ನಾನೇನು ಅನ್ಯಾಯ ಮಾಡಿದ್ದೇನೆ? ಮಾಧ್ಯಮಗಳಿಗೆ ಸಿಎಂ ಪ್ರಶ್ನೆ,ಆಕ್ರೋಶ!
Team Udayavani, Jul 14, 2018, 2:47 PM IST
ಬೆಂಗಳೂರು: ‘ನನ್ನ ಮೇಲೆ ನಿಮಗೆ ಯಾಕಿಷ್ಟು ಕೋಪ ? ನಾನೇನು ಅನ್ಯಾಯ ಮಾಡಿದ್ದೇನೆ’…ಇದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ ಶನಿವಾರ ಕೇಳಿದ ಪ್ರಶ್ನೆ.
ಕರ್ನಾಟಕ ವಿಕಲಚೇತನ ಸೇವಾ ಸಂಸ್ಥೆ ಒಕ್ಕೂಟ ಆಯೋಜಿಸಿದ್ದ ಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಮಾಧ್ಯಮಗಳ ವಿರುದ್ದ ತೀವ್ರ ಆಕ್ರೋಶ ಹೊರ ಹಾಕಿ ಹಲವು ಪ್ರಶ್ನೆಗಳನ್ನು ಮುಂದಿಟ್ಟರು.
‘ನಾನು ಪೆಟ್ರೋಲ್ ಡಿಸೇಲ್ ಬೆಲೆ ಕೇವಲ 1 ರೂಪಾಯಿ ಹೆಚ್ಚು ಮಾಡಿದರೆ ಮಂಗಳೂರಿನ ಮೀನುಗಾರರ ಮಹಿಳೆಯ ಬಳಿ ”ಕುಮಾರಸ್ವಾಮಿ ಇಸ್ ನಾಟ್ ಅವರ್ ಸಿಎಂ” ಅಂತ ಹೇಳಿಸುತ್ತೀರಿ. ಪ್ರಧಾನಿ ನರೇಂದ್ರ ಮೋದಿ 11 ಬಾರಿ ಬೆಲೆ ಏರಿಕೆ ಮಾಡಿದಾಗ ಚಕಾರ ಎತ್ತಿಲ್ಲ ಯಾಕೆ’ ಎಂದು ಪ್ರಶ್ನಿಸಿದರು.
‘ನಾನು ಜನಸಾಮಾನ್ಯರ ಪರವಾಗಿರುವ ಸಿಎಂ. ವಿದ್ಯುತ್ ಬಿಲ್ 10 ರೂಪಾಯಿ ಮಾತ್ರ ಏರಿಕೆ ಮಾಡಿದ್ದೇನೆ. ಬಡವರೂ ಕೂಡ 20 ರೂಪಾಯಿ ಕೊಟ್ಟು ಮಿನರಲ್ ವಾಟರ್ ಖರೀದಿಸುತ್ತಾರೆ’ ಎಂದು ತನ್ನ ಸರ್ಕಾರ ತೆರಿಗೆ ಹೆಚ್ಚಳದ ಕ್ರಮವನ್ನು ಸಮರ್ಥಿಸಿಕೊಂಡರು.
‘ನಾನು ಮುಖ್ಯಮಂತ್ರಿ ಆಗಿ ಕೇವಲ 2 ತಿಂಗಳು ಆಗಿದೆ. ಸಮಸ್ಯೆಗಳೆಲ್ಲಾ 70 ವರ್ಷಗಳಿಂದ ಇರಲಿಲ್ಲವೇ? ನಾನು ಬಡವರ ಪರ ಕಾಳಜಿಯುಳ್ಳ ಎಲ್ಲಾ ಜಿಲ್ಲೆಗಳ ಸಿಎಂ. ಟೀಕೆ ಮಾಡುವುದನ್ನ ನಿಲ್ಲಿಸಿ. ನನಗೆ ಸ್ವಲ್ಪ ಕಾಲಾವಕಾಶ ನೀಡಿ’ ಎಂದು ಮನವಿ ಮಾಡಿದರು.
‘ಮಾಧ್ಯಮಗಳು ಯಾವುದೇ ವಿಷಯವಿಲ್ಲದೆ ಸುದ್ದಿ ಮಾಡುತ್ತೀರಿ. ಜನರ ನಡುವೆ ಕಂದಕ ಸೃಷ್ಟಿಸುತ್ತೀರಿ ನಮ್ಮ ನಡುವೆ ಅನುಮಾನ ಮೂಡಿಸುತ್ತೀರಿ’ ಎಂದು ಕಿಡಿ ಕಾರಿದರು.
‘ನನ್ನ ಮೇಲೆ ನಿಮಗೆ ಕನಿಕರ ಇಲ್ಲವೆ ? ಯಾಕೆ ನನ್ನ ಮೇಲೆ ಇಷ್ಟು ಕೋಪ ? ಎಷ್ಟು ದಿನ ಅಂತ ನನ್ನ ಮೇಲೆ ಸುಳ್ಳು ಸುದ್ದಿ ಮಾಡುತೀರಿ? ಅಪಪ್ರಚಾರ ಮಾಡಬೇಡಿ’ ಎಂದು ತೀವ್ರ ಅಸಮಾಧಾನ ಹೊರ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
MUST WATCH
ಹೊಸ ಸೇರ್ಪಡೆ
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ