ಲೋಕಸಭೆ ಚುನಾವಣೆಗೆ ಸನ್ನದ್ಧರಾಗಿ


Team Udayavani, Jul 12, 2018, 6:00 AM IST

180711kpn82.gif

ಬೆಂಗಳೂರು: ಕೆಪಿಸಿಸಿ ನೂತನ ಸಾರಥಿ ದಿನೇಶ್‌ ಗುಂಡೂರಾವ್‌ ಹಾಗೂ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಅಧಿಕಾರ ಸ್ವೀಕಾರ ಕಾರ್ಯಕ್ರಮದ ಮೂಲಕ ಕಾಂಗ್ರೆಸ್‌ ನಾಯಕರು ಬುಧವಾರ ಒಗ್ಗಟ್ಟು ಪ್ರದರ್ಶನ ಮಾಡಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಂಪುಟದಲ್ಲಿ ಸಚಿವ ಸ್ಥಾನ ಸಿಗದ ಕೆಲವು ಅತೃಪ್ತ ನಾಯಕರನ್ನು ಹೊರತು ಪಡಿಸಿ ಬಹುತೇಕ ನಾಯಕರು ಭಾಗವಹಿಸಿ ಪಕ್ಷದ ಒಗ್ಗಟ್ಟು ಪ್ರದರ್ಶಿಸಿದರು. ವಿಧಾನ ಸಭೆ ಚುನಾವಣೆಯಲ್ಲಿ ಪಕ್ಷ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಸಾಧಿಸಲು ಸಾಧ್ಯವಾಗದಿರುವ ಬಗ್ಗೆಯೂ
ನಾಯಕರು ಬೇಸರ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂಸಿದ್ದರಾಮಯ್ಯ, ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿಗೆ ಬಿಜೆಪಿಯ ಅಪಪ್ರಚಾರ ಕಾರಣ. ಬಿಜೆಪಿಯವರು ಹಿಂದುತ್ವದ ಅಪಪ್ರಚಾರ ಮಾಡಿದರು. ಅವರ ಸುಳ್ಳು ಪ್ರಚಾರವನ್ನು ಹತ್ತಿಕ್ಕಲು ನಾವು ವಿಫ‌ಲವಾದೆವು ಎಂದು ಹೇಳಿದರು.ಹಿಂದಿನ ಸರ್ಕಾರದ ಎಲ್ಲ ಯೋಜನೆಗಳನ್ನು ಮುಂದುವರಿಸುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. 

ಅನ್ನಭಾಗ್ಯ ಅಕ್ಕಿಯನ್ನು 7 ಕೆಜಿಯಿಂದ 5 ಕೆಜಿಗೆ ಇಳಿಸಿರುವುದು ಹಾಗೂ ಪೆಟ್ರೊಲ್‌ ಮತ್ತು ಡೀಸೆಲ್‌ ಮೇಲೆ ಹಾಕಿರುವ ತೆರಿಗೆ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿಗೆ ಪತ್ರ ಬರೆದಿರುವುದಾಗಿ ತಿಳಿಸಿದರು.ವರಿಷ್ಠರು ಉತ್ತಮ ಅವಕಾಶ ನೀಡಿದ್ದಾರೆ. ಈ ಅವಕಾಶವನ್ನು ಸದುಪಯೋಗ ಪಡೆಸಿಕೊಳ್ಳುತ್ತೇವೆ. ಪಕ್ಷವನ್ನು ಬಲಿಷ್ಠಗೊಳಿಸಿ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುತ್ತೇವೆ. ದೇಶದಲ್ಲಿ ಮತ್ತೆ ಕಾಂಗ್ರೆಸ್‌ ಗತವೈಭವ ನಿರ್ಮಾಣವಾಗುತ್ತದೆ.
– ಈಶ್ವರ್‌ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ

ಅತ್ಯಂತ ಸಂತೋಷದಿಂದ ಅಧಿಕಾರ ಹಸ್ತಾಂತರ ಮಾಡಿದ್ದೇನೆ. ನನ್ನ ಅವಧಿಯಲ್ಲಿ ಸಾಕಷ್ಟು ಚುನಾವಣೆಗಳು ನಡೆದಿವೆ. ಎಂಟು ವರ್ಷದಲ್ಲಿ ಪಕ್ಷದ ಲಕ್ಷಾಂತರ ಕಾರ್ಯಕರ್ತರು, ಪಕ್ಷದ ಎಲ್ಲ ನಾಯಕರು ಸಹಕಾರ ಕೊಟ್ಟಿದ್ದಾರೆ.
– ಡಾ. ಜಿ ಪರಮೇಶ್ವರ್‌, ಉಪ ಮುಖ್ಯಮಂತ್ರಿ

ಲೋಕಸಭೆ ಚುನಾವಣೆಗೆ ಪಕ್ಷ ಬಲಗೊಳಿಸ ಬೇಕಿದೆ. ಕಳೆದ 4 ವರ್ಷದಲ್ಲಿ ಕೇಂದ್ರ ಸರ್ಕಾರ ಯಾವುದೇ ಯೋಜನೆಯನ್ನು ಜಾರಿಗೊಳಿಸದೇ ಜನರನ್ನು ದಾರಿ ತಪ್ಪಿಸಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬಾರದು.
– ಕೆ.ಸಿ.ವೇಣುಗೋಪಾಲ್‌,
ಕಾಂಗ್ರೆಸ್‌ ರಾಜ್ಯ ಉಸ್ತುವಾರಿ

ನಮ್ಮಲ್ಲಿ ಸಾಕಷ್ಟು ಗೊಂದಲಗಳಿವೆ. ಸಣ್ಣಪುಟ್ಟ ಸಮಸ್ಯೆ ಬಗೆಹರಿಸಿಕೊಂಡು ಐಕ್ಯತೆ ಪ್ರದರ್ಶಿಸಬೇಕಿದೆ. ಹಿರಿಯರಿಗೆ ಅವಕಾಶ ಸಿಕ್ಕಿಲ್ಲ. ಅದು ನಮಗೂ ಗೊತ್ತಿದೆ. ಹಿಂದಿನ ಧರ್ಮಸಿಂಗ್‌ ಸರ್ಕಾರದಲ್ಲಿ ನನ್ನ ಮತ್ತು ಪರಮೇಶ್ವರ್‌ ಅವರನ್ನು ದೂರ ಇಟ್ಟಿದ್ದರು. ಹೀಗಾಗಿ ಯಾರೂ ತಪ್ಪು ತಿಳಿಯುವುದು ಬೇಡ.
– ಡಿ.ಕೆ. ಶಿವಕುಮಾರ್‌, ಸಚಿವ

ದಿನೇಶ್‌ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಹೀಗಾಗಿ ಪಕ್ಷ ಅವನನ್ನು ಗುರುತಿಸಿ ಜವಾಬ್ದಾರಿ ನೀಡಿದೆ. ಪ್ರತಿಯೊಬ್ಬರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ಜವಾಬ್ದಾರಿ ಇದೆ. ಅದರಲ್ಲಿ ಯಶಸ್ವಿಯಾ ಗುತ್ತಾನೆ. ಮುಖ್ಯಮಂತ್ರಿ ಆಗುತ್ತಾನೆ ಎಂದು ನಾನು ಹೇಳಲು ಆಗುವುದಿಲ್ಲ. ಜನರು ಆಶೀರ್ವಾದ
ಮಾಡಿದರೆ ಮುಖ್ಯಮಂತ್ರಿಯಾಗಬಹುದು.
– ವರಲಕ್ಷ್ಮೀ ಗುಂಡೂರಾವ್‌,
ದಿನೇಶ್‌ ಗುಂಡೂರಾವ್‌ ತಾಯಿ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.