ಹುತಾತ್ಮ ಯೋಧರಿಗೆ ಅಂತಿಮ ವಿದಾಯ
Team Udayavani, Jul 12, 2018, 6:40 AM IST
ಕಾರವಾರ/ಖಾನಾಪುರ: ಛತ್ತೀಸಗಡನ ಬಸ್ತರ ವಿಭಾಗದ ಕಾಂಕೇರ ಬಳಿ ಸೋಮವಾರ ನೆಲಬಾಂಬ್ ಸ್ಫೋಟದಲ್ಲಿ ವೀರಮರಣ ಹೊಂದಿದ ಬಿಎಸ್ಎಫ್ ಯೋಧರಾದ ವಿಜಯಾನಂದ ನಾಯ್ಕ ಹಾಗೂ ಸಂತೋಷ ಗುರವ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಬುಧವಾರ ನೆರವೇರಿತು.
ಬೆಳಗ್ಗೆ 9ಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ವಿಜಯಾನಂದ ನಾಯ್ಕ ಪಾರ್ಥಿವ ಶರೀರ ಆಗಮಿಸುತ್ತಿದ್ದಂತೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್, ಎಸ್ಪಿ ವಿನಾಯಕ ಪಾಟೀಲ ಸೇರಿ ಹಲವು ಗಣ್ಯರು ಗೌರವ ಸಲ್ಲಿಸಿದರು. ದಿವೇಕರ ಕಾಲೇಜಿನ ಸಮೀಪದ ಸಕಲಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿಸ ಲಾಯಿತು.
ಸಂತೋಷ ಗುರವ ಅಂತ್ಯಕ್ರಿಯೆ ಖಾನಾಪುರ ಹಲಗಾ ಗ್ರಾಮದ ರುದ್ರಭೂಮಿಯಲ್ಲಿ ನೆರವೇರಿತು. 11 ಗಂಟೆಯ ಸುಮಾರಿಗೆ ಹಲಗಾ ಗ್ರಾಮಕ್ಕೆ ಆಗಮಿಸಿದ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಿ ನಮನ ಅರ್ಪಿಸಿದ ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡು ಸಂತೋಷ ಗುರವ ಅಮರ ರಹೇ ಎಂದು ಘೋಷವಾಕ್ಯಗಳನ್ನು ಮೊಳಗಿಸಿದರು.ಸಾವಿರಾರು ಜನರು ಹುತಾತ್ಮ ಯೋಧರಿಗೆ ಕಂಬನಿ ಮಿಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ