ಕಣ್ಣೀರಿಗೆ ಕಾಂಗ್ರೆಸ್ ನಾಯಕರು ಕಾರಣ
Team Udayavani, Jul 18, 2018, 6:05 AM IST
ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಕಣ್ಣೀರು ಹಾಕಲು ಕೆಲವು ಕಾಂಗ್ರೆಸ್ ನಾಯಕರೇ ಕಾರಣವೆಂದು ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ತೀರ್ಮಾನದಂತೆ ಮೈತ್ರಿ ಸರ್ಕಾರ ರಚನೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಅವರಂತಹ ನಾಯಕರಿಗೆ ಮಾತ್ರ ಮೈತ್ರಿ ಸರ್ಕಾರ ಮುಂದುವರಿಯುವುದು ಬೇಕಾಗಿದೆ. ಕೆಲವು ಕಾಂಗ್ರೆಸ್ ನಾಯಕರಿಗೆ ಸಮ್ಮಿಶ್ರ ಸರ್ಕಾರ ಮುಂದುವರಿಯುವುದು ಬೇಕಿಲ್ಲ ಎಂದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪಿಸಿದರು.
ರಾಜ್ಯದಲ್ಲಿ ಜೆಡಿಎಸ್, ಕಾಂಗ್ರೆಸ್ ಹೊಂದಾಣಿಕೆಯಿಂದ ಮುಂದುವರಿದರೆ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಸಾಧ್ಯವಾಗುತ್ತದೆ ಎಂದು ಕೋಳಿವಾಡ ಅಭಿಪ್ರಾಯಪಟ್ಟರು. ಕೋಳಿವಾಡ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಅದು ಅವರ ವೈಯಕ್ತಿಕ ಅಭಿಪ್ರಾಯ.ಮೈತ್ರಿ ಸರ್ಕಾರ ಅಂದ ಮೇಲೆ ಸಣ್ಣ ಪುಟ್ಟ ಸಮಸ್ಯೆಗಳು ಇರುತ್ತವೆ. ಎಲ್ಲ
ಸಮಸ್ಯೆಗಳನ್ನೂ ಬಗೆಹರಿಸುತ್ತೇವೆ. ನಾನೂ ಮುಖ್ಯಮಂತ್ರಿ ಕುಮಾರಸ್ವಾಮಿ ಜತೆ ಮಾತನಾಡಿದ್ದೇನೆ. ಭಾವುಕರಾಗಿ ಮಾತನಾಡಿರುವುದಾಗಿ ಹೇಳಿದ್ದಾರೆ. ಅವರು ಕಾಂಗ್ರೆಸ್ನ ಯಾವ ನಾಯಕರ ವಿರುದಟಛಿವೂ ಮಾತನಾಡಿಲ್ಲ ಎಂದು ಸಮಜಾಯಿಷಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ