ಕಣ್ಣೀರಿಗೆ ಕಾಂಗ್ರೆಸ್ ನಾಯಕರು ಕಾರಣ
Team Udayavani, Jul 18, 2018, 6:05 AM IST
ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಕಣ್ಣೀರು ಹಾಕಲು ಕೆಲವು ಕಾಂಗ್ರೆಸ್ ನಾಯಕರೇ ಕಾರಣವೆಂದು ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ತೀರ್ಮಾನದಂತೆ ಮೈತ್ರಿ ಸರ್ಕಾರ ರಚನೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಅವರಂತಹ ನಾಯಕರಿಗೆ ಮಾತ್ರ ಮೈತ್ರಿ ಸರ್ಕಾರ ಮುಂದುವರಿಯುವುದು ಬೇಕಾಗಿದೆ. ಕೆಲವು ಕಾಂಗ್ರೆಸ್ ನಾಯಕರಿಗೆ ಸಮ್ಮಿಶ್ರ ಸರ್ಕಾರ ಮುಂದುವರಿಯುವುದು ಬೇಕಿಲ್ಲ ಎಂದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪಿಸಿದರು.
ರಾಜ್ಯದಲ್ಲಿ ಜೆಡಿಎಸ್, ಕಾಂಗ್ರೆಸ್ ಹೊಂದಾಣಿಕೆಯಿಂದ ಮುಂದುವರಿದರೆ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಸಾಧ್ಯವಾಗುತ್ತದೆ ಎಂದು ಕೋಳಿವಾಡ ಅಭಿಪ್ರಾಯಪಟ್ಟರು. ಕೋಳಿವಾಡ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಅದು ಅವರ ವೈಯಕ್ತಿಕ ಅಭಿಪ್ರಾಯ.ಮೈತ್ರಿ ಸರ್ಕಾರ ಅಂದ ಮೇಲೆ ಸಣ್ಣ ಪುಟ್ಟ ಸಮಸ್ಯೆಗಳು ಇರುತ್ತವೆ. ಎಲ್ಲ
ಸಮಸ್ಯೆಗಳನ್ನೂ ಬಗೆಹರಿಸುತ್ತೇವೆ. ನಾನೂ ಮುಖ್ಯಮಂತ್ರಿ ಕುಮಾರಸ್ವಾಮಿ ಜತೆ ಮಾತನಾಡಿದ್ದೇನೆ. ಭಾವುಕರಾಗಿ ಮಾತನಾಡಿರುವುದಾಗಿ ಹೇಳಿದ್ದಾರೆ. ಅವರು ಕಾಂಗ್ರೆಸ್ನ ಯಾವ ನಾಯಕರ ವಿರುದಟಛಿವೂ ಮಾತನಾಡಿಲ್ಲ ಎಂದು ಸಮಜಾಯಿಷಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ