ಶಾಲೆಗೆ ಹೋಗಲು ನಿತ್ಯ 5 ಕಿಮೀ ನಡೆಯುವ ಮಕ್ಕಳು!


Team Udayavani, Jul 10, 2018, 11:40 AM IST

pratinithya.jpg

ಚಾಮರಾಜನಗರ: ಪಕ್ಕದ ಊರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೋಗಲು ಬಸ್‌ ಸೌಲಭ್ಯವಿಲ್ಲದ ಕಾರಣ ಗುಂಡ್ಲುಪೇಟೆ ತಾಲೂಕು ಗರಗನಹಳ್ಳಿ ವಿದ್ಯಾರ್ಥಿಗಳು ಒಟ್ಟು 5 ಕಿ.ಮೀ. ನಡೆದುಹೋಗಬೇಕಾದ ಪರಿಸ್ಥಿತಿಯಿದೆ. ಗ್ರಾಮೀಣ ಪ್ರದೇಶಗಳಲ್ಲಿ ಅನುಕೂಲ ಇರುವವರು ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸುತ್ತಾರೆ.

25 ಕಿ.ಮೀ. ದೂರದ ಹಳ್ಳಿಗಳಿಗೂ ಬಂದು ಖಾಸಗಿ ಶಾಲೆಗಳ ವಾಹನಗಳು ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ಹೋಗುತ್ತವೆ. ಆದರೆ, ಬಡ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಸರ್ಕಾರಿ ಶಾಲೆಗಳನ್ನೇ ನೆಚ್ಚಿಕೊಂಡಿದ್ದಾರೆ. ತಮ್ಮೂರಿನಲ್ಲಿ ಕಿರಿಯ ಪ್ರಾಥಮಿಕ ಶಾಲೆ ಓದಿ, 5ನೇ ತರಗತಿ ನಂತರ ಅಕ್ಕಪಕ್ಕದ ಊರುಗಳ ಸರ್ಕಾರಿ ಶಾಲೆಗೆ ಹೋಗಿ ಕಲಿಯುತ್ತಿದ್ದಾರೆ. 

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗರಗನಹಳ್ಳಿಯಲ್ಲಿ 1 ರಿಂದ 5ನೇ ತರಗತಿಯವರೆಗೆ ಸರ್ಕಾರಿ  ಕಿರಿಯ ಪ್ರಾಥಮಿಕ ಶಾಲೆಯಿದೆ. 6 ರಿಂದ 8ನೇ ತರಗತಿಯವರೆಗೆ ಕಲಿಯಲು ಎರಡೂವರೆ ಕಿ.ಮೀ. ದೂರದ ಅಗತಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೋಗಬೇಕು. ಆದರೆ, ಅಲ್ಲಿಗೆ ಹೋಗಲು ಸೂಕ್ತ ಬಸ್‌ ಸೌಲಭ್ಯ ಇಲ್ಲ. ಈ ಮಾರ್ಗದಲ್ಲಿ ವಿರಳ ಸಂಖ್ಯೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಇದೆ. ರಸ್ತೆಯೂ ತಕ್ಕಮಟ್ಟಿಗೆ ಚೆನ್ನಾಗೇ ಇದೆ. ಆದರೆ, ಮಕ್ಕಳ ಶಾಲಾ ಸಮಯಕ್ಕೆ ಬಸ್‌ ಸಂಚಾರ ಇಲ್ಲ. 

ಮಳೆಯಲ್ಲೇ ಸಂಚಾರ: ಹೀಗಾಗಿ ಗರಗನಹಳ್ಳಿಯಿಂದ ಅಗತಗೌಡನಹಳ್ಳಿಗೆ ಬರುವ ಸುಮಾರು 20-25 ವಿದ್ಯಾರ್ಥಿಗಳು ಬೆಳಗ್ಗೆ ಎರಡೂವರೆ ಕಿ.ಮೀ. ಹಾಗೂ ಸಂಜೆ ಎರಡೂವರೆ ಕಿ.ಮೀ. ನಡೆಯಬೇಕಾಗಿದೆ. ಬಿಸಿಲಿರಲಿ, ಮಳೆಯಿರಲಿ ನಡೆದೇ ಶಾಲೆಗೆ ಹೋಗಿ ಬರಬೇಕಾದ ಅನಿವಾರ್ಯತೆ ಈ ಮಕ್ಕಳದು.

ಮಳೆಯ ಸಂದರ್ಭದಲ್ಲಿ ಕೆಲವು ವಿದ್ಯಾರ್ಥಿಗಳು ಕೊಡೆ ಹಿಡಿದು ನಡೆದು ಬಂದರೆ, ಇನ್ನು ಕೆಲವು ಮಕ್ಕಳಿಗೆ ಕೊಡೆ ಕೊಳ್ಳುವಷ್ಟೂ ಶಕ್ತಿಯಿಲ್ಲದೇ ಗೋಣಿಚೀಲ, ಪ್ಲಾಸ್ಟಿಕ್‌ ಚೀಲಗಳನ್ನು ತಲೆಗೆ ಗುಬ್ಬರ ಹಾಕಿಕೊಂಡು ಶಾಲೆಗೆ ಬರುತ್ತಾರೆ. ಅಲ್ಲದೇ, ಗುಂಡ್ಲುಪೇಟೆಯಿಂದ ಅಗತಗೌಡನಹಳ್ಳಿ ಶಾಲೆಗೆ ಶಿಕ್ಷಕರು ಬರುತ್ತಿದ್ದು, ಅವರು ಸಹ ಗರಗನಹಳ್ಳಿ ಗೇಟ್‌ ವರೆಗೆ ಬೇರೆ ಬಸ್‌ನಲ್ಲಿ ಬಂದು, ಇಳಿದು ಒಂದೂವರೆ ಕಿ.ಮೀ. ದೂರ ನಡೆದು ಹೋಗಬೇಕಾಗಿದೆ. 

ಶಾಲಾ ಸಮಯಕ್ಕೆ ಬಸ್‌ ಬಿಟ್ಟರೆ ಅನುಕೂಲ: ಗುಂಡ್ಲುಪೇಟೆಯಿಂದ ಅಗತಗೌಡನಹಳ್ಳಿಗೆ ಬೆಳಗ್ಗೆ 8.45ಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಇದೆ. ಈ ಬಸ್‌ ಗರಗನಹಳ್ಳಿ ಗೇಟ್‌ಗೆ ಬೆಳಿಗ್ಗೆ 9 ರಿಂದ 9.15ರ ವೇಳೆಗೆ ಬಂದರೆ ವಿದ್ಯಾರ್ಥಿಗಳಿಗೆ ಬಹಳ ಅನುಕೂಲವಾಗಲಿದೆ. ಸಂಜೆ ಶಾಲೆ ಬಿಡುವ ಸಮಯ ಅನುಸರಿಸಿ ಇನ್ನೊಂದು ಬಸ್‌ ಸಂಚರಿಸಿದರೆ 25 ವಿದ್ಯಾರ್ಥಿಗಳು ನಡೆದುಹೋಗುವುದು ತಪ್ಪುತ್ತದೆ ಎನ್ನುತ್ತಾರೆ ಮಕ್ಕಳ ಪೋಷಕರು.

ಅಪಾಯಕಾರಿ ರಸ್ತೆ ದಾಟಬೇಕಾದ ಮಕ್ಕಳು: ಗರಗನಹಳ್ಳಿಯಿಂದ ಅಗತಗೌಡನಹಳ್ಳಿಗೆ ಹೋಗಬೇಕಾದರೆ ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ 212 ಅನ್ನು ಈ ಮಕ್ಕಳು ಕ್ರಾಸ್‌ ಮಾಡಬೇಕು. ಮೈಸೂರಿನಿಂದ ಕೇರಳದ ಕಲ್ಲಿಕೋಟೆ, ತಮಿಳುನಾಡಿನ ಊಟಿಗೆ ಹೋಗುವ ಈ ರಸ್ತೆ ಸದಾ ವಾಹನಗಳ ಒತ್ತಡದಿಂದ ಕೂಡಿರುತ್ತದೆ.

ಈ ರಸ್ತೆಯಲ್ಲಿ ವಾರಕ್ಕೆರಡು ಅಪಘಾತಗಳು ನಡೆಯುತ್ತಲೇ ಇರುತ್ತವೆ. ಇಂಥ ರಸ್ತೆಯನ್ನು ಮಕ್ಕಳು ದಾಟುವುದು ಅಪಾಯಕಾರಿ ಸಾಹಸವೇ ಸರಿ. ಹೀಗಾಗಿ ಶಾಲೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್‌ ಸೌಲಭ್ಯ ಕಲ್ಪಿಸಬೇಕಾಗಿದೆ. 

ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿ ಕೆಲವೆಡೆ ಇದೆ. ಆದರೆ ನಮ್ಮೂರಿನ ಸರ್ಕಾರಿ ಶಾಲೆಯಲ್ಲಿ ಸಾಕಷ್ಟು ವಿದ್ಯಾರ್ಥಿಗಳಿದ್ಧಾರೆ. ಆದರೆ, ಪಕ್ಕದ ಗರನಹಳ್ಳಿಯಿಂದ ಬರುವ ವಿದ್ಯಾರ್ಥಿಗಳು ಪ್ರತಿದಿನ ನಡೆದು ಬರುವುದನ್ನು ನೋಡಿದರೆ ಬೇಸರವಾಗುತ್ತದೆ. ಶಾಸಕ ನಿರಂಜನಕುಮಾರ್‌ ಇತ್ತ ಗಮನ ಹರಿಸಿ ಶಾಲಾ ಸಮಯಕ್ಕೆ ಬಸ್‌ ಹಾಕಿಸಬೇಕು.
-ಮಾದಪ್ಪ, ಅಗತಗೌಡನಹಳ್ಳಿ ನಿವಾಸಿ.

* ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.