ಅಭ್ಯರ್ಥಿಗಳ ಚುನಾವಣಾ ಖರ್ಚು ಕೆಲ ಲಕ್ಷ ಮಾತ್ರ!


Team Udayavani, Jul 17, 2018, 6:05 AM IST

cost.jpg

ಬೆಂಗಳೂರು: ವಿಧಾನಸಭೆ ಚುನಾವಣೆ ಗೆಲ್ಲಬೇಕಾದರೆ ಕೋಟಿ ಕೋಟಿ ರೂ.ವೆಚ್ಚ ಮಾಡಬೇಕು ಎಂಬುದು ತಿಳಿದ ಸಂಗತಿ. ಇತ್ತೀಚಿಗಂತೂ ಯಾರು ಹೆಚ್ಚುವೆಚ್ಚ ಮಾಡುತ್ತಾರೋ ಅವರೇ ಗೆಲ್ಲುತ್ತಾರೆ. ಆದರೆ, ಇವೆಲ್ಲವೂ ಅನಧಿಕೃತ.

ಅಧಿಕೃತವಾಗಿ ವೆಚ್ಚ ಮಾಡುವುದು ಕೆಲವೇ ಲಕ್ಷ ಮಾತ್ರ. ಇತ್ತೀಚೆಗೆ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿದವರೆಲ್ಲ ವೆಚ್ಚ ಮಾಡಿದ್ದು ಕೆಲವೇ ಲಕ್ಷ ಮಾತ್ರ ಎಂಬ ಮಾಹಿತಿ ಉದಯವಾಣಿಗೆ ದೊರಕಿದೆ. ಅದರಲ್ಲೂ ಅತಿ ಹೆಚ್ಚು ವೆಚ್ಚ ಮಾಡಿರುವುದು ಮಂಗಳೂರು ನಗರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಾಜಿ ಶಾಸಕ ಜೆ.ಆರ್‌. ಲೋಬೋ. ಅವರ ಒಟ್ಟಾರೆ ಚುನಾವಣಾ ವೆಚ್ಚ 27.27 ಲಕ್ಷ ರೂ. ಮಾತ್ರ. ಅತಿ ಕಡಿಮೆ ವೆಚ್ಚ ಮಾಡಿರುವುದು ಶಿರಹಟ್ಟಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅಮೃತ್‌ ರತ್ನಾಕರ ಏಣಿ. ಅವರ ವೆಚ್ಚ ಕೇವಲ 500 ರೂ. ಆಯೋಗ ಒಬ್ಬ ಅಭ್ಯರ್ಥಿಗೆ ನಿಗದಿಪಡಿಸಿರುವ ಗರಿಷ್ಠ ಚುನಾವಣಾ ವೆಚ್ಚ 28 ಲಕ್ಷ ರೂ. ಮಾತ್ರ.

ಇದರ ಗಡಿಯಲ್ಲೇ ಹೊಂದಾಣಿಕೆ ಮಾಡಿ ಲೆಕ್ಕ ತೋರಿಸಬೇಕು. 220 ಕ್ಷೇತ್ರಗಳ ಅಭ್ಯರ್ಥಿಗಳ ಲೆಕ್ಕ: 224 ವಿಧಾನಸಭಾ ಕ್ಷೇತ್ರಗಳ ಪೈಕಿ 220 ಕ್ಷೇತ್ರಗಳ ಅಭ್ಯರ್ಥಿಗಳು ಮಾಡಿರುವ ವೆಚ್ಚ ಲಭ್ಯವಾಗಿದ್ದು, ಚುನಾವಣೆಗೆ ಸ್ಪರ್ಧಿಸಿದ್ದ 145 ಆಭ್ಯರ್ಥಿಗಳು 15ರಿಂದ 20 ಲಕ್ಷದವರೆಗೆ ಖರ್ಚು ಮಾಡಿರುವ ವಿವರ ಕೊಟ್ಟಿದ್ದರೆ, 24 ಅಭ್ಯರ್ಥಿಗಳು 20ರಿಂದ 27 ಲಕ್ಷ ರೂ. ವರೆಗೆ ಖರ್ಚು ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಶೇಷವೆಂದರೆ, 82ಕ್ಕೂ ಹೆಚ್ಚು ಅಭ್ಯರ್ಥಿಗಳು ಚುನಾವಣೆಗೆ ಖರ್ಚು ಮಾಡಿದ್ದು ಬರೀ 5ಸಾವಿರ ರೂ. ಮಾತ್ರ. ಉಳಿದ ಅಭ್ಯರ್ಥಿಗಳು 10 ಸಾವಿರದಿಂದ 14 ಲಕ್ಷದವರೆಗೆ ಖರ್ಚಿನ ವಿವರ ನೀಡಿದ್ದಾರೆ.

ಘಟಾನುಘಟಿಗಳು ಖರ್ಚು ಮಾಡಿದ್ದು: ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಎಚ್‌.ಡಿ.ಕುಮಾರಸ್ವಾಮಿ ರಾಮನಗರ ಕ್ಷೇತ್ರದಲ್ಲಿ 9.51 ಲಕ್ಷ ರೂ. ಮತ್ತು ಚನ್ನಪ್ಪಟ್ಟಣದಲ್ಲಿ 10.22 ಲಕ್ಷ ರೂ. ಖರ್ಚು ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿಯಲ್ಲಿ 17.51 ಲಕ್ಷ ರೂ. ಮತ್ತು ಬದಾಮಿಯಲ್ಲಿ 19.60 ಲಕ್ಷ ರೂ., ಬಿ.ಶ್ರೀರಾಮುಲು ಬದಾಮಿಯಲ್ಲಿ 20 ಲಕ್ಷ ರೂ. ಮತ್ತು ಮೊಳಕಾಲ್ಮೂರಿನಲ್ಲಿ 19.12 ಲಕ್ಷ ರೂ. ಖರ್ಚು ತೋರಿಸಿದ್ದಾರೆ.

ಉಳಿದಂತೆ ಮಾಜಿ ಸಿಎಂ ಯಡಿಯೂರಪ್ಪ 18.14 ಲಕ್ಷ ರೂ., ಜಗದೀಶ್‌ ಶೆಟ್ಟರ್‌ 16.56 ಲಕ್ಷ ರೂ., ಕೆ.ಎಸ್‌.ಈಶ್ವರಪ್ಪ 17.80 ಲಕ್ಷ ರೂ., ಡಿ.ಕೆ. ಶಿವಕುಮಾರ್‌ 12.96 ಲಕ್ಷ ರೂ., ಎಚ್‌.ಡಿ.ರೇವಣ್ಣ 9.90 ಲಕ್ಷ ರೂ., ಡಾ.ಜಿ.ಪರಮೇಶ್ವರ್‌ 8.68 ಲಕ್ಷ ರೂ. ಖರ್ಚು ಮಾಡಿದ್ದಾರೆ.

82 ಅಭ್ಯರ್ಥಿಗಳು ಲೆಕ್ಕ ಕೊಟ್ಟಿಲ್ಲ: ಚುನಾವಣಾ ಆಯೋಗದ ಈಗಿನ ಮಾಹಿತಿ ಪ್ರಕಾರ ಒಟ್ಟು 82 ಅಭ್ಯರ್ಥಿಗಳು ಚುನಾವಣಾ ವೆಚ್ಚ ಸಲ್ಲಿಸಿಲ್ಲ.

– ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.