ರಾ.ಹೆ.ಕಾಮಗಾರಿ ಪೂರ್ಣಗೊಳಿಸಲು ಕ್ರಮ: ನಿತಿನ್ ಗಡ್ಕರಿ
Team Udayavani, Jul 18, 2018, 6:00 AM IST
ಬೆಂಗಳೂರು: ರಾಜ್ಯದಲ್ಲಿ ಚಾಲ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದಾರೆ. ದೆಹಲಿಯಲ್ಲಿ ತಮ್ಮನ್ನು ಭೇಟಿಯಾದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರೊಂದಿಗೆ ಸಮಾಲೋಚನೆ ನಡೆಸಿದ ಕೇಂದ್ರ ಸಚಿವರು, ರಸ್ತೆ ಕಾಮಗಾರಿಗಳು ಪೂರ್ಣಗೊಂಡಿರುವುದನ್ನು ಪುಷ್ಟೀಕರಿಸುವ ಬಳಕೆ ಪ್ರಮಾಣಪತ್ರ ಸಲ್ಲಿಸಿದ ತಕ್ಷಣವೇ ಕೇಂದ್ರದಿಂದ ರಾಜ್ಯದ ಪಾಲಿನ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದರು.
ಕಳೆದ ಜೂ.18ರಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮನ್ನು ಭೇಟಿಯಾಗಿದ್ದ ವೇಳೆ, ರಾಜ್ಯದಲ್ಲಿನ ವಿವಿಧ ಹೆದ್ದಾರಿ ಕಾಮಗಾರಿಗಳಿಗೆ ಅಡಚಣೆ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಿದ್ದ ನಿತಿನ್ ಗಡ್ಕರಿ, ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ ಸಮಸ್ಯೆ ಬಗೆಹರಿಸುವಂತೆ ಕೋರಿದ್ದರು. ಅದರಂತೆ ಮಂಗಳವಾರ ಸಮನ್ವಯತೆ ಸಾಧಿಸಲು ರಾಜ್ಯ ಸರ್ಕಾರ ಕೈಗೊಂಡ ಕ್ರಮ
ಗಳನ್ನು ವಿವರಿಸಿದರು.
ಚನ್ನರಾಯಪಟ್ಟಣದಿಂದ ಹೊಳೇನರಸೀಪುರ -ಅರಕಲಗೂಡು-ಕೊಡ್ಲಿಪೇಟೆ ಮಾರ್ಗವಾಗಿ ಮಡಿಕೇರಿ ಸೇರುವ ರಸ್ತೆ, ಬಿಳಿಕೆರೆ-ಕೆ.ಆರ್. ನಗರ- ಹೊಳೆನರಸೀಪುರ- ಹಾಸನ ಮಾರ್ಗವಾಗಿ ಸಾಗುವ ಬೇಲೂರು ರಸ್ತೆ ಸೇರಿ ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿರುವ
ರಸ್ತೆಗಳ ಪ್ರಗತಿ ಕುರಿತಂತೆ ಮಾಹಿತಿ ನೀಡಿದ ಮುಖ್ಯಮಂತ್ರಿಗಳು, ಬೆಂಗಳೂರು-ಮೈಸೂರು ಹೆದ್ದಾರಿ ವಿಸ್ತರಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ
ಮನವಿ ಮಾಡಿದರು.
ಅಲ್ಲದೆ, ಕೇಂದ್ರ ರಸ್ತೆ ನಿಧಿಯ (ಸಿಆರ್ಎಫ್) ಅನುದಾನದಿಂದ ರಾಜ್ಯದಲ್ಲಿ ಹಲವಾರು ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗಿದೆ. ಆದ್ದರಿಂದ ಕೇಂದ್ರದಿಂದ ರಾಜ್ಯದ ಪಾಲಿನ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಕೋರಿದಾಗ,
ಕಾಮಗಾರಿ ಪೂರ್ಣಗೊಂಡಿರುವುದನ್ನು ಪುಷ್ಟೀಕರಿಸುವ ಬಳಕೆ ಪ್ರಮಾಣಪತ್ರ ಸಲ್ಲಿಸಿದ ತಕ್ಷಣವೇ ಅನುದಾನ ಬಿಡುಗಡೆ ಮಾಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ.
ಎನ್ಎಚ್ 212ರ ಅರಣ್ಯದಲ್ಲಿ ಮೇಲ್ಸೇತುವೆ ನಿರ್ಮಾಣ?
ಕರ್ನಾಟಕ ಮತ್ತು ಕೇರಳವನ್ನು ಬೆಸೆಯುವ ರಾಷ್ಟ್ರೀಯ ಹೆದ್ದಾರಿ 212 ಮಾರ್ಗವು ವನ್ಯಜೀವಿ ಪ್ರದೇಶದಲ್ಲಿ ಹಾದುಹೋಗಿರುವುದರಿಂದ ರಸ್ತೆ ನಿರ್ಮಾಣ ವಿವಾದ ಸುಪ್ರೀಂಕೋರ್ಟ್ನಲ್ಲಿದೆ. ಈ ಮಾರ್ಗ ಮೈಸೂರು ಮೂಲಕ ಕೇರಳದ ಕೋಯಿಕ್ಕೋಡ್ ಸಂಪರ್ಕಿಸುತ್ತಿದ್ದು, ಮಾರ್ಗಮಧ್ಯೆ ಬಂಡೀಪುರ ರಾಷ್ಟ್ರೀಯ ಉದ್ಯಾನ ಬರುತ್ತದೆ. ಹೀಗಾಗಿ ಸುಮಾರು 5 ಕಿ.ಮೀ. ಮಾರ್ಗವನ್ನು ಮೇಲ್ಸೆತುವೆ ಹೆದ್ದಾರಿಯನ್ನಾಗಿಸಿ ಕೆಳಭಾಗದಲ್ಲಿ ಪ್ರಾಣಿಗಳಿಗೆ ಅಡಚಣೆ ಇಲ್ಲದಂತೆ ವಾಹನ ಸಂಚರಿಸಲು ಅನುಮಾಡಿಕೊಡಲು ಕೇಂದ್ರ ಸರ್ಕಾರ ಉತ್ಸುಕವಾಗಿದೆ. ಆದ್ದರಿಂದ ಎರಡೂ ರಾಜ್ಯಗಳು ಈ ಬಗ್ಗೆ ಚರ್ಚಿಸಿ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿ ವಿವಾದ ಇತ್ಯರ್ಥಪಡಿಸಿದರೆ ಮೇಲ್ಸೇತುವೆ ಮಾರ್ಗ ನಿರ್ಮಿಸಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಸಲಹೆಯನ್ನು ಸ್ವಾಗತಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಸಂಬಂಧಿಸಿದವರಿಗೆ ಈ ಕುರಿತು ನಿರ್ದೇಶನ ನೀಡುವುದಾಗಿ ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ