ನಾನು ವಿಷಕಂಠ; ನಾನು ಸಂತೋಷವಾಗಿಲ್ಲ ಎಂದು ಕಣ್ಣೀರುಗರೆದ ಸಿಎಂ 


Team Udayavani, Jul 15, 2018, 6:00 AM IST

14bnp-24.gif

ಬೆಂಗಳೂರು: ಮುಖ್ಯಮಂತ್ರಿಯಾಗಿ ನಾನು ಸಂತೋಷದಿಂದ ಇಲ್ಲ. ವಿಷಕಂಠನಂತೆ ನೋವು ನುಂಗುತ್ತಿದ್ದೇನೆ. ನಾನು ಸಿಎಂ ಕುರ್ಚಿಗೆ ಅಂಟಿಕೊಂಡು ಕುಳಿತಿಲ್ಲ. ಮನಸ್ಸು ಮಾಡಿದರೆ ಎರಡು ಗಂಟೆಯಲ್ಲೇ ಅಧಿಕಾರದಿಂದ ಕೆಳಗಿಳಿಯಬಲ್ಲೆ  ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ.

ಜೆಡಿಎಸ್‌ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಅಭಿನಂದನೆಯನ್ನು ನಯವಾಗಿ ತಿರಸ್ಕರಿಸಿದ ಅವರು, ನಾನು ಮುಖ್ಯಮಂತ್ರಿ ಆಗಿದ್ದಕ್ಕೆ ನಿಮಗೆ (ಕಾರ್ಯಕರ್ತರಿಗೆ) ಸಂತೋಷವಾಗಿರಬಹುದು. ಆದರೆ, ನಾನು ಸಂತೋಷದಿಂದ ಇಲ್ಲ ಎನ್ನುತ್ತಲೇ ಕೆಲಹೊತ್ತು ಗದ್ಗದಿತರಾದರು.

ಈ ವೇಳೆ ಎಚ್‌ಡಿಕೆ ಪರ ಜೈಕಾರ ಹಾಕಿದ ಕಾರ್ಯಕರ್ತರು ಬೇಜಾರು ಮಾಡಿಕೊಳ್ಳಬೇಡಣ್ಣ. ನಾವು ನಿಮ್ಮ ಜೊತೆಗಿದ್ದೀವಿ ಎಂದು ಧೈರ್ಯ ತುಂಬಿದರು. ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರೂ ತಮ್ಮ ಭಾಷಣದಲ್ಲಿ ಪುತ್ರ ಕುಮಾರಸ್ವಾಮಿಯವರಿಗೆ ಧೈರ್ಯ ತುಂಬಿದರು.

ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ಎರಡು ತಿಂಗಳಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಈ ಹೇಳಿಕೆ ನಾನಾ ರೀತಿಯ ರಾಜಕೀಯ ವಿಶ್ಲೇಷಣೆಗಳಿಗೆ ಎಡೆಮಾಡಿಕೊಟ್ಟಿದೆ.

ಜನಸೇರ್ತಾರೆ, ಮತಹಾಕಲ್ಲ:
ನಾನು ಮುಖ್ಯಮಂತ್ರಿ ಆಗಬೇಕು ಎಂದು ಬಯಸಿದ್ದು ಅಧಿಕಾರದಿಂದ ಮೆರೆಯಲಿಕ್ಕಲ್ಲ. ಈ ನಾಡಿನ ರೈತರ, ಬಡವರ, ಕೂಲಿಕಾರರ ಸಮಸ್ಯೆಗಳನ್ನು ಜಾತಿ ಮತ್ತು ಪಕ್ಷ ಭೇದ ಮರೆತು ಬಹೆಗರಿಸಬೇಕೆಂದು. ಜನಪರ ಕೆಲಸಗಳನ್ನು ಮಾಡಬೇಕೆನ್ನುವ ಆಶಯ ನನ್ನಲ್ಲಿದ್ದವು. ಆದರೆ, ನನ್ನ ಆಶಯಗಳನ್ನು ಅನುಷ್ಠಾನಕ್ಕೆ ತರಲು ನಾಡಿನ ಜನತೆ ನನ್ನಮೇಲೆ ವಿಶ್ವಾಸವಿಡುತ್ತಿಲ್ಲ. ನಾನು ಹೋದ ಕಡೆ ಜನ ಸೇರ್ತಾರೆ, ಸಂತೋಷ ಪಡ್ತಾರೆ. ದೌರ್ಭಾಗ್ಯವೆಂದರೆ, ನನ್ನ ಪಕ್ಷಕ್ಕೆ ಓಟು ಹಾಕುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಿಎಂ ಕುರ್ಚಿ ಹೋಗುತ್ತದೆ ಎಂದು ನಾನು ಕಣ್ಣೀರು ಹಾಕಿಲ್ಲ. ಜನ ವಿಶ್ವಾಸವಿಡುತ್ತಿಲ್ಲವಲ್ಲ ಎಂಬ ನೋವಿನಿಂದ ಕಣ್ಣೀರು ಹಾಕಿದ್ದೇನೆ. ನಾನು ಈ ನಾಡಿನ ಆರೂವರೆ ಕೋಟಿ ಜನತೆಯ ಮುಖ್ಯಮಂತ್ರಿ ಅಂದುಕೊಂಡಿದ್ದೇನೆ. ನಿಮಗೆಲ್ಲ ಅಣ್ಣನೋ, ತಮ್ಮನೋ ಸಿಎಂ ಆಗಿದ್ದಾನೆ ಎಂಬ ಸಂತೋಷ ಇರಬಹುದು. ಆದರೆ, ನಾನು ಸಂತೋಷದಿಂದಿಲ್ಲ. ವಿಷ ನುಂಗಿ ನಿಮಗೆ ಅಮೃತ ಕೊಡುತ್ತೇನೆ ಎಂದರು.

ಅನ್ನ ಕೊಡ್ತಿರೋ, ವಿಷ ಕೊಡ್ತಿರೋ:
ನನ್ನ ರೈತರ ಹಿತ ಕಾಪಾಡಲು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದೇನೆ. ನಾನು ರೈತರ ಬದುಕಿನ ಜೊತೆ ಚೆಲ್ಲಾಟ ಆಡುವುದಿಲ್ಲ. ಬಿಜೆಪಿಯವರು ಸಂಕುಚಿತ ಮನೋಭಾವ ಬಿಡಬೇಕು. ಸಾಲಮನ್ನಾ ಬಗ್ಗೆ ನಮ್ಮ ಪಕ್ಷದ ಶಾಸಕರೇ ಆಕ್ಷೇಪ ವ್ಯಕ್ತಪಡಿಸಿದ್ದರು. ಹಣ ಹೇಗೆ ಹೊಂದಿಸುತ್ತಾರೆ ಎಂದು ಅವರು ಯೋಚಿಸಿರಲಿಲ್ಲ. ದೇಶದ ಯಾವ ರಾಜ್ಯದಲ್ಲೂ ಚಾಲ್ತಿ ಸಾಲ ಮನ್ನಾದಂತಹ ದಿಟ್ಟ ನಿರ್ಧಾರ ತೆಗೆದುಕೊಂಡಿಲ್ಲ. ರೈತರ 1 ಲಕ್ಷ ರೂ.ವರೆಗಿನ ಚಾಲ್ತಿ ಸಾಲವನ್ನೂ ಮನ್ನಾ ಮಾಡಿದ್ದೇನೆ. ಇದಕ್ಕೂ ಸಮಾಧಾನ ಇಲ್ಲದಿದ್ದರೆ ನನಗೆ ಅನ್ನ ಕೊಡುತ್ತೀರೋ, ವಿಷ ಕೊಡುತ್ತೀರೊ ಎಂದು ರೈತರನ್ನು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಜೆಡಿಎಸ್‌ ಕಾರ್ಯಾಧ್ಯಕ್ಷ ಪಿಜಿಆರ್‌ ಸಿಂಧ್ಯಾ, ಸಿಎಂ ಕುಮಾರಸ್ವಾಮಿ ಕರ್ಣ ಅಲ್ಲ, ಧರ್ಮರಾಯ ಎಂದು ಬಣ್ಣಿಸಿದರು.

ಕಾಂಗ್ರೆಸ್‌ ಕಡೆಗಣಿಸುವಂತಿಲ್ಲ: ದೇವೇಗೌಡ
ಕುಮಾರಸ್ವಾಮಿ ಮುನ್ನಡೆಸುತ್ತಿರುವುದು ಸಮ್ಮಿಶ್ರ ಸರ್ಕಾರ. ನಮಗೆ ಬೆಂಬಲಿಸಿರುವ ಕಾಂಗ್ರೆಸ್‌ ಪಕ್ಷವನ್ನೂ ಕಡೆಗಣಿಸುವಂತಿಲ್ಲ. ಮತ್ತೂಂದು ಕಡೆ 104 ಸ್ಥಾನ ಹೊಂದಿರುವ ಬಲಿಷ್ಠ ವಿರೋಧಪಕ್ಷವನ್ನೂ ಎದುರಿಸಬೇಕಿದೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಹೇಳಿದರು. ಸಾಲ ಮನ್ನಾ ವಿಚಾರದಲ್ಲಿ ಕುಮಾರಸ್ವಾಮಿ ತೊಳಲಾಟ ನಾನು ನೋಡಿದ್ದೇನೆ. ಅವರ ಆರೋಗ್ಯದ ಬಗ್ಗೆ ನನಗೆ ಆತಂಕವಿದೆ. ಆದರೆ, ಎಲ್ಲವೂ ಸರಿ ಹೋಗುತ್ತದೆ. ಎದೆಗುಂದಬೇಕಿಲ್ಲ, ಧೈರ್ಯದಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಯವರಿಗೆ ಧೈರ್ಯ ತುಂಬಿದರು. 

ಏಳು ಕೆ.ಜಿ ಅಕ್ಕಿಗೆ ಹಣ ಎಲ್ಲಿಂದ ತರಲಿ
ಅನ್ನಭಾಗ್ಯ ಯೋಜನಯಡಿ 7 ಕೆ.ಜಿ ಅಕ್ಕಿ ಕೊಡಲು ನನಗೇನು ಅಭ್ಯಂತರವಿಲ್ಲ. ಈಗ 5 ಕೆ.ಜಿ. ಅಕ್ಕಿ ನೀಡಲಾಗುತ್ತಿದ್ದು, ಹೆಚ್ಚುವರಿ 2ಕೆ.ಜಿ. ಅಕ್ಕಿ ಕೊಡಬೇಕು. ಆದರೆ, ಈ 2 ಕೆ.ಜಿ ಅಕ್ಕಿ ನೀಡಬೇಕಾದರೆ ವರ್ಷಕ್ಕೆ 2,500 ಕೋಟಿ ರೂ. ಬೇಕು. ಇಷ್ಟೊಂದು ಹಣ ಎಲ್ಲಿಂದ ಹೊಂದಿಸಲಿ. ಸಿದ್ದರಾಮಯ್ಯ ಸರ್ಕಾರದಲ್ಲಿ 3 ಸಾವಿರ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಈಗ 2 ಕೆ.ಜಿ ಅಕ್ಕಿ ಹೆಚ್ಚಿಗೆ ಕೊಟ್ಟರೆ, 5 ಸಾವಿರ ಕೋಟಿ ರೂ. ಬೇಕಾಗುತ್ತದೆ. ಈ ಹೆಚ್ಚುವರಿ ಹಣ ಎಲ್ಲಿಂದ ತಂದು ಜೋಡಿಸಲಿ. ತೆರಿಗೆ ಹಾಕಿದ್ರೆ ಬೇಡ ಎಂದು ನೀವೇ ಹೇಳ್ತಿರಾ ಎಂದು ಕುಮಾರಸ್ವಾಮಿ ತಮ್ಮ ಅಳಲು ತೋಡಿಕೊಂಡರು.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.