ಕಿಕ್ಕೇರಿಗೆ ಬೆಳಕು ತಂದ ಆಲಿಯಾ ಭಟ್ ಉಡುಪು
Team Udayavani, Jul 15, 2018, 7:00 AM IST
ಮಂಡ್ಯ: ಜಿಲ್ಲೆಯ ಕಿಕ್ಕೇರಿ ಗ್ರಾಮದ ಮನೆಗಳಿಗೆ ಸೌರದೀಪ ಒದಗಿಸುವ ಮೂಲಕ ಬಾಲಿವುಡ್ ನಟಿ ಆಲಿಯಾ ಭಟ್ ಗಮನ ಸೆಳೆದಿದ್ದಾರೆ.
ಈ ವರ್ಷ ಆರಂಭಗೊಂಡ ಮಿವಾರ್ಡ್ರೋಬ್ ಈಸ್ ಸು ವಾರ್ಡ್ ರೋಬ್ ಸ್ಟೈಲಾðಕರ್ ನೈಟ್ ಮಾರ್ಕೆಟ್ ಅಭಿಯಾನದಲ್ಲಿ ಅಲಿಯಾಭಟ್ ತಮ್ಮ ವಿಶೇಷ ಉಡುಪೊಂದನ್ನು ಮಾರಾಟಕ್ಕೆ ಇಟ್ಟಿದ್ದರು. ಇದರಿಂದ ಬಂದ ಹಣವನ್ನು ಬೆಂಗಳೂರು ಮೂಲದ ಎಆರ್ಒಎಚ್ಒ ಸಂಸ್ಥೆಯೊಂದು ಆಯೋಜಿಸಿದ್ದ ಲಿಟರ್ ದ ಲೈಟರ್ ಕಾರ್ಯಕ್ರಮದಲ್ಲಿ ತೊಡಗಿಸಿದ್ದಾರೆ.
ಈ ಸಂಸ್ಥೆ ಪ್ಲಾಸ್ಟಿಕ್ ಬಾಟಲ್ಗಳನ್ನು ಮರು ಬಳಕೆ ಮಾಡಿ ವಿದ್ಯುತ್ ಇಲ್ಲದ ಗ್ರಾಮಗಳಿಗೆ ಸೋಲಾರ್ ದೀಪ ವಿತರಿಸುತ್ತಿದೆ. ಸಂಸ್ಥೆಯು ತಾನು ನಡೆಸುವ ಲಿಟರ್ ದ ಲೈಟರ್ ಕಾರ್ಯಕ್ರಮಕ್ಕೆ ಚಾರಿಟಿಯಾಗುವಂತೆ ಆಲಿಯಾ ಭಟ್ಗೆ ಆಹ್ವಾನಿಸಿತ್ತು. ಇದಕ್ಕೆ ಸಮ್ಮತಿಸಿದ ಆಲಿಯಾ, ಗ್ರಾಮದ 40 ಕುಟುಂಬಗಳಿಗೆ ಈ ಸಂಸ್ಥೆ ಸೋಲಾರ್ ದೀಪ ಒದಗಿಸಿದ್ದಾರೆ. ಭಾರತದಲ್ಲಿ ಇಂದಿಗೂ ಅನೇಕ ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲ. ಇಂಥ ಕುಟುಂಬಗಳ ಮನೆ ಬೆಳಗಲು ಇದು ಉತ್ತಮ ಯೋಜನೆಯಾಗಿದೆ. ಇದೊಂದು ಪರಿಸರ ಸ್ನೇಹಿ ಯೋಜನೆಯಾಗಿದ್ದು, ಕಿಕ್ಕೇರಿಯ 200 ಜನರಿಗೆ ಈ ಯೋಜನೆ ಫಲ ಲಭಿಸಲಿದೆ ಎಂದು ಆಲಿಯಾ ಭಟ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?