ಅನನ್ಯ, ನಿನ್ನ ಭೇಟಿ ಮಾಡುವೆ
Team Udayavani, Jul 12, 2018, 6:00 AM IST
ಬೆಂಗಳೂರು: ಉದಯವಾಣಿ “ಜೋಶ್’ ಪುರವಣಿ ಮೂಲಕ “ನನ್ನ ಶಾಲೆ ನನ್ನ ಹೆಮ್ಮೆ’ ಎಂದು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಅಕ್ಲಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಎಚ್.ಎಸ್.ಅನನ್ಯಳಿಗೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ಪಂದಿಸಿದ್ದಾರೆ. ಅಷ್ಟೇ ಅಲ್ಲ, ನಾನೇ ಖುದ್ದಾಗಿ ನಿನ್ನನ್ನು ನಾನು ಖುದ್ದಾಗಿ ಭೇಟಿ ಮಾಡುತ್ತೇನೆ ಎಂದು ಪತ್ರ ಮುಖೇನವೇ ಉತ್ತರ ನೀಡಿದ್ದಾರೆ.
ಪತ್ರದ ಸಾರಾಂಶ: ಉದಯವಾಣಿಯ “ಜೋಶ್’ ಪುರವಣಿಯ”ನನ್ನ ಶಾಲೆ ನನ್ನ ಹೆಮ್ಮೆ’ ಎಂಬ ಅಂಕಣದಲ್ಲಿ ನೀನು ನನಗೆ ಬರೆದ ಪತ್ರವನ್ನು ಓದಿದೆ. ನಿನ್ನ ಆತಂಕ ಅರ್ಥವಾಗಿದೆ. ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಸುಧಾರಿಸಿ ಸರ್ಕಾರಿ ಶಾಲೆಗಳನ್ನು ವಿದ್ಯಾರ್ಥಿಗಳು ಅಪ್ಪಿಕೊಳ್ಳುವಂತೆ ಮಾಡುವುದು ನನ್ನ ಉದ್ದೇಶ. ಆಯವ್ಯಯದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದೇನೆ. ಗ್ರಾಮೀಣ ಹಂತದಲ್ಲಿ ಸರ್ಕಾರಿ ಶಾಲೆಗಳಲ್ಲಿನ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ಮುಂತಾದ ಸೌಲಭ್ಯಗಳಿರಬೇಕು ಎನ್ನುವುದು ನನ್ನ ಗುರಿ. ಕನ್ನಡದ ಜೊತೆಗೆ ಇಂಗ್ಲಿಷ್ನ್ನು ಸಹ ಒಂದು ವಿಷಯವನ್ನಾಗಿ ಕಲಿಯಬೇಕೆನ್ನುವುದು ನನ್ನ ಆಶಯ. ಭಾಷಾ ತಜ್ಞರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ.
“ಪೋಷಕರ ಕಾನ್ವೆಂಟ್ನ ವ್ಯಾಮೋಹಕ್ಕೆ ಕಡಿವಾಣ ಹಾಕಿ, ಸರ್ಕಾರಿ ಶಾಲೆಗಳ ಬಗ್ಗೆ ಪ್ರೀತಿ ಬರಬೇಕು. ನೀನು ಪತ್ರ ಬರೆದಿದ್ದಕ್ಕೆ ಧನ್ಯವಾದಗಳು, ನಿನ್ನ ಓದಿನ ಬಗ್ಗೆ ಕೇಂದ್ರೀಕರಿಸು, ಒಳ್ಳೆಯದಾಗಲಿ. ನಾನು ನಿನ್ನನ್ನು ಖುದ್ದಾಗಿ ಭೇಟಿ ಮಾಡುತ್ತೇನೆ.
ಶುಭಾಶಯಗಳು
ಎಚ್.ಡಿ.ಕುಮಾರಸ್ವಾಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ