48 ಗಂಟೆಗಳಲ್ಲಿ ಭಾರೀ ಮಳೆ? 


Team Udayavani, Jul 11, 2018, 6:00 AM IST

c-419.jpg

ಬೆಂಗಳೂರು: ವಾತಾವರಣದಲ್ಲಿನ ಮೂರು ರೀತಿಯ ಬೆಳವಣಿಗೆಯಿಂದ ಮುಂದಿನ ಎರಡು ದಿನಗಳು ಮಳೆ ಮತ್ತೆ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಒಡಿಶಾದಲ್ಲಿ ಮತ್ತು ಪೂರ್ವ-ಪಶ್ಚಿಮ ವಲಯದಲ್ಲಿ ಚಂಡಮಾರುತದ ಪರಿಚಲನೆ ಹಾಗೂ ಕರ್ನಾಟಕ-ಕೇರಳ ಕರಾವಳಿ ಭಾಗದಲ್ಲಿ ಕಡಿಮೆ
ಒತ್ತಡ ಕಂಡುಬಂದಿರುವುದರಿಂದ ರಾಜ್ಯದ ವಿವಿಧೆಡೆ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಈ ಮಧ್ಯೆ ಪುನರ್ವಸು ಮಳೆ ಆರ್ಭಟಕ್ಕೆ ಮಲೆನಾಡು ಭಾಗ ತತ್ತರಿಸಿದೆ. ಚಿಕ್ಕಮಗಳೂರಿನ ಕಂಬಿಹಳ್ಳಿ ಗ್ರಾಮದಲ್ಲಿ ಕೊಟ್ಟಿಗೆ ಗೋಡೆ ಬಿದ್ದು ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಕಂಬಿಹಳ್ಳಿಯಲ್ಲಿ ಸೋಮವಾರ ರಾತ್ರಿ ಕೊಟ್ಟಿಗೆಗೆ ಹಸು ಕಟ್ಟಲು ತೆರಳಿದ್ದಾಗ ಗೋಡೆ ಕುಸಿದು ಬಿದ್ದು ವನಜಾ (48)
ಎಂಬುವವರು ಮೃತಪಟ್ಟಿದ್ದಾರೆ. ಮಳೆಯಿಂದಾಗಿ ಗೋಡೆ ಶಿಥಿಲಗೊಂಡಿತ್ತು. ಇದನ್ನು ಗಮನಿಸದೆ ಸುರಿಯುತ್ತಿರುವ ಮಳೆಯಲ್ಲೇ ಕೊಟ್ಟಿಗೆಗೆ ತೆರಳಿ 
ದ್ದಾಗ ಅವಘಡ ಸಂಭವಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಮಳೆಯಿಂದ ಮೃತಪಟ್ಟವರ ಸಂಖ್ಯೆ ಮೂರಕ್ಕೇರಿದೆ. 

ಮುಳ್ಳಯ್ಯನಗಿರಿ ಬೆಟ್ಟ ಶ್ರೇಣಿಯಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರ ಸ್ಥಗಿತಗೊಂಡಿದ್ದರೆ, ಮಲೆ ನಾಡು ಪ್ರದೇಶಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ಶೃಂಗೇರಿ, ಕೊಪ್ಪ, ನರಸಿಂಹರಾಜಪುರ, ಮೂಡಿಗೆರೆ ತಾಲೂಕು ಸೇರಿ ಚಿಕ್ಕಮಗಳೂರು ತಾಲೂಕಿನ ವಿವಿಧೆಡೆ ಸೋಮವಾರ ಸಂಜೆಯಿಂದ ಬಿಡದೇ ಮಳೆಯಾಗುತ್ತಿದೆ.

ಮಂಗಳವಾರ ಮುಳ್ಳಯ್ಯನಗಿರಿ ಬೆಟ್ಟ ಶ್ರೇಣಿಯ ಹಲವೆಡೆ ಗುಡ್ಡ ಕುಸಿದಿದ್ದು, ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಶೃಂಗೇರಿ ತಾಲೂಕಿನಲ್ಲಿ
ಭಾರೀ ಮಳೆಯಾಗುತ್ತಿದ್ದು, ತುಂಗಾ ನದಿ ಉಕ್ಕಿ ಹರಿಯುತ್ತಿದೆ. ಶೃಂಗೇರಿ ಶಾರದಾ ಪೀಠದ ಕಪ್ಪೆ ಶಂಕರ ದೇವಾಲಯ ಸಂಪೂರ್ಣ ಮುಳುಗಿದ್ದು,
ಸಂಧ್ಯಾವಂದನ ಮಂಟಪ ಮುಳುಗುವ ಹಂತ ತಲುಪಿದೆ.

ಕೊಪ್ಪ ತಾಲೂಕಿನಲ್ಲೂ ವರುಣನ ಆರ್ಭಟ ಜೋರಾಗಿದೆ. ಬಾಳೆಹೊನ್ನೂರು-ಕಳಸ ರಸ್ತೆಯ ತೆಪ್ಪದಗುಂಡಿ ಬಳಿ ದೊಡ್ಡ ಮರ ಬಿದ್ದು, ಸಂಚಾರ
ಅಸ್ತವ್ಯಸ್ತಗೊಂಡಿತ್ತು. ತುಂಗಾ, ಭದ್ರಾ ಮತ್ತು ಹೇಮಾವತಿ ನದಿಗಳಲ್ಲಿ ನೀರಿನ ಪ್ರಮಾಣ ಏರುತ್ತಲೇ ಇದ್ದು, ಪ್ರವಾಹದ ಭೀತಿ ಎದುರಾಗಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಆಯ್ದ ಭಾಗಗಳಲ್ಲಿ ವ್ಯಾಪಕವಾಗಿ ಭಾರಿಯಿಂದ ಅತಿ ಭಾರೀ ಮಳೆ ಬೀಳುವ ನಿರೀಕ್ಷೆ
ಇದೆ. ಅದೇ ರೀತಿ, ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದ ಹಲವೆಡೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ಪ್ರಕಟಣೆ ತಿಳಿಸಿದೆ.

ಮಂಗಳವಾರ ಬೆಳಗ್ಗೆ ಉತ್ತರ ಕನ್ನಡದ ಗೇರುಸೊಪ್ಪದಲ್ಲಿ ಅತಿ ಹೆಚ್ಚು 160 ಮಿ.ಮೀ. ಮಳೆ ದಾಖಲಾಗಿದೆ.

ಬಾಲಕಿ ಶವ ಪತ್ತೆ  
ತಾಯಿಯೊಂದಿಗೆ ಕಾಲುಸಂಕ ದಾಟುತ್ತಿದ್ದಾಗ ಕಾಲು ಜಾರಿ ಬಿದ್ದು ನೀರುಪಾಲಾಗಿದ್ದ ಬಾಲಕಿಯ ಶವ ಮಂಗಳವಾರ ಪತ್ತೆಯಾಗಿದೆ. ಆಗುಂಬೆ ವ್ಯಾಪ್ತಿಯ ದುಡ್ಲಿಮನೆ ಬಳಿ ಮರಡಿ ಹಳ್ಳದಲ್ಲಿ ಬಾಲಕಿ ಬಿದ್ದ ಸ್ಥಳದಿಂದ ಒಂದು ಕಿಮೀ ದೂರದಲ್ಲಿ ಪೊದೆಯೊಂದರ ಬಳಿ ಸಿಲುಕಿದ್ದ ಮೃತದೇಹವನ್ನು ಮಂಗಳವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಹೊರತೆಗೆಯಲಾಗಿದೆ. ಮೃತ ವಿದ್ಯಾರ್ಥಿನಿ ಆಶಿಕಾಳ ಮನೆಗೆ ಜಿಲ್ಲಾ ಧಿಕಾರಿ ಡಾ| ಲೋಕೇಶ್‌ ಭೇಟಿ
ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರಲ್ಲದೆ ಸರ್ಕಾರದ ಪರವಾಗಿ ಮೃತ ಬಾಲಕಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಚೆಕ್‌ ವಿತರಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.