ್ರೆಸ್‌ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಬಿಸಿಯೇರಿದ ವಾತಾವರಣ ನಿರ್ಮಾಣವಾಗಿತ್ತು.

ಯಡಿಯೂರಪ್ಪ  ಮಾಡಿದ ಆರೋಪ ಸ‌ದನದಲ್ಲಿ ಕೋಲಾಹಲಕ್ಕೂ ಕಾರಣವಾಯಿತು. ಜೆಡಿಎಸ್‌-ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿಯೂ ನಡೆಯಿತು. ವೈಯಕ್ತಿಕ ಟೀಕೆಯ ಮಟ್ಟ ಚೌಕಟ್ಟು ಮೀರುತ್ತಿದ್ದಂತೆ ಸ್ಪೀಕರ್‌ ರಮೇಶ್‌ ಕುಮಾರ್‌ ಮಧ್ಯಪ್ರವೇಶಿಸಿ, “ಇಬ್ಬರೂ ನಿಮ್ಮದೇ ಆದ ವ್ಯಕ್ತಿತ್ವ, ಘನತೆ, ಜನಬೆಂಬಲ, ವರ್ಚಸ್ಸು ಹೊಂದಿದ್ದೀರಿ. ನೀವೇ ಉದ್ವೇಗಕ್ಕೆ ಒಳಗಾಗಿ ಸದನದಲ್ಲಿ ಈ ರೀತಿ ಮಾತನಾಡುವುದು ಒಳ್ಳೆಯದಲ್ಲ. ಘಟಿಸಿ ಹೋದ ಪ್ರಸಂಗ ಮತ್ತೆ ಕೆದಕುವುದರಲ್ಲಿ ಆರ್ಥವಿಲ್ಲ’ ಎಂದು ಕಿವಿಮಾತು ಹೇಳಿದ ಅನಂತರ ಇಬ್ಬರೂ ನಾಯಕರು ಶಾಂತರಾದರು. ಧರ್ಮಸಿಂಗ್‌ ಸಾವಿಗೆ ಕಾರಣರಾದಿರಿ ಎಂಬ ಪದ ಕಡತದಿಂದ ತೆಗೆದುಹಾಕಲು ಸೂಚಿಸುತ್ತಿದ್ದೇನೆಂದು ಸ್ಪೀಕರ್‌ ಹೇಳಿದರು. ಕಡತದಿಂದ ಆ ಪದ ತೆಗೆದುಹಾಕಲಾಯಿತು. ಸದನದಲ್ಲೇ ಇದ್ದ ಧರ್ಮಸಿಂಗ್‌ ಪುತ್ರ ಅಜಯ್‌ಸಿಂಗ್‌, ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್‌ ಖರ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಇಲ್ಲದವರ ಬಗ್ಗೆ ಅನಾವಶ್ಯಕವಾಗಿ ಮಾತನಾಡಿ ಗೊಂದಲ ಮೂಡಿಸಲಾಗುತ್ತಿದೆ ಎಂದು ದೂರಿದರು.

ಕರ್ಣನಿಗೆ ಹೋಲಿಸಿಕೊಂಡ ಎಚ್‌ಡಿಕೆ
ಮಹಾಭಾರತದ ಕರ್ಣನಿಗೆ ತಮ್ಮನ್ನು ಹೋಲಿಸಿಕೊಂಡ ಕುಮಾರಸ್ವಾಮಿ, ಕರ್ಣನ ರೀತಿಯಲ್ಲಿ ನಾನು ಸಾಂದರ್ಭಿಕ ಶಿಶು. ಆದರೆ, ಈ ಶಿಶುವಿಗೆ ಅಪ್ಪ-ಅಮ್ಮ ಇಲ್ಲ, ವಕ್ರ, ಕಾಲಿಲ್ಲ, ಕೈಯಿಲ್ಲ ಎಂಬ ಕುಹಕ ಬೇಡ. ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಶಾಸಕರೇ ಈ ಸಾಂದರ್ಭಿಕ ಶಿಶುವಿಗೆ ಅಪ್ಪ-ಅಮ್ಮ. ದೇವರ ದಯೆ ಹಾಗೂ ಕಾಂಗ್ರೆಸ್‌ ನಾಯಕರು-ಶಾಸಕರ ಸಹಕಾರದಿಂದಲೇ ನಾನು ಸಿಎಂ ಆಗಿದ್ದೇನೆ ಎಂದು ಹೇಳಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.