ರೈತರ ದಯಾಮರಣ ಮನವಿಗೆ ಸ್ವಾಮೀಜಿಗಳ ಸಾರಥ್ಯ
Team Udayavani, Jul 17, 2018, 6:25 AM IST
ನರಗುಂದ: ಜೀವ ಜಲಕ್ಕಾಗಿ 3 ವರ್ಷಗಳಿಂದ ಹೋರಾಡುತ್ತಿರುವ ಮಹದಾಯಿ ಹೋರಾಟಗಾರರು ಇಂದು ಮಾಡು ಇಲ್ಲವೇ ಮಡಿಗೆ ಸಿದ್ಧರಾಗಿದ್ದಾರೆ. ದಯಾಮರಣಕ್ಕೆ ಅನುಮತಿ ಕೋರಿ ನೂರಾರು ರೈತರು, ರೈತ ಮಹಿಳೆಯರು ರಾಷ್ಟ್ರಪತಿಗಳಿಗೆ ಅರ್ಜಿ ರವಾನಿಸಿದ್ದಾರೆ.
ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಸುದೀರ್ಘ ಸತ್ಯಾಗ್ರಹ 3 ವರ್ಷ ಪೂರೈಸಿ 1097ನೇ ದಿನಕ್ಕೆ ಕಾಲಿಟ್ಟಿದ್ದು, ಸೋಮವಾರ ಮಾಡು ಇಲ್ಲವೇ ಮಡಿ ಹೋರಾಟಕ್ಕೆ ವೇದಿಕೆ ಸಾಕ್ಷಿಯಾಯಿತು.
ಏ.30ರಂದು 223 ರೈತರು ದೆಹಲಿ ಚಲೋ ಮೂಲಕ ದಯಾಮರಣಕ್ಕೆ ಅನುಮತಿ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದರು. ಜು.12ರಂದು ಸರ್ವೋಚ್ಚ ನ್ಯಾಯಾಲಯಕ್ಕೆ ಪಿಐಎಲ್ ಹಾಕಿದ್ದು, ಭಾನುವಾರ ಸಮನ್ವಯ ಸಮಿತಿ ಸಭೆ ನಿರ್ಣಯದಂತೆ ಸೋಮವಾರ ಮಹದಾಯಿ ವೇದಿಕೆಯಲ್ಲಿ ಮಠಾಧೀಶರು, ನೂರಾರು ರೈತರು ದಯಾಮರಣಕ್ಕೆ ಅನುಮತಿ ಕೋರುವ ಅರ್ಜಿಗೆ ಸ್ವಯಂ ಪ್ರೇರಣೆಯಿಂದ ರುಜು ಹಾಕಿದರು. ವೇದಿಕೆ ಸಭೆ ಬಳಿಕ ನೆರೆದಿದ್ದ ಮಠಾಧೀಶರ ನೇತೃತ್ವದಲ್ಲಿ ಅಂಚೆ ಕಚೇರಿಗೆ ತೆರಳಿದ ರೈತರು, ರೈತ ಮಹಿಳೆಯರು ಅಂಚೆ ಡಬ್ಬಿಗೆ ದಯಾಮರಣ ಅರ್ಜಿ ಹಾಕುವ ಮೂಲಕ ರಾಷ್ಟ್ರಪತಿಗಳಿಗೆ ರವಾನಿಸಿದರು. ಮಾಹಿತಿ ಪ್ರಕಾರ 683 ಅರ್ಜಿ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
– ಸಿದ್ಧಲಿಂಗಯ್ಯ ಮಣ್ಣೂರಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ
Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ
Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ