ಜಿಎಸ್‌ಟಿ ವಂಚನೆ ಪತ್ತೆಗೆ ಮೂರನೇ ಕಣ್ಣು


Team Udayavani, Jul 15, 2018, 6:00 AM IST

14bnp-5.gif

ಬೆಂಗಳೂರು: ವ್ಯಾಪಾರ- ವ್ಯವಹಾರಸ್ಥರು, ಡೀಲರ್‌ಗಳು ಜಿಎಸ್‌ಟಿಯಡಿ ಸುಳ್ಳು ಮಾಹಿತಿ ನೀಡಿ ವಂಚಿಸಲು ಸಾಧ್ಯವಿಲ್ಲ ಎಂದು ಜಿಎಸ್‌ಟಿ ಸಚಿವರ ತಂಡದ ಮುಖ್ಯಸ್ಥ ಸುಶೀಲ್‌ ಮೋದಿ ಹೇಳಿದ್ದಾರೆ.

ನಗರದಲ್ಲಿ ಶನಿವಾರ ಜಿಎಸ್‌ಟಿ ಸಚಿವರ ತಂಡದ 9ನೇ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಳ್ಳು ಮಾಹಿತಿ ನೀಡುವವರು ಇಂದಲ್ಲ, ನಾಳೆ ಸಿಕ್ಕಿ ಬೀಳುತ್ತಾರೆ. ಯಾರೊಬ್ಬರು ವಂಚಿಸಲು ಸಾಧ್ಯವಾಗದಂತೆ ಬಿಜಿನೆಸ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನ ಬಳಸಲಾಗುತ್ತಿದ್ದು, ಇದು ಮೂರನೇ ಕಣ್ಣಿನಂತೆ ಕಾರ್ಯ ನಿರ್ವಹಿಸುತ್ತದೆ ಎಂದು ತಿಳಿಸಿದರು.

ಸರಕು- ಸೇವೆಗಳ ಮಾರಾಟ ಸಂಬಂಧ ಸಲ್ಲಿಕೆಯಾಗುವ “ರಿಟರ್ನ್ಸ್- 1′ ಹಾಗೂ ಸಲ್ಲಿಸಿದ ರಿಟರ್ನ್ಸ್ಗಳ ವಿವರವಿರುವ “3ಬಿ’ ಮಾಹಿತಿಯನ್ನು ತಾಳೆ ಹಾಕಿ ವ್ಯತ್ಯಾಸವಿದೆಯೇ ಎಂಬುದನ್ನು ಗಮನಿಸಲು ಬಿಜಿನೆಸ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನ ಬಳಸಲಾಗುತ್ತಿದೆ. ಈ ತಂತ್ರಜ್ಞಾನದಡಿ 3ಬಿ, ಆರ್‌1 ವಿವರಗಳು ಯಾಂತ್ರಿಕವಾಗಿ ಪರಿಶೀಲನೆಗೆ ಒಳಗಾಗಲಿದ್ದು, ವ್ಯತ್ಯಾಸವಿದ್ದರೆ ತಕ್ಷಣ ಗೊತ್ತಾಗಲಿದೆ. ಬಿಜಿನೆಸ್‌ ಇಂಟೆಲಿಜೆನ್ಸ್‌ 360 ಡಿಗ್ರಿ ಕೋನದಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದರು.

ಏಪ್ರಿಲ್‌ನಿಂದ ಬಿಜಿನೆಸ್‌ ಇಂಟೆಲಿಜೆನ್ಸ್‌ ಬಳಸಲಾಗುತ್ತಿದ್ದು, ವ್ಯತ್ಯಯ ಕಂಡುಬಂದ ಪ್ರಕರಣಗಳಲ್ಲಿ ಡೀಲರ್‌ಗಳಿಗೆ ನೋಟಿಸ್‌ ನೀಡುವ ಕಾರ್ಯವನ್ನು ರಾಜ್ಯ ಸರ್ಕಾರಗಳು ಆರಂಭಿಸಿವೆ. ಇನ್ನೊಂದೆಡೆ ಡೀಲರ್‌ಗಳು ಸರಕುಗಳನ್ನು ಖರೀದಿಸುವಾಗ ಆ ಮಾರಾಟಗಾರರು ರಿಟರ್ನ್ಸ್ ಸಲ್ಲಿಸಿದ್ದಾರೆಯೇ ಇಲ್ಲವೇ ಎಂಬುದರ ಪತ್ತೆಗೂ ಬಿಗ್‌ ಡೇಟಾ ಅನಾಲಿಟಿಕ್ಸ್‌ ಬಳಸಲಾಗುತ್ತಿದೆ. ಇದರಿಂದ ಖರೀದಿ ಸಂದರ್ಭದಲ್ಲೇ ರಿಟರ್ನ್ಸ್ ಸಲ್ಲಿಸಿದ್ದಾರೆಯೇ ಇಲ್ಲವೇ ಎಂಬ ಎಚ್ಚರಿಕೆ ಸಂದೇಶ ರವಾನೆಯಾಗಲಿದೆ ಎಂದು ತಿಳಿಸಿದರು.

ಅ.1ರಿಂದ ಟಿಡಿಎಸ್‌ ಕಡಿತ
ಬೃಹತ್‌ ಕಾಮಗಾರಿ ಕೈಗೊಳ್ಳುವ ಗುತ್ತಿಗೆದಾರರಿಗೆ ಮಾಸಿಕವಾರು ಬಿಡುಗಡೆಯಾಗುವ ಬಿಲ್‌ ಮೊತ್ತದಿಂದ ಟಿಡಿಎಸ್‌ ಕಡಿತ ಪ್ರಕ್ರಿಯೆ ಅ.1ರಿಂದ ಆರಂಭವಾಗಲಿದೆ. ಆ ಹಿನ್ನೆಲೆಯಲ್ಲಿ ಸೂಕ್ತ ಸಾಫ್ಟ್ವೇರ್‌ ಸಿದ್ಧಪಡಿಸುವಂತೆ ಇನ್ಫೋಸಿಸ್‌ ಸಂಸ್ಥೆಗೆ ಸೂಚಿಸಲಾಗಿದೆ. ಪ್ರಧಾನವಾಗಿ ರಸ್ತೆ, ಮೂಲಸೌಕರ್ಯ ಇಲಾಖೆ, ಭಾರಿ ನೀರಾವರಿ ಇಲಾಖೆಗಳು ಪಾವತಿಸುವ ಮಾಸಿಕ ಬಿಲ್‌ ಮೊತ್ತದಲ್ಲಿ ಟಿಡಿಎಸ್‌ ಕಡಿತಕ್ಕೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ರಿಟರ್ನ್ಸ್ ಸಲ್ಲಿಕೆ ಪ್ರಕ್ರಿಯೆಯನ್ನು ಸಾಧ್ಯವಾದಷ್ಟು ಸರಳಗೊಳಿಸಲು ಆದ್ಯತೆ ನೀಡಲಾಗಿದೆ. ಸದ್ಯ ವ್ಯಾಪಾರ- ವ್ಯವಹಾರಸ್ಥರು ತಿಂಗಳಿಗೆ ಮೂರರಂತೆ ವರ್ಷಕ್ಕೆ 37 ರಿಟರ್ನ್ಸ್ಗಳನ್ನು ಸಲ್ಲಿಸಬೇಕಿದೆ. ಇದನ್ನು ಮಾಸಿಕ ಒಂದು ಹಾಗೂ ವಾರ್ಷಿಕ ಒಂದರಂತೆ ಒಟ್ಟು 13 ರಿಟರ್ನ್ಸ್ಗೆ ಸೀಮಿತಗೊಳಿಸಲಾಗುತ್ತಿದೆ. ರಿಟರ್ನ್ಸ್ ಸಲ್ಲಿಕೆ ಅರ್ಜಿ ಸಹ ವಾಸ್ತವಿಕವಾಗಿ ಒಂದು ಪುಟದಷ್ಟು ಮಾತ್ರ ಇರಲಿದೆ. ಜತೆಗೆ ಶೇ.80ರಷ್ಟು ವ್ಯವಹಾರವು ಡೀಲರ್‌ ಹಾಗೂ ಗ್ರಾಹಕರ ನಡುವಿನದ್ದಾಗಿದ್ದು, ಈ ರಿಟರ್ನ್ಸ್ ಅರ್ಜಿಯೂ ಮೂರು ಸಾಲಿನದ್ದಾಗಿರಲಿದೆ ಎಂದು ಮಾಹಿತಿ ನೀಡಿದರು.

ಹಲವು ಶಿಫಾರಸುಗಳ ಬಗ್ಗೆ ಚರ್ಚೆ
ಕಾನೂನು ಸಮಿತಿಯು ಹಲವು ತಿದ್ದುಪಡಿಗೆ ಪ್ರಸ್ತಾವ ಸಲ್ಲಿಸಿದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಭಾನುವಾರ (ಜು.15) ಕೊನೆಯ ದಿನವಾಗಿದ್ದು, ಈವರೆಗೆ 600ಕ್ಕೂ ಹೆಚ್ಚು ಸಲಹೆಗಳು ಸ್ವೀಕೃತವಾಗಿವೆ. ತಿದ್ದುಪಡಿಗಳ ಪೈಕಿ ಮುಖ್ಯವಾಗಿ ರಾಜಿ ತೆರಿಗೆ (ಕಾಂಪೋಸಿಷನ್‌ ಸ್ಕೀಮ್‌) ಅಡಿ ಪ್ರಸ್ತುತ ನಿಗದಿಪಡಿಸಿರುವ ವಹಿವಾಟು ಮಿತಿಯನ್ನು 1 ಕೋಟಿ ರೂ.ನಿಂದ 1.50 ಕೋಟಿ ರೂ.ಗೆ ವಿಸ್ತರಿಸುವುದು. ರಾಜಿ ತೆರಿಗೆ ಸೌಲಭ್ಯ ಸೇವಾ ಸಂಸ್ಥೆಗಳಿಗೂ ವಿಸ್ತರಣೆ. ರಿವರ್ಸ್‌ ಚಾರ್ಜ್‌ ಮೆಕಾನಿಸಂ ವ್ಯವಸ್ಥೆಯನ್ನು ಆಯ್ದ ಡೀಲರ್‌ಗಳಿಗಷ್ಟೇ ಅನ್ವಯಿಸುವ ತಿದ್ದುಪಡಿಗಳಿವೆ. ಇದೇ 21ರಂದು ನಡೆಯುವ ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಿದರು.

ಐಜಿಎಸ್‌ಟಿಯಡಿ ಮಾರ್ಚ್‌ 31ರವರೆಗೆ 1.80 ಲಕ್ಷ ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಮಾಸಿಕ 20 ಸಾವಿರ ಕೋಟಿ ರೂ. ಸೇರ್ಪಡೆಯಾಗುತ್ತಿದೆ. ಹಾಗಾಗಿ ಬಳಕೆಯಾಗದ ಐಜಿಎಸ್‌ಟಿ ಆದಾಯವನ್ನು ನಿಗದಿತ ಅನುಪಾತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಂಚಿಕೆ ಮಾಡಿಕೊಳ್ಳುವ ವ್ಯವಸ್ಥೆ ತರಲಾಗುವುದು ಎಂದು ತಿಳಿಸಿದರು. ರಾಜ್ಯ ಹಣಕಾಸು ಇಲಾಖೆ (ಆಯವ್ಯಯ ಮತ್ತು ಸಂಪನ್ಮೂಲ) ಕಾರ್ಯದರ್ಶಿ ರಿತ್ವಿಕ್‌ ಪಾಂಡೆ, ಜಿಎಸ್‌ಟಿಎನ್‌ ಸಿಇಒ ಪ್ರಕಾಶ್‌ ಕುಮಾರ್‌ ಉಪಸ್ಥಿತರಿದ್ದರು.

1.12 ಕೋಟಿ ಮಂದಿ ನೋಂದಣಿ
ದೇಶಾದ್ಯಂತ ಜಿಎಸ್‌ಟಿಯಡಿ 1.12 ಕೋಟಿ ವ್ಯಾಪಾರ- ವ್ಯವಹಾರಸ್ಥರು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 63.77 ಲಕ್ಷ ಮಂದಿ ಹಳೆಯ ವ್ಯಾಟ್‌ ಪದ್ಧತಿಯಿಂದ ವರ್ಗಾವಣೆಯಾಗಿದ್ದರೆ, 48.62 ಲಕ್ಷ ಮಂದಿ ಹೊಸದಾಗಿ ನೋಂದಣಿಯಾಗಿದ್ದಾರೆ. 2017-18ನೇ ಸಾಲಿನಲ್ಲಿ ಜಿಎಸ್‌ಟಿಯಡಿ ರಾಷ್ಟ್ರಾದ್ಯಂತ ಸರಾಸರಿ 89,885 ಕೋಟಿ ರೂ. ಸಂಗ್ರಹವಾಗುತ್ತಿದೆ. ಮೇ ತಿಂಗಳಲ್ಲಿ 94 ಸಾವಿರ ಕೋಟಿ ರೂ. ಸಂಗ್ರಹವಾಗಿದೆ. ಮಾಸಿಕ ಒಂದು ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹ ಗುರಿ ಇದೆ ಎಂದು ಜಿಎಸ್‌ಟಿ ಸಚಿವರ ತಂಡದ ಮುಖ್ಯಸ್ಥ ಸುಶೀಲ್‌ ಮೋದಿ ಹೇಳಿದರು.

ಜಿಎಸ್‌ಟಿ ಜಾರಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳಿಗೆ ಉಂಟಾಗುವ ನಷ್ಟವನ್ನು ಐದು ವರ್ಷಗಳವರೆಗೆ ಭರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ. ಆದರೆ ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಮೂರು ವರ್ಷಗಳಿಗೆ ಪರಿಹಾರ ಪಡೆಯುವ ಪ್ರಕ್ರಿಯೆ ಮುಕ್ತಾಯವಾಗಲಿದ್ದು, ರಾಜ್ಯ ಸರ್ಕಾರಗಳು ಹೆಚ್ಚು ತೆರಿಗೆ ಆದಾಯ ಗಳಿಸುವ ವಿಶ್ವಾಸವಿದೆ ಎಂದು ತಿಳಿಸಿದರು.

ಮಹಾರಾಷ್ಟ್ರ, ಉತ್ತರ ಪ್ರದೇಶದಲ್ಲಿ ರಾಜ್ಯದ ಗಡಿ ಭಾಗಳಲ್ಲಿ ಸೆನ್ಸಾರ್‌ ಸಾಧನಗಳನ್ನು ಅಳವಡಿಸಿವೆ. ಇದರಿಂದ ಸರಕು ಸಾಗಣೆ ವಾಹನ ಸೆನ್ಸಾರ್‌ ವ್ಯಾಪ್ತಿಯಲ್ಲಿ ಹಾದು ಹೋದರೆ “ಇ- ವೇ ರಸೀದಿ’ ಪಡೆದಿದೆಯೇ ಇಲ್ಲವೇ ಎಂಬುದು ತಕ್ಷಣ ಗೊತ್ತಾಗಲಿದೆ. ಶೇ. 90ರಷ್ಟು ವ್ಯಾಪಾರ-ವ್ಯವಹಾರಸ್ಥರು ಪ್ರಾಮಾಣಿಕವಾಗಿ ತೆರಿಗೆ ಪಾವತಿಸುತ್ತಿದ್ದಾರೆ. ತೆರಿಗೆ ವಂಚಿಸುವ ಶೇ.10ರಷ್ಟು ಮಂದಿ ಪತ್ತೆಗೆ ಹಾಗೂ ತೆರಿಗೆ ಸಂಗ್ರಹಕ್ಕೆ ಸುಧಾರಿತ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಲಾಗುವುದು.
– ಸುಶೀಲ್‌ ಮೋದಿ, ಜಿಎಸ್‌ಟಿ ಸಚಿವರ ತಂಡದ ಮುಖ್ಯಸ್ಥ

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.