ಕಿಟ್ನಲ್ಲಿ ಐಫೋನ್ ಗಿಫ್ಟ್ ತಂದ ವಿವಾದ
Team Udayavani, Jul 18, 2018, 6:00 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ನವದೆಹಲಿಯಲ್ಲಿ ಬುಧವಾರ ಕರೆದಿರುವ ಸಭೆಗೆ ಆಗಮಿಸುವ ರಾಜ್ಯದ ಸಂಸದರಿಗೆ ಒಂದು ಲಕ್ಷ ರೂ. ಬೆಲೆ ಬಾಳುವ “ಐ ಫೋನ್’ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.
ರೈತರ ಸಾಲ ಮನ್ನಾ ಸೇರಿ ರಾಜ್ಯ ಆರ್ಥಿಕವಾಗಿ ಸಂಕಷ್ಟದಲ್ಲಿರುವಾಗ ಸಂಸದರಿಗೆ ಐ ಫೋನ್ “ಗಿಫ್ಟ್’ ನೀಡುವ ಔಚಿತ್ಯವಾದರೂ ಏನು ಎಂದು ಬಿಜೆಪಿ ಸಂಸದರು ಪ್ರಶ್ನಿಸಿದ್ದಾರೆ. ಐ ಫೋನ್ ವಿವಾದದ ಸ್ವರೂಪ ಪಡೆದ ಬೆನ್ನಲ್ಲೇ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ, ಐ ಫೋನ್ ಬಗ್ಗೆ ಮಾಹಿತಿ ಇಲ್ಲ. ನಮ್ಮ ಕಚೇರಿಯಿಂದ ಕೊಡಲು ನಾನಂತೂ ಸೂಚನೆ ಕೊಟ್ಟಿಲ್ಲ. ನನ್ನ ಗಮನಕ್ಕೂ ಬಂದಿಲ್ಲ. ಅಧಿಕೃತವಾಗಿ ಕೊಡಲಾಗಿ
ದೆಯೋ ಅಥವಾ ಅನಧಿಕೃತವಾಗಿ ಕೊಟ್ಟಿರುವುದೋ ಗೊತ್ತಿಲ್ಲ ಎಂದಿದ್ದಾರೆ.
ಈ ಮಧ್ಯೆ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ, “ಐ ಫೋನ್ ನಾನೇ ಕೊಟ್ಟಿದ್ದೇನೆ. ವೈಯಕ್ತಿಕವಾಗಿ ಹೃದಯ ಶ್ರೀಮಂತಿಕೆಯಿಂದ ಸಂಸದರಿಗೆ, ರಾಜ್ಯ ಸಭೆ ಸದಸ್ಯರಿಗೆ ಕೊಟ್ಟಿದ್ದೇನೆ. ಇದು ತಪ್ಪೇ? ಕಳೆದ ವರ್ಷವೂ ಕೊಟ್ಟಿದ್ದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಸಂಸದರಿಗೆ ತ್ವರಿತವಾಗಿ ಮಾಹಿತಿ ತಲುಪಲಿ ಎಂದು ತಲಾ 50 ಸಾವಿರ ರೂ. ವೆಚ್ಚದಲ್ಲಿ ಐ ಫೋನ್ ಮತ್ತು ಬ್ಯಾಗ್ ಉಡುಗೊರೆಯಾಗಿ ನೀಡಿದ್ದೇನೆ. ಒಳ್ಳೆಯ ಉದ್ದೇಶದಿಂದ ಈ ಕೆಲಸ ಮಾಡಿದ್ದೇನೆ. ಕೆಲವರು ಐ ಫೋನ್ ಹಿಂತಿರುಗಿಸಿದ್ದಾರೆ ಎಂದು ತಿಳಿಸಿದ್ದಾರೆ. ಗಿಫ್ಟ್ ಬೇಡವೆಂದ ಬಿಜೆಪಿ ಸಭೆಗೆ ಒಂದು ದಿನ ಮುನ್ನವೇ ಸಂಸದರು ಹಾಗೂ ರಾಜ್ಯಸಭೆ ಸದಸ್ಯರಿಗೆ ಚರ್ಚಿಸುವ ವಿಷಯಗಳ ಪಟ್ಟಿ ಹಾಗೂ ರಾಜ್ಯದ ಅಭಿವೃದ್ಧಿ ಯೋಜನೆಗಳ
ಮಾಹಿತಿಯುಳ್ಳ ಕಿಟ್ ನೀಡಲಾಗಿದೆ. ಅದರಲ್ಲಿ ಆ್ಯಪಲ್ ಐಫೋನ್ ಸಹ ಹಾಕಿ ಕೊಡಲಾಗಿದೆ. ಕೇಂದ್ರ ಸಚಿವ ಅನಂತಕುಮಾರ್ ಐ ಫೋನ್
ಪಡೆ ಯುವುದಿಲ್ಲ ಎಂದು ಹೇಳಿದ್ದಾರೆ. ಹಲವು ಬಿಜೆಪಿ ಸಂಸದರು ಇದೇ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ. ಬಿಜೆಪಿ ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್ ಅವರಂತೂ ನೇರವಾಗಿಯೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ಪತ್ರ ಬರೆದು ಐಫೋನ್ ಔಚಿತ್ಯವೇನು
ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
MUST WATCH
ಹೊಸ ಸೇರ್ಪಡೆ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ