ನಾನು ವಿಷಕಂಠ; ನಾನು ಸಂತೋಷವಾಗಿಲ್ಲ ಎಂದು ಕಣ್ಣೀರುಗರೆದ ಸಿಎಂ 


Team Udayavani, Jul 15, 2018, 6:00 AM IST

14bnp-24.gif

ಬೆಂಗಳೂರು: ಮುಖ್ಯಮಂತ್ರಿಯಾಗಿ ನಾನು ಸಂತೋಷದಿಂದ ಇಲ್ಲ. ವಿಷಕಂಠನಂತೆ ನೋವು ನುಂಗುತ್ತಿದ್ದೇನೆ. ನಾನು ಸಿಎಂ ಕುರ್ಚಿಗೆ ಅಂಟಿಕೊಂಡು ಕುಳಿತಿಲ್ಲ. ಮನಸ್ಸು ಮಾಡಿದರೆ ಎರಡು ಗಂಟೆಯಲ್ಲೇ ಅಧಿಕಾರದಿಂದ ಕೆಳಗಿಳಿಯಬಲ್ಲೆ  ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ.

ಜೆಡಿಎಸ್‌ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಅಭಿನಂದನೆಯನ್ನು ನಯವಾಗಿ ತಿರಸ್ಕರಿಸಿದ ಅವರು, ನಾನು ಮುಖ್ಯಮಂತ್ರಿ ಆಗಿದ್ದಕ್ಕೆ ನಿಮಗೆ (ಕಾರ್ಯಕರ್ತರಿಗೆ) ಸಂತೋಷವಾಗಿರಬಹುದು. ಆದರೆ, ನಾನು ಸಂತೋಷದಿಂದ ಇಲ್ಲ ಎನ್ನುತ್ತಲೇ ಕೆಲಹೊತ್ತು ಗದ್ಗದಿತರಾದರು.

ಈ ವೇಳೆ ಎಚ್‌ಡಿಕೆ ಪರ ಜೈಕಾರ ಹಾಕಿದ ಕಾರ್ಯಕರ್ತರು ಬೇಜಾರು ಮಾಡಿಕೊಳ್ಳಬೇಡಣ್ಣ. ನಾವು ನಿಮ್ಮ ಜೊತೆಗಿದ್ದೀವಿ ಎಂದು ಧೈರ್ಯ ತುಂಬಿದರು. ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರೂ ತಮ್ಮ ಭಾಷಣದಲ್ಲಿ ಪುತ್ರ ಕುಮಾರಸ್ವಾಮಿಯವರಿಗೆ ಧೈರ್ಯ ತುಂಬಿದರು.

ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ಎರಡು ತಿಂಗಳಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಈ ಹೇಳಿಕೆ ನಾನಾ ರೀತಿಯ ರಾಜಕೀಯ ವಿಶ್ಲೇಷಣೆಗಳಿಗೆ ಎಡೆಮಾಡಿಕೊಟ್ಟಿದೆ.

ಜನಸೇರ್ತಾರೆ, ಮತಹಾಕಲ್ಲ:
ನಾನು ಮುಖ್ಯಮಂತ್ರಿ ಆಗಬೇಕು ಎಂದು ಬಯಸಿದ್ದು ಅಧಿಕಾರದಿಂದ ಮೆರೆಯಲಿಕ್ಕಲ್ಲ. ಈ ನಾಡಿನ ರೈತರ, ಬಡವರ, ಕೂಲಿಕಾರರ ಸಮಸ್ಯೆಗಳನ್ನು ಜಾತಿ ಮತ್ತು ಪಕ್ಷ ಭೇದ ಮರೆತು ಬಹೆಗರಿಸಬೇಕೆಂದು. ಜನಪರ ಕೆಲಸಗಳನ್ನು ಮಾಡಬೇಕೆನ್ನುವ ಆಶಯ ನನ್ನಲ್ಲಿದ್ದವು. ಆದರೆ, ನನ್ನ ಆಶಯಗಳನ್ನು ಅನುಷ್ಠಾನಕ್ಕೆ ತರಲು ನಾಡಿನ ಜನತೆ ನನ್ನಮೇಲೆ ವಿಶ್ವಾಸವಿಡುತ್ತಿಲ್ಲ. ನಾನು ಹೋದ ಕಡೆ ಜನ ಸೇರ್ತಾರೆ, ಸಂತೋಷ ಪಡ್ತಾರೆ. ದೌರ್ಭಾಗ್ಯವೆಂದರೆ, ನನ್ನ ಪಕ್ಷಕ್ಕೆ ಓಟು ಹಾಕುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಿಎಂ ಕುರ್ಚಿ ಹೋಗುತ್ತದೆ ಎಂದು ನಾನು ಕಣ್ಣೀರು ಹಾಕಿಲ್ಲ. ಜನ ವಿಶ್ವಾಸವಿಡುತ್ತಿಲ್ಲವಲ್ಲ ಎಂಬ ನೋವಿನಿಂದ ಕಣ್ಣೀರು ಹಾಕಿದ್ದೇನೆ. ನಾನು ಈ ನಾಡಿನ ಆರೂವರೆ ಕೋಟಿ ಜನತೆಯ ಮುಖ್ಯಮಂತ್ರಿ ಅಂದುಕೊಂಡಿದ್ದೇನೆ. ನಿಮಗೆಲ್ಲ ಅಣ್ಣನೋ, ತಮ್ಮನೋ ಸಿಎಂ ಆಗಿದ್ದಾನೆ ಎಂಬ ಸಂತೋಷ ಇರಬಹುದು. ಆದರೆ, ನಾನು ಸಂತೋಷದಿಂದಿಲ್ಲ. ವಿಷ ನುಂಗಿ ನಿಮಗೆ ಅಮೃತ ಕೊಡುತ್ತೇನೆ ಎಂದರು.

ಅನ್ನ ಕೊಡ್ತಿರೋ, ವಿಷ ಕೊಡ್ತಿರೋ:
ನನ್ನ ರೈತರ ಹಿತ ಕಾಪಾಡಲು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದೇನೆ. ನಾನು ರೈತರ ಬದುಕಿನ ಜೊತೆ ಚೆಲ್ಲಾಟ ಆಡುವುದಿಲ್ಲ. ಬಿಜೆಪಿಯವರು ಸಂಕುಚಿತ ಮನೋಭಾವ ಬಿಡಬೇಕು. ಸಾಲಮನ್ನಾ ಬಗ್ಗೆ ನಮ್ಮ ಪಕ್ಷದ ಶಾಸಕರೇ ಆಕ್ಷೇಪ ವ್ಯಕ್ತಪಡಿಸಿದ್ದರು. ಹಣ ಹೇಗೆ ಹೊಂದಿಸುತ್ತಾರೆ ಎಂದು ಅವರು ಯೋಚಿಸಿರಲಿಲ್ಲ. ದೇಶದ ಯಾವ ರಾಜ್ಯದಲ್ಲೂ ಚಾಲ್ತಿ ಸಾಲ ಮನ್ನಾದಂತಹ ದಿಟ್ಟ ನಿರ್ಧಾರ ತೆಗೆದುಕೊಂಡಿಲ್ಲ. ರೈತರ 1 ಲಕ್ಷ ರೂ.ವರೆಗಿನ ಚಾಲ್ತಿ ಸಾಲವನ್ನೂ ಮನ್ನಾ ಮಾಡಿದ್ದೇನೆ. ಇದಕ್ಕೂ ಸಮಾಧಾನ ಇಲ್ಲದಿದ್ದರೆ ನನಗೆ ಅನ್ನ ಕೊಡುತ್ತೀರೋ, ವಿಷ ಕೊಡುತ್ತೀರೊ ಎಂದು ರೈತರನ್ನು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಜೆಡಿಎಸ್‌ ಕಾರ್ಯಾಧ್ಯಕ್ಷ ಪಿಜಿಆರ್‌ ಸಿಂಧ್ಯಾ, ಸಿಎಂ ಕುಮಾರಸ್ವಾಮಿ ಕರ್ಣ ಅಲ್ಲ, ಧರ್ಮರಾಯ ಎಂದು ಬಣ್ಣಿಸಿದರು.

ಕಾಂಗ್ರೆಸ್‌ ಕಡೆಗಣಿಸುವಂತಿಲ್ಲ: ದೇವೇಗೌಡ
ಕುಮಾರಸ್ವಾಮಿ ಮುನ್ನಡೆಸುತ್ತಿರುವುದು ಸಮ್ಮಿಶ್ರ ಸರ್ಕಾರ. ನಮಗೆ ಬೆಂಬಲಿಸಿರುವ ಕಾಂಗ್ರೆಸ್‌ ಪಕ್ಷವನ್ನೂ ಕಡೆಗಣಿಸುವಂತಿಲ್ಲ. ಮತ್ತೂಂದು ಕಡೆ 104 ಸ್ಥಾನ ಹೊಂದಿರುವ ಬಲಿಷ್ಠ ವಿರೋಧಪಕ್ಷವನ್ನೂ ಎದುರಿಸಬೇಕಿದೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಹೇಳಿದರು. ಸಾಲ ಮನ್ನಾ ವಿಚಾರದಲ್ಲಿ ಕುಮಾರಸ್ವಾಮಿ ತೊಳಲಾಟ ನಾನು ನೋಡಿದ್ದೇನೆ. ಅವರ ಆರೋಗ್ಯದ ಬಗ್ಗೆ ನನಗೆ ಆತಂಕವಿದೆ. ಆದರೆ, ಎಲ್ಲವೂ ಸರಿ ಹೋಗುತ್ತದೆ. ಎದೆಗುಂದಬೇಕಿಲ್ಲ, ಧೈರ್ಯದಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಯವರಿಗೆ ಧೈರ್ಯ ತುಂಬಿದರು. 

ಏಳು ಕೆ.ಜಿ ಅಕ್ಕಿಗೆ ಹಣ ಎಲ್ಲಿಂದ ತರಲಿ
ಅನ್ನಭಾಗ್ಯ ಯೋಜನಯಡಿ 7 ಕೆ.ಜಿ ಅಕ್ಕಿ ಕೊಡಲು ನನಗೇನು ಅಭ್ಯಂತರವಿಲ್ಲ. ಈಗ 5 ಕೆ.ಜಿ. ಅಕ್ಕಿ ನೀಡಲಾಗುತ್ತಿದ್ದು, ಹೆಚ್ಚುವರಿ 2ಕೆ.ಜಿ. ಅಕ್ಕಿ ಕೊಡಬೇಕು. ಆದರೆ, ಈ 2 ಕೆ.ಜಿ ಅಕ್ಕಿ ನೀಡಬೇಕಾದರೆ ವರ್ಷಕ್ಕೆ 2,500 ಕೋಟಿ ರೂ. ಬೇಕು. ಇಷ್ಟೊಂದು ಹಣ ಎಲ್ಲಿಂದ ಹೊಂದಿಸಲಿ. ಸಿದ್ದರಾಮಯ್ಯ ಸರ್ಕಾರದಲ್ಲಿ 3 ಸಾವಿರ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಈಗ 2 ಕೆ.ಜಿ ಅಕ್ಕಿ ಹೆಚ್ಚಿಗೆ ಕೊಟ್ಟರೆ, 5 ಸಾವಿರ ಕೋಟಿ ರೂ. ಬೇಕಾಗುತ್ತದೆ. ಈ ಹೆಚ್ಚುವರಿ ಹಣ ಎಲ್ಲಿಂದ ತಂದು ಜೋಡಿಸಲಿ. ತೆರಿಗೆ ಹಾಕಿದ್ರೆ ಬೇಡ ಎಂದು ನೀವೇ ಹೇಳ್ತಿರಾ ಎಂದು ಕುಮಾರಸ್ವಾಮಿ ತಮ್ಮ ಅಳಲು ತೋಡಿಕೊಂಡರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.