ಶಾಲೆಗೆ ಹೋಗಲು ನಿತ್ಯ 5 ಕಿಮೀ ನಡೆಯುವ ಮಕ್ಕಳು!


Team Udayavani, Jul 10, 2018, 11:40 AM IST

pratinithya.jpg

ಚಾಮರಾಜನಗರ: ಪಕ್ಕದ ಊರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೋಗಲು ಬಸ್‌ ಸೌಲಭ್ಯವಿಲ್ಲದ ಕಾರಣ ಗುಂಡ್ಲುಪೇಟೆ ತಾಲೂಕು ಗರಗನಹಳ್ಳಿ ವಿದ್ಯಾರ್ಥಿಗಳು ಒಟ್ಟು 5 ಕಿ.ಮೀ. ನಡೆದುಹೋಗಬೇಕಾದ ಪರಿಸ್ಥಿತಿಯಿದೆ. ಗ್ರಾಮೀಣ ಪ್ರದೇಶಗಳಲ್ಲಿ ಅನುಕೂಲ ಇರುವವರು ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸುತ್ತಾರೆ.

25 ಕಿ.ಮೀ. ದೂರದ ಹಳ್ಳಿಗಳಿಗೂ ಬಂದು ಖಾಸಗಿ ಶಾಲೆಗಳ ವಾಹನಗಳು ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ಹೋಗುತ್ತವೆ. ಆದರೆ, ಬಡ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಸರ್ಕಾರಿ ಶಾಲೆಗಳನ್ನೇ ನೆಚ್ಚಿಕೊಂಡಿದ್ದಾರೆ. ತಮ್ಮೂರಿನಲ್ಲಿ ಕಿರಿಯ ಪ್ರಾಥಮಿಕ ಶಾಲೆ ಓದಿ, 5ನೇ ತರಗತಿ ನಂತರ ಅಕ್ಕಪಕ್ಕದ ಊರುಗಳ ಸರ್ಕಾರಿ ಶಾಲೆಗೆ ಹೋಗಿ ಕಲಿಯುತ್ತಿದ್ದಾರೆ. 

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗರಗನಹಳ್ಳಿಯಲ್ಲಿ 1 ರಿಂದ 5ನೇ ತರಗತಿಯವರೆಗೆ ಸರ್ಕಾರಿ  ಕಿರಿಯ ಪ್ರಾಥಮಿಕ ಶಾಲೆಯಿದೆ. 6 ರಿಂದ 8ನೇ ತರಗತಿಯವರೆಗೆ ಕಲಿಯಲು ಎರಡೂವರೆ ಕಿ.ಮೀ. ದೂರದ ಅಗತಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೋಗಬೇಕು. ಆದರೆ, ಅಲ್ಲಿಗೆ ಹೋಗಲು ಸೂಕ್ತ ಬಸ್‌ ಸೌಲಭ್ಯ ಇಲ್ಲ. ಈ ಮಾರ್ಗದಲ್ಲಿ ವಿರಳ ಸಂಖ್ಯೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಇದೆ. ರಸ್ತೆಯೂ ತಕ್ಕಮಟ್ಟಿಗೆ ಚೆನ್ನಾಗೇ ಇದೆ. ಆದರೆ, ಮಕ್ಕಳ ಶಾಲಾ ಸಮಯಕ್ಕೆ ಬಸ್‌ ಸಂಚಾರ ಇಲ್ಲ. 

ಮಳೆಯಲ್ಲೇ ಸಂಚಾರ: ಹೀಗಾಗಿ ಗರಗನಹಳ್ಳಿಯಿಂದ ಅಗತಗೌಡನಹಳ್ಳಿಗೆ ಬರುವ ಸುಮಾರು 20-25 ವಿದ್ಯಾರ್ಥಿಗಳು ಬೆಳಗ್ಗೆ ಎರಡೂವರೆ ಕಿ.ಮೀ. ಹಾಗೂ ಸಂಜೆ ಎರಡೂವರೆ ಕಿ.ಮೀ. ನಡೆಯಬೇಕಾಗಿದೆ. ಬಿಸಿಲಿರಲಿ, ಮಳೆಯಿರಲಿ ನಡೆದೇ ಶಾಲೆಗೆ ಹೋಗಿ ಬರಬೇಕಾದ ಅನಿವಾರ್ಯತೆ ಈ ಮಕ್ಕಳದು.

ಮಳೆಯ ಸಂದರ್ಭದಲ್ಲಿ ಕೆಲವು ವಿದ್ಯಾರ್ಥಿಗಳು ಕೊಡೆ ಹಿಡಿದು ನಡೆದು ಬಂದರೆ, ಇನ್ನು ಕೆಲವು ಮಕ್ಕಳಿಗೆ ಕೊಡೆ ಕೊಳ್ಳುವಷ್ಟೂ ಶಕ್ತಿಯಿಲ್ಲದೇ ಗೋಣಿಚೀಲ, ಪ್ಲಾಸ್ಟಿಕ್‌ ಚೀಲಗಳನ್ನು ತಲೆಗೆ ಗುಬ್ಬರ ಹಾಕಿಕೊಂಡು ಶಾಲೆಗೆ ಬರುತ್ತಾರೆ. ಅಲ್ಲದೇ, ಗುಂಡ್ಲುಪೇಟೆಯಿಂದ ಅಗತಗೌಡನಹಳ್ಳಿ ಶಾಲೆಗೆ ಶಿಕ್ಷಕರು ಬರುತ್ತಿದ್ದು, ಅವರು ಸಹ ಗರಗನಹಳ್ಳಿ ಗೇಟ್‌ ವರೆಗೆ ಬೇರೆ ಬಸ್‌ನಲ್ಲಿ ಬಂದು, ಇಳಿದು ಒಂದೂವರೆ ಕಿ.ಮೀ. ದೂರ ನಡೆದು ಹೋಗಬೇಕಾಗಿದೆ. 

ಶಾಲಾ ಸಮಯಕ್ಕೆ ಬಸ್‌ ಬಿಟ್ಟರೆ ಅನುಕೂಲ: ಗುಂಡ್ಲುಪೇಟೆಯಿಂದ ಅಗತಗೌಡನಹಳ್ಳಿಗೆ ಬೆಳಗ್ಗೆ 8.45ಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಇದೆ. ಈ ಬಸ್‌ ಗರಗನಹಳ್ಳಿ ಗೇಟ್‌ಗೆ ಬೆಳಿಗ್ಗೆ 9 ರಿಂದ 9.15ರ ವೇಳೆಗೆ ಬಂದರೆ ವಿದ್ಯಾರ್ಥಿಗಳಿಗೆ ಬಹಳ ಅನುಕೂಲವಾಗಲಿದೆ. ಸಂಜೆ ಶಾಲೆ ಬಿಡುವ ಸಮಯ ಅನುಸರಿಸಿ ಇನ್ನೊಂದು ಬಸ್‌ ಸಂಚರಿಸಿದರೆ 25 ವಿದ್ಯಾರ್ಥಿಗಳು ನಡೆದುಹೋಗುವುದು ತಪ್ಪುತ್ತದೆ ಎನ್ನುತ್ತಾರೆ ಮಕ್ಕಳ ಪೋಷಕರು.

ಅಪಾಯಕಾರಿ ರಸ್ತೆ ದಾಟಬೇಕಾದ ಮಕ್ಕಳು: ಗರಗನಹಳ್ಳಿಯಿಂದ ಅಗತಗೌಡನಹಳ್ಳಿಗೆ ಹೋಗಬೇಕಾದರೆ ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ 212 ಅನ್ನು ಈ ಮಕ್ಕಳು ಕ್ರಾಸ್‌ ಮಾಡಬೇಕು. ಮೈಸೂರಿನಿಂದ ಕೇರಳದ ಕಲ್ಲಿಕೋಟೆ, ತಮಿಳುನಾಡಿನ ಊಟಿಗೆ ಹೋಗುವ ಈ ರಸ್ತೆ ಸದಾ ವಾಹನಗಳ ಒತ್ತಡದಿಂದ ಕೂಡಿರುತ್ತದೆ.

ಈ ರಸ್ತೆಯಲ್ಲಿ ವಾರಕ್ಕೆರಡು ಅಪಘಾತಗಳು ನಡೆಯುತ್ತಲೇ ಇರುತ್ತವೆ. ಇಂಥ ರಸ್ತೆಯನ್ನು ಮಕ್ಕಳು ದಾಟುವುದು ಅಪಾಯಕಾರಿ ಸಾಹಸವೇ ಸರಿ. ಹೀಗಾಗಿ ಶಾಲೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್‌ ಸೌಲಭ್ಯ ಕಲ್ಪಿಸಬೇಕಾಗಿದೆ. 

ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿ ಕೆಲವೆಡೆ ಇದೆ. ಆದರೆ ನಮ್ಮೂರಿನ ಸರ್ಕಾರಿ ಶಾಲೆಯಲ್ಲಿ ಸಾಕಷ್ಟು ವಿದ್ಯಾರ್ಥಿಗಳಿದ್ಧಾರೆ. ಆದರೆ, ಪಕ್ಕದ ಗರನಹಳ್ಳಿಯಿಂದ ಬರುವ ವಿದ್ಯಾರ್ಥಿಗಳು ಪ್ರತಿದಿನ ನಡೆದು ಬರುವುದನ್ನು ನೋಡಿದರೆ ಬೇಸರವಾಗುತ್ತದೆ. ಶಾಸಕ ನಿರಂಜನಕುಮಾರ್‌ ಇತ್ತ ಗಮನ ಹರಿಸಿ ಶಾಲಾ ಸಮಯಕ್ಕೆ ಬಸ್‌ ಹಾಕಿಸಬೇಕು.
-ಮಾದಪ್ಪ, ಅಗತಗೌಡನಹಳ್ಳಿ ನಿವಾಸಿ.

* ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.