ಉಚಿತ ಬಸ್ಪಾಸ್ಗೆ ಆಗ್ರಹಿಸಿ ಪ್ರತಿಭಟನೆ
Team Udayavani, Jul 19, 2018, 7:00 AM IST
ಬೆಂಗಳೂರು: ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ಬುಧವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಯಿತು.
ಬೆಂಗಳೂರಿನಲ್ಲಿ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ಪಾಸ್ ನೀಡುವುದಾಗಿ ಈ ಹಿಂದೆ ಬಜೆಟ್ನಲ್ಲಿ ಘೋಷಿಸಲಾಗಿತ್ತು. ಆದರೆ, ಶಾಲೆ-ಕಾಲೇಜುಗಳು ಆರಂಭಗೊಂಡು ಎರಡು ತಿಂಗಳಾದರೂ ಸರ್ಕಾರ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಕೂಡಲೇ ಉಚಿತ ಪಾಸ್ ಘೋಷಿಸುವ ಮೂಲಕ ಸರ್ಕಾರವು ನುಡಿದಂತೆ ನಡೆಯಬೇಕು. ಈಗಾಗಲೇ ಘೋಷಿಸಿದ ಉಚಿತ ಬಸ್ ಪಾಸ್ ಎದುರು ನೋಡುತ್ತಿದ್ದೇವೆ. ಒಂದೂವರೆ ತಿಂಗಳಿಂದ ಈ ಸಂಬಂಧ ನಿರಂತರ ಹೋರಾಟ ಮಾಡಲಾಗುತ್ತಿದೆ. ಆದರೆ, ಸರ್ಕಾರದಿಂದ ಪೂರಕ ಸ್ಪಂದನೆ ಸಿಗುತ್ತಿಲ್ಲ. ಇದೇ ಧೋರಣೆ ಮುಂದುವರಿದರೆ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಬಿವಿಪಿ ರಾಜ್ಯ ಘಟಕದ ಕಾರ್ಯದರ್ಶಿ ಹರ್ಷ ನಾರಾಯಣ ಮಾತನಾಡಿ, ಶಾಸಕರಿಗೆ ದುಬಾರಿ ಮೊತ್ತದ ಕಾರುಗಳನ್ನು ಖರೀದಿಸಲು, ಮೋಜು-ಮಸ್ತಿಗೆ ಸರ್ಕಾರದ ಬಳಿ ಹಣ ಇದೆ.ಆದರೆ, ಬಡ ವಿದ್ಯಾರ್ಥಿಗಳಿಗೆ ಪಾಸ್ ನೀಡಲು ಆರ್ಥಿಕ ಸಂಕಷ್ಟ ಎದುರಾಗುತ್ತದೆ. ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಮಂಡ್ಯದಲ್ಲಿ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು ಆವರಣದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ಸರ್ಕಾರದ ವಿರುದಟಛಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ, ಬೆಂಗಳೂರು- ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಚಿಕ್ಕಬಳ್ಳಾಪುರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ನೂರಾರು ವಿದ್ಯಾರ್ಥಿಗಳು ಬೃಹತ್ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸುವ ಮೂಲಕ ವಾಹನಕ್ಕೆ ಸಂಚಾರಕ್ಕೆ ಅಡ್ಡಿಪಡಿಸಿದರು. ಬಳಿಕ ನಗರದ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ತಾಲೂಕು ಕಚೇರಿಯ ಶಿರಸ್ತೇದಾರರಿಗೆ ಮನವಿ ಸಲ್ಲಿಸಿ, ಉಚಿತ ಬಸ್ ಪಾಸ್ಗೆ ಆಗ್ರಹಿಸಿದರು. ಇದೇ ವೇಳೆ, ಉಡುಪಿ,ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ಕಲಬುರಗಿ,ಬೀದರ್, ರಾಯಚೂರು, ಬೆಳಗಾವಿ ಸೇರಿ ರಾಜ್ಯದ ಇತರೆಡೆಯೂ ಪ್ರತಿಭಟನೆಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ